ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರತಿಭಟನೆ 
ರಾಜ್ಯ

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರಿಗಾಗಿ ಎಸ್ ಐಟಿಯಿಂದ ಸಹಾಯವಾಣಿ ಆರಂಭ!

ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಹೆಚ್. ಡಿ. ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದ ಸಂತ್ರಸ್ತೆಯರಿಗಾಗಿ ಎಸ್ ಐಟಿ ಸಹಾಯವಾಣಿ ಆರಂಭಿಸಿದೆ.

ಬೆಂಗಳೂರು: ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಹೆಚ್. ಡಿ. ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದ ಸಂತ್ರಸ್ತೆಯರಿಗಾಗಿ ಎಸ್ ಐಟಿ ಸಹಾಯವಾಣಿ ಆರಂಭಿಸಿದೆ.

ಈ ಪ್ರಕರಣದಲ್ಲಿ ಇನ್ನೂ ಯಾರಾದೂರು ಸಂತ್ರಸ್ತೆಯರಿದ್ದರೆ ಕಾನೂನು ನೆರವು, ರಕ್ಷಣೆ, ದೂರು ನೀಡಲು ಸಹಾಯವಾಣಿಯನ್ನು ತೆರೆಯಲಾಗಿದೆ.

ಲೈಂಗಿಕ ಕಿರುಕುಳಕ್ಕೆ ಒಳಗಾದ ಸಂತ್ರಸ್ತೆಯರು ಸಹಾಯವಾಣಿ 6360938947 ಗೆ ಕರೆ ಮಾಡಿ ದೂರು ನೀಡಬಹುದು ಎಂದು ವಿಶೇಷ ತನಿಖಾ ದಳದ ಮುಖ್ಯಸ್ಥರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಂತ್ರಸ್ತೆಯರು ಅಥವಾ ಭಾತ್ಮೀದಾರರು ಯಾರಾದಾರೂ ಇದ್ದಲ್ಲಿ ತಮ್ಮ ಹೇಳಿಕೆಗಳನ್ನು ನೇರವಾಗಿ ತಿಳಿಸಲಾಗದಿದ್ದಲ್ಲಿ ಕರೆ ಮಾಡಿಯೂ ಮಾಹಿತಿ ನೀಡಬಹುದು. ಅಂತವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ಎಸ್ ಐಟಿ ತಿಳಿಸಿದೆ.

ಎಸ್ ಐಟಿ ಪ್ರಕಟಣೆ

ಮತ್ತೊಂದೆಡೆ ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಹೆಚ್ ಡಿ ರೇವಣ್ಣ ಅವರನ್ನು ಮೇ 8ರವರೆಗೆ ನಾಲ್ಕು ದಿನಗಳ ಎಸ್ ಐಟಿ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ. ಪ್ರಜ್ವಲ್ ರೇವಣ್ಣ ಯಾವುದೇ ಕ್ಷಣದಲ್ಲಿ ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದ್ದು, ಎಸ್ ಐಟಿ ತಂಡ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀಡು ಬಿಟ್ಟಿದೆ. ವಿಮಾನ ನಿಲ್ದಾಣಕ್ಕೆ ಕಾಲಿಡುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel