ರೇವಣ್ಣ 
ರಾಜ್ಯ

ಪ್ರಜ್ವಲ್‌ ಲೈಂಗಿಕ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಎಚ್‌ ಡಿ ರೇವಣ್ಣ

ಪ್ರಜ್ವಲ್‌ ಲೈಂಗಿಕ ಹಗರಣದಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಹಾಗೂ ಜೆಡಿಎಸ್‌ ನಾಯಕ ಎಚ್‌ ಡಿ ರೇವಣ್ಣ ಅವರು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶುಕ್ರವಾರ ಹಿಂಪಡೆದಿದ್ದಾರೆ.

ಬೆಂಗಳೂರು: ಪ್ರಜ್ವಲ್‌ ಲೈಂಗಿಕ ಹಗರಣದಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಹಾಗೂ ಜೆಡಿಎಸ್‌ ನಾಯಕ ಎಚ್‌ ಡಿ ರೇವಣ್ಣ ಅವರು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶುಕ್ರವಾರ ಹಿಂಪಡೆದಿದ್ದಾರೆ.

ಎಚ್‌ ಡಿ ರೇವಣ್ಣ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ವಿಚಾರಣೆ ನಡೆಸಿದರು.

ವಿಚಾರಣೆಯಲ್ಲಿ ಭಾಗಿಯಾದ ವಿಶೇಷ ತನಿಖಾ ದಳದ ಪರ ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ ಎನ್‌ ಜಗದೀಶ್‌ ಅವರು ಹೊಳೆನರಸೀಪುರ ಟೌನ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಯಾವುದೇ ಹೊಸ ಸೆಕ್ಷನ್‌ಗಳನ್ನು ಅನ್ವಯಿಸಿಲ್ಲ. ರೇವಣ್ಣ ಅವರಿಗೆ ತನಿಖೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಲಾಗಿದೆ. ಅವರ ವಿರುದ್ಧದ ಆರೋಪಗಳು ಜಾಮೀನು ನೀಡುವಂತಹವಾಗಿವೆ ಎಂದು ಮೆಮೊ ಸಲ್ಲಿಸಿದರು.

ಆಗ ರೇವಣ್ಣ ಪರ ಹಿರಿಯ ವಕೀಲ ಮೂರ್ತಿ ಡಿ. ನಾಯ್ಕ್‌ ಅವರು ತಮ್ಮ ಅರ್ಜಿಯನ್ನು ಹಿಂಪಡೆಯುತ್ತಿದ್ದು, ಎಸ್‌ಪಿಪಿ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕು ಎಂದು ನ್ಯಾಯಾಲಯಕ್ಕೆ ಕೋರಿದರು. ಇದನ್ನು ದಾಖಲಿಸಿಕೊಂಡ ನ್ಯಾಯಾಲಯವು ಅರ್ಜಿ ಇತ್ಯರ್ಥಪಡಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT