ಬಿ ವೈ ವಿಜಯೇಂದ್ರ 
ರಾಜ್ಯ

ಲೋಕಸಭೆ ಚುನಾವಣೆ ಗೆಲ್ಲಲು ಇಡೀ ಕಾಂಗ್ರೆಸ್ ಸರ್ಕಾರವೇ ಪೆನ್ ಡ್ರೈವ್ ಹಿಂದೆ ಬಿದ್ದಿದೆ: ವಿಜಯೇಂದ್ರ

ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಬಿಟ್ಟು ಪೆನ್ ಡ್ರೈವ್ ಹಿಂದೆ ಬಿದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದ್ದಾರೆ.

ಬೆಂಗಳೂರು: ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಬಿಟ್ಟು ಪೆನ್ ಡ್ರೈವ್ ಹಿಂದೆ ಬಿದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದ್ದಾರೆ.

ಬೆಳಗಾವಿ ತಾಲ್ಲೂಕಿನ ಬಾಳೇಕುಂದ್ರಿ ಕೆ.ಎಚ್ ಗ್ರಾಮದಲ್ಲಿ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಮುಂದಿಟ್ಟುಕೊಂಡು ಕಾಂಗ್ರೆಸ್‌ ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ. ಲೈಂಗಿಕ ದೌರ್ಜನ್ಯ ಪ್ರಕರಣ ಬಿಜೆಪಿಗೆ ಮುಳುವಾಗಲಿ ಎಂಬ ಅಪೇಕ್ಷೆ ಕಾಂಗ್ರೆಸ್‌ದ್ದು. ಅದಕ್ಕೆ ಗ್ಯಾರಂಟಿ ಬಗ್ಗೆ ವಿಶ್ವಾಸ ಕಳೆದುಕೊಂಡು, ಪೆನ್‌ಡ್ರೈವ್ ನೆಚ್ಚಿಕೊಂಡಿದ್ದಾರೆ ಎಂದರು.

ಗ್ಯಾರಂಟಿ ಬಿಟ್ಟು ಪೆನ್‌ಡ್ರೈವ್ ಪ್ರಕರಣದಿಂದಲೇ ಚುನಾವಣೆಯಲ್ಲಿ ಗೆಲ್ಲುವ ಉಮೇದಿನಲ್ಲಿ ಇರುವ ಕಾಂಗ್ರೆಸ್‌ನವರಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಿಲುವು ಸ್ಪಷ್ಟ. ಯಾರೇ ತಪ್ಪಿತಸ್ಥರಿದ್ದರೂ ತನಿಖೆ ಎದುರಿಸಬೇಕು. ಇದರಲ್ಲಿ ಬೇರೆ ಮಾತಿಲ್ಲ ಎಂದರು. ಅಪಪ್ರಚಾರ ಮತ್ತು ಗ್ಯಾರಂಟಿಗಳ ಮೇಲೆ ಭರವಸೆ ಇಟ್ಟುಕೊಂಡ ಕಾಂಗ್ರೆಸ್‌ನವರು 20ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲ್ಲುವ ಭ್ರಮೆಯಲ್ಲಿದ್ದಾರೆ. ಆದರೆ, ಮತದಾರರು ಅವರ ಅಪಪ್ರಚಾರದ ಬಗ್ಗೆ ತಲೆ‌ಕೆಡಿಸಿಕೊಳ್ಳಲ್ಲ. 28 ಕ್ಷೇತ್ರಗಳಲ್ಲೂ ನಾವೇ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ದಾಟಲು ಪ್ರಯತ್ನಿಸುವ ಹಡಗುಗಳ ಮೇಲೆ ದಾಳಿ ಮಾಡುವುದಾಗಿ ಇರಾನ್ ಎಚ್ಚರಿಕೆ; ಅಮೆರಿಕ ಹೇಳಿದ್ದೇನು?

ಅಮೆರಿಕ-ಇಸ್ರೇಲ್ ದಾಳಿಗೆ 165 ಇರಾನ್ ಶಾಲಾ ಬಾಲಕಿಯರು ಬಲಿ: ಅಂತಿಮ ಯಾತ್ರೆಯಲ್ಲಿ ಜನಸಾಗರ, ತೀವ್ರ ಆಕ್ರೋಶ! Video

Iran conflict: ರಿಯಾದ್‌ ಅಮೆರಿಕಾ ರಾಯಭಾರಿ ಕಚೇರಿ ಮೇಲೆ ಡ್ರೋನ್ ದಾಳಿ: ಸ್ಫೋಟದ ಶಬ್ಧಕ್ಕೆ ಬೆಚ್ಚಿಬಿದ್ದ ಸೌದಿ; ಶೀಘ್ರದಲ್ಲೇ ತಕ್ಕ ಪ್ರತಿಕ್ರಿಯೆ- ಟ್ರಂಪ್ ಎಚ್ಚರಿಕೆ

ಟೆಕ್ಸಾಸ್'ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರ ಸಾವು, ಭಯೋತ್ಪಾದಕ ಕೃತ್ಯ ಶಂಕೆ..!

ಇರಾಕ್‌ನಲ್ಲಿ US ಪಡೆ ತಂಗಿದ್ದ ಹೋಟೆಲ್ ಮೇಲೆ ಇರಾನ್ ಬೆಂಬಲಿತ ಗುಂಪು ದಾಳಿ!

SCROLL FOR NEXT