ಪ್ರತಿಭಟನಾಕಾರರು 
ರಾಜ್ಯ

ಪ್ರಜ್ವಲ್ ರೇವಣ್ಣ ಪ್ರಕರಣ: ಸಂತ್ರಸ್ತರಿಗೆ ಕರ್ನಾಟಕ ಸರ್ಕಾರದಿಂದ ಆರ್ಥಿಕ ನೆರವು!

ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದವರಿಗೆ ಕಾಂಗ್ರೆಸ್ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ರಾಷ್ಟ್ರೀಯ ಪಕ್ಷ ಭಾನುವಾರ ತಿಳಿಸಿದೆ. ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜಿವಾಲಾ ಇದನ್ನು ಪ್ರಕಟಿಸಿದರು.

ಬೆಂಗಳೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದವರಿಗೆ ಕಾಂಗ್ರೆಸ್ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ರಾಷ್ಟ್ರೀಯ ಪಕ್ಷ ಭಾನುವಾರ ತಿಳಿಸಿದೆ. ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜಿವಾಲಾ ಇದನ್ನು ಪ್ರಕಟಿಸಿದರು.

ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಹುಲ್‌ ಗಾಂಧಿ ಆಗ್ರಹಿಸಿದ್ದಾರೆ ಎಂದ ಅವರು, ‘ಕಳೆದ 75 ವರ್ಷಗಳಲ್ಲಿ ಎಂದೂ ನಡೆಯದ ವಿಶಿಷ್ಟ ಪ್ರಕರಣ ಇದಾಗಿದ್ದು, ನೂರಾರು ಅತ್ಯಾಚಾರ ಸಂತ್ರಸ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್ಥಿಕ ನೆರವು ಘೋಷಿಸಿದ್ದಾರೆ ಎಂದು ಸುರ್ಜಿವಾಲ ತಿಳಿಸಿದರು.

ಅತ್ಯಾಚಾರ ಮತ್ತು ಕಿರುಕುಳಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನೂರಾರು ಸ್ಪಷ್ಟ ವೀಡಿಯೊಗಳು ಬಹಿರಂಗಗೊಂಡ ನಂತರ ಪ್ರಜ್ವಲ್ ರೇವಣ್ಣ ತನಿಖೆಗೆ ಬೇಕಾಗಿದ್ದಾರೆ. ಮಾಸ್ ರೆಪಿಸ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ರಕ್ಷಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆರೋಪಿಸಿದರು.

ಪ್ರಜ್ವಲ್ ಬಗ್ಗೆ ಮಾಹಿತಿ ಇದ್ದರೂ ಬಿಜೆಪಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದು ಏಕೆ? ಆರೋಪಿ ವಿದೇಶಕ್ಕೆ ಹೋಗುವುದನ್ನು ವಿದೇಶಾಂಗ ಸಚಿವಾಲಯ ಏಕೆ ತಡೆಯಲಿಲ್ಲ ಎಂದು ಅವರು ಪ್ರಶ್ನಿಸಿದರು."ಪ್ರಜ್ವಲ್ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ನ್ನು ಪ್ರಧಾನಿ ಏಕೆ ರದ್ದುಗೊಳಿಸಲಿಲ್ಲ? ಅವರನ್ನು ದೇಶಕ್ಕೆ ಕರೆತರಲು ಇಂಟರ್‌ಪೋಲ್ ಮೂಲಕ ಬ್ಲೂ ಕಾರ್ನರ್ ನೋಟಿಸ್ ಏಕೆ ನೀಡಲಿಲ್ಲ?" ಎಂದು ಸುರ್ಜೇವಾಲ ಕಿಡಿಕಾರಿದರು.

ಈ ವೇಳೆ ಮಾತನಾಡಿದ ಸಿಎಂ, ಪ್ರಜ್ವಲ್ ಅವರನ್ನು ವಾಪಸ್ ಕರೆತರಲು ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT