ಹೆಚ್. ಡಿ. ರೇವಣ್ಣ 
ರಾಜ್ಯ

ಮಹಿಳೆ ಅಪಹರಣ ಪ್ರಕರಣ: ಶಾಸಕ ಹೆಚ್.ಡಿ.ರೇವಣ್ಣ 4 ದಿನ SIT ವಶಕ್ಕೆ

ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಡಿಎಸ್ ಹಿರಿಯ ನಾಯಕ ಹೆಚ್. ಡಿ. ರೇವಣ್ಣ ಅವರನ್ನು ನಾಲ್ಕು ದಿನಗಳ ಕಾಲ ಎಸ್ ಐಟಿ ವಶಕ್ಕೆ ನ್ಯಾಯಾಲಯ ನೀಡಿದೆ.

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಡಿಎಸ್ ಹಿರಿಯ ನಾಯಕ ಹೆಚ್. ಡಿ. ರೇವಣ್ಣ ಅವರನ್ನು ನ್ಯಾಯಾಲಯ 4 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ನೀಡಿದೆ.

ಮೈಸೂರಿನ ಕೆ.ಆರ್. ನಗರದಲ್ಲಿ ದಾಖಲಾಗಿದ್ದ ಮಹಿಳೆ ಅಪಹರಣ ಪ್ರಕರಣದಲ್ಲಿ ನಿನ್ನೆ ಬಂಧನಕ್ಕೊಳಗಾಗಿದ್ದ ರೇವಣ್ಣ ಅವರನ್ನು ಭಾನುವಾರ ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಕೋರಮಂಗಲದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ರವೀಂದ್ರ ಕಟ್ಟಿಮನಿ ಅವರ ಮುಂದೆ ಹಾಜರುಪಡಿಸಲಾಯಿತು.

ಈ ವೇಳೆ ಹೆಚ್. ಡಿ. ರೇವಣ್ಣ ಪರ ವಕೀಲರು ವಾದ ಹಾಗೂ ಎಸ್ ಐಟಿ ಮನವಿಯನ್ನು ನ್ಯಾಯಾಧೀಶರು ಆಲಿಸಿದ್ದಾರೆ. ಈ ಪ್ರಕರಣದಲ್ಲಿ ಹೆಚ್ಚಿನ ತನಿಖೆಗಾಗಿ ರೇವಣ್ಣ ಅವರನ್ನು ವಶಕ್ಕೆ ನೀಡಬೇಕೆಂದು ಎಸ್ ಐಟಿ ನ್ಯಾಯಾಧೀಶರ ಬಳಿ ಮನವಿ ಮಾಡಿಕೊಂಡಿತು. ನಂತರ ನ್ಯಾಯಾಧೀಶರು ಮೇ.8ರವರೆಗೂ ರೇವಣ್ಣ ಅವರನ್ನು ಎಸ್ ಐಟಿ ವಶಕ್ಕೆ ನೀಡಿ ಆದೇಶ ಹೊರಡಿಸಿದರು.

ಇದಕ್ಕೂ ಮುನ್ನಾ ನಾನು ಯಾವುದೇ ತಪ್ಪು ಮಾಡಿಲ್ಲ, ಅನ್ಯಾಯ ಮಾಡಿಲ್ಲ, ರಾಜಕೀಯ ದುರುದ್ದೇಶದ ಷಡ್ಯಂತ್ರದಿಂದ ನನ್ನನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದು, ರಾಜಕೀಯ ಭವಿಷ್ಯ ಹಾಳು ಮಾಡಿದ್ದಾರೆ ಎಂದು ನ್ಯಾಯಾಧೀಶರ ಬಳಿ ರೇವಣ್ಣ ಕಣ್ಣೀರು ಹಾಕಿದ್ದಾರೆ. ನಂತರ ಎಸ್ ಐಟಿ ಅಧಿಕಾರಿಗಳು ನೀರು ಕುಡಿಸಿ ಸಮಧಾನ ಮಾಡಿದ್ದಾರೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT