ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ 'ಲವ್ ಜಿಹಾದ್' ಹೆಚ್ಚಳ, ಎಸ್‌ಐಟಿ ರಚಿಸಿ: ಸರ್ಕಾರಕ್ಕೆ ಸಿಟಿ ರವಿ ಆಗ್ರಹ

ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಸರ್ಕಾರ ಎಸ್ಐಟಿ ತನಿಖೆ ನಡೆಸಬೇಕು ಎಂದು ಬಿಜೆಪಿ ಶನಿವಾರ ಆಗ್ರಹಿಸಿದೆ.

ಹುಬ್ಬಳ್ಳಿ: ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಸರ್ಕಾರ ಎಸ್ಐಟಿ ತನಿಖೆ ನಡೆಸಬೇಕು ಎಂದು ಬಿಜೆಪಿ ಶನಿವಾರ ಆಗ್ರಹಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ಕರ್ನಾಟಕ ಕೇರಳದ ಹಾದಿಯಲ್ಲಿ ಸಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಅಪ್ರಾಪ್ತೆಯನ್ನು ಮುಸ್ಲಿಂ ಯುವಕ ಗರ್ಭಿಣಿಯನ್ನಾಗಿಸಿರುವ ಹೇಯ ಕೃತ್ಯ ವರದಿಯಾಗಿದೆ’. 'ಕಾಂಗ್ರೆಸ್ ಸರ್ಕಾರ ಇದೆ ಎಂಬ ಧೈರ್ಯ, ಜಿಹಾದಿ ಮನಸ್ಥಿತಿಯ ಕ್ರಿಮಿನಲ್ ಗಳನ್ನು ಉತ್ತೇಜಿಸುತ್ತಿದೆ' ಎಂಬ ಆತಂಕ ಶಾಂತಿಪ್ರಿಯ ಕರುನಾಡ ಜನತೆಯನ್ನು ಕಾಡುತ್ತಿದೆ. ರಾಜ್ಯದಲ್ಲಿ ಹಿಂದೂ ಹೆಣ್ಣುಮಕ್ಕಳಿಗೆ ರಕ್ಷಣೆಯಿಲ್ಲದಂತಾಗಿದೆ. ಕಣ್ಣೆದುರೇ ಮೂಲಭೂತವಾದಿ ಪುಂಡರು ಅಟ್ಟಹಾಸ ಮೆರೆಯುತ್ತಲೇ ಇದ್ದರೂ ಓಲೈಕೆ ರಾಜಕಾರಣಕ್ಕೆ ಜೋತುಬಿದ್ದಿರುವ ಕಾಂಗ್ರೆಸ್ ಸರ್ಕಾರ ಉದ್ದೇಶ ಪೂರ್ವಕ ನಿಷ್ಕ್ರೀಯತೆ ತೋರುತ್ತಿದೆ, ರಾಕ್ಷಸೀ ಪ್ರವೃತ್ತಿ ಮೆರೆಯುತ್ತಿರುವವರ ವಿರುದ್ಧ ಮೆದು ಧೋರಣೆ ಅನುಸರಿಸುತ್ತಿದೆ. ಇದರಿಂದ ಹೆಣ್ಣು ಮಕ್ಕಳ ಮೇಲೆ ನಿರಂತರ ಕ್ರೌರ್ಯ ಸರಣೀ ರೂಪದಲ್ಲಿ ಎಗ್ಗಿಲ್ಲದೇ ಸಾಗಿದೆ. ಹೆಣ್ಣು ಹೆತ್ತವರ ಆಕ್ರಂದನ ಅರಣ್ಯರೋಧನವಾಗಿದೆ, ಧೃತರಾಷ್ಟ್ರ ನಡವಳಿಕೆಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧರ್ಮಯುದ್ಧದಲ್ಲಿ (ಲೋಕಸಮರ) ಜನ ಪಾಠ ಕಲಿಸಬೇಕಿದೆ ಎಂದು ಹೇಳಿದ್ದಾರೆ.

ಬಿಜೆಪಿಯ ಹಿರಿಯ ಮುಖಂಡರಾದ ಸಿ.ಟಿ.ರವಿ ಅವರು ಮಾತನಾಡಿ, ಇಂತಹ ಘಟನೆಗಳ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿವೆ.ಇದು ಕೇವಲ ಕಾಕತಾಳೀಯವಲ್ಲ. ಕೆಲವು ದೇಶ ವಿರೋಧಿ ಗುಂಪುಗಳ ಉದ್ದೇಶಪೂರ್ವಕವಾಗಿ ನಡೆಸುತ್ತಿರುವ ಪ್ರಯತ್ನವಾಗಿದೆ. ಕೆಲವು ಗುಂಪುಗಳು ಷರಿಯಾ ಕಾನೂನನ್ನು ಅನುಸರಿಸದವರನ್ನು ಗುರಿಯಾಗಿಸುತ್ತಿವೆ.

ಮೊಘಲ್ ದೊರೆ ಔರಂಗಜೇಬ್ ಆಳ್ವಿಕೆಯಲ್ಲಿ ಬಲವಂತವಾಗಿ ಧಾರ್ಮಿಕ ಮತಾಂತರಗಳನ್ನು ಮಾಡಲಾಗಿತ್ತು ಈಗ ಕೆಲವು ಗುಂಪುಗಳು ಲವ್ ಜಿಹಾದ್ ಅನುಸರಿಸುತ್ತಿವೆ. ಈ ಗುಂಪುಗಳು ಈಗ ಒಂದು ಹೆಜ್ಜೆ ಮುಂದೆ ಹೋಗಿ ಮತ ಜಿಹಾದ್‌ಗೆ ಕರೆ ನೀಡಿವೆ. ಹಾಗಾಗಿ ಸರ್ಕಾರ ತನಿಖೆಗೆ ಎಸ್‌ಐಟಿ ರಚಿಸಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್‌ ದಾಳಿ; ಭಾರತೀಯ ಸೇರಿ ನಾಲ್ವರಿಗೆ ಗಾಯ

ಬೆಂಗಳೂರಿನಲ್ಲಿ ಗೃಹಬಳಕೆ ಎಲ್‌ಪಿಜಿಯಲ್ಲೂ ಕೊರತೆ: ಬುಕಿಂಗ್ ನಂಬರ್ ಸ್ವಿಚ್ ಆಫ್; ಹೆಚ್ಚಿದ ಆತಂಕ

ಕೇವಲ ಮಧುರೈ ಏಕೆ? ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತರರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ

ಛತ್ತೀಸ್‌ಗಢದಲ್ಲಿ ಮತ್ತೊಂದು ಮಹಾ ಶರಣಾಗತಿ: 108 ನಕ್ಸಲರು ಪೊಲೀಸರಿಗೆ ಶರಣು!

ಮಂಡ್ಯ: ಅರ್ಚಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಪತ್ನಿಯ ಕಿರಾತಕ ಸಂಚು ಬಯಲು!

SCROLL FOR NEXT