ಪ್ರಜ್ವಲ್ ರೇವಣ್ಣ, ಹೆಚ್. ಡಿ. ರೇವಣ್ಣ 
ರಾಜ್ಯ

ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸ್: ಇಂದು ಸಂತ್ರಸ್ತೆಯರ ಜೊತೆಗೆ ಸ್ಥಳ ಮಹಜರು ಸಾಧ್ಯತೆ

ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣದ ತನಿಖೆಯನ್ನು ಎಸ್ ಐಟಿ ಚುರುಕುಗೊಳಿಸಿದ್ದು, ಇಂದು ಸಂತ್ರಸ್ತೆಯರ ಜೊತೆಗೆ ಸ್ಥಳ ಮಹಜರು ಮಾಡುವ ಸಾಧ್ಯತೆಯಿದೆ.

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣದ ತನಿಖೆಯನ್ನು ಎಸ್ ಐಟಿ ಚುರುಕುಗೊಳಿಸಿದ್ದು, ಇಂದು ಸಂತ್ರಸ್ತೆಯರ ಜೊತೆಗೆ ಸ್ಥಳ ಮಹಜರು ಮಾಡುವ ಸಾಧ್ಯತೆಯಿದೆ.

ಹಾಸನದ ಆರ್ ಸಿ ರಸ್ತೆಯಲ್ಲಿರುವ ಪ್ರಜ್ವಲ್ ರೇವಣ್ಣ ಅವರ ನಿವಾಸದಲ್ಲಿ ಅತ್ಯಾಚಾರ ನಡೆದಿದೆ ಎಂದು ಸಂತ್ರಸ್ತೆಯರು ಸೆಕ್ಷನ್ 164 ಅಡಿಯಲ್ಲಿ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ನಿನ್ನೆ ಹಾಸನದ ಮೂರು ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದ ಎಸ್ ಐಟಿ ತಂಡ ಇಂದು, ರೇವಣ್ಣ ನಿವಾಸದಲ್ಲಿ ಸಂತ್ರಸ್ತೆಯರ ಜೊತೆಗೆ ಮಹಜರು ನಡೆಸಿ, ಸಾಕ್ಷ್ಯ ಕಲೆಹಾಕಲಿದೆ. ಎಸ್ ಐಟಿ ತನಿಖೆ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ನಿವಾಸದ ಆವರಣ ನಿಷೇಧಿಸಿ ಗೇಟ್ ಗೆ ಪೊಲೀಸರು ಬೀಗ ಹಾಕಿದ್ದಾರೆ. ನಿನ್ನೆಯವರೆಗೂ ಮನೆಗೆ ಬೀಗ ಹಾಕಿರಲಿಲ್ಲ.

ಹೆಚ್ ಡಿ ರೇವಣ್ಣಗೆ ಜೈಲಾ ಅಥವಾ ಬೇಲಾ ಈ ಮಧ್ಯೆ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ವಿಡಿಯೋ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಜೆಡಿಎಸ್ ಶಾಸಕ ಎಚ್​ಡಿ ರೇವಣ್ಣ ಅವರು ಬಂಧನ ಭೀತಿ ಎದುರಿಸುತ್ತಿದ್ದು, ಗುರುವಾರ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದು, ಇಂದು ಅರ್ಜಿ ವಿಚಾರಣೆ ನಡೆಯಲಿದ್ದು, ಅವರಿಗೆ ಜೈಲಾ ಅಥವಾ ಬೇಲಾ ಎಂಬುದು ನಿರ್ಧಾರವಾಗಲಿದೆ.

ಎಸ್​ಐಟಿ ಈಗಾಗಲೇ ಈ ಪ್ರಕರಣ ತನಿಖೆಯನ್ನು ಚುರುಕುಗೊಳಿಸಿದ್ದು, ಮಹತ್ವದ ಮಾಹಿತಿ ಕಲೆಹಾಕುತ್ತಿದೆ. ಅಲ್ಲದೇ ವಿಚಾರಣೆಗೆ ಹಾಜರಾಗುವಂತೆ ರೇವಣ್ಣ ಮತ್ತು ಪ್ರಜ್ವಲ್​ಗೆ ನೋಟಿಸ್ ಜಾರಿ ಮಾಡಿದೆ. ಇದರ ಬೆನ್ನಲ್ಲೇ ರೇವಣ್ಣ ಕೋರ್ಟ್​ ಮೆಟ್ಟಿಲೇರಿರುವುದು ಕುತೂಹಲ ಮೂಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT