ಸಾಂದರ್ಭಿಕ ಚಿತ್ರ 
ರಾಜ್ಯ

ಸೈಬರ್ ವಂಚನೆ: 5.17 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಉದ್ಯಮಿ

ಆಧುನಿಕತೆ ಹೆಚ್ಚಾದಂತೆ ತಂತ್ರಜ್ಞಾನ ಆಧಾರಿತ ಅಪರಾಧ, ವಂಚನೆ ಪ್ರಕರಣಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ಸೈಬರ್​​ ವಂಚನೆಗೆ ಸಿಲುಕಿ ಉದ್ಯಮಿಯೊಬ್ಬರು ಬರೋಬ್ಬರಿ 5.17 ಕೋಟಿ ರೂ. ಕಳೆದುಕೊಂಡಿದ್ದಾರೆ.

ಬೆಂಗಳೂರು: ಆಧುನಿಕತೆ ಹೆಚ್ಚಾದಂತೆ ತಂತ್ರಜ್ಞಾನ ಆಧಾರಿತ ಅಪರಾಧ, ವಂಚನೆ ಪ್ರಕರಣಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ಸೈಬರ್​​ ವಂಚನೆಗೆ ಸಿಲುಕಿ ಉದ್ಯಮಿಯೊಬ್ಬರು ಬರೋಬ್ಬರಿ 5.17 ಕೋಟಿ ರೂ. ಕಳೆದುಕೊಂಡಿದ್ದಾರೆ.

ವಂಚನೆಗೊಳಗಾದ ಉದ್ಯಮಿ ಅಶೋಕ್ ತಿರುಪಲಪ್ಪ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿ 3ರಂದು ಅಶೋಕ್​ ಅವರ ವಾಟ್ಸಪ್​ಗೆ ಅಪರಿಚಿತ ನಂಬರ್​​ನಿಂದ https://www.bys-app.com ಲಿಂಗ್ ಬಂದಿತ್ತು. ಈ ಬಗ್ಗೆ ಅಶೋಕ್ ತಲೆಕೆಡಿಸಿಕೊಂಡಿರಲಿಲ್ಲ. ಆದರೆ ಕೆಲ ದಿನಗಳ ನಂತರ ವೈ-5-ಎವರ್ ಕೋರ್ ಫೈನಾನ್ಸಿಯಲ್ ಲೀಡರ್ ಎಂಬ ವಾಟ್ಸಪ್​ ಗ್ರೂಪ್​ಗೆ ಅಶೋಕ್ ರನ್ನು ಸೇರಿಸಲಾಯಿತು. ಆ ಬಳಿಕ ಕೆಲ ಅಪರಿಚಿತರು ಅಶೋಕ್ ಕರೆ ಕರೆ ಮಾಡಿ ಈ ಆ್ಯಪ್ ನಲ್ಲಿ ಹಣ ಹೂಡಿ ಹೆಚ್ಚಿನ ಲಾಭ ಬರುತ್ತದೆ ಎಂದು ಆಮಿಷ ಒಡ್ಡಿದರು.

ನಂತರ ಅಶೋಕ್ ಆ್ಯಪ್ ಡೌನ್ ಲೋಡ್ ಮಾಡಿ ಅಪರಿಚಿತರು ಹೇಳಿದಂತೆ ಕೆಲ ಅಕೌಂಟ್​ಗೆ ಹಂತ ಹಂತವಾಗಿ ಹಣ ಹಾಕಲು ಆರಂಭಿಸಿದರು. ಹೀಗೆ ಬರೊಬ್ಬರಿ 5.17 ಕೋಟಿ ರೂಪಾಯಿಯನ್ನು ಹೂಡಿಕೆ ಮಾಡಿದ ನಂತರ ಎಚ್ಚೇತ ಅಶೋಕ್ ನನ್ನ ಹಣವನ್ನು ವಾಪಸ್ ಆ್ಯಪ್ ಮೂಲಕ ಪಡೆಯಲು ಪ್ರಯತ್ನಿಸಿ ವಿಫಲರಾಗುತ್ತಾರೆ.

ಇದಾದ ಬಳಿಕ ತಾವು ಮೋಸ ಹೋಗಿದ್ದಾಗಿ ಮನವರಿಕೆಯಾದ ಬಳಿಕ ಅಶೋರ್ ಸೈಬರ್​ ಕ್ರೈಂ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಸೈಬರ್​ ಕ್ರೈಂ ಪೊಲೀಸರು Fyers Securities Pvt Ltd, Eercore Company ಎಂಬ ಕಂಪನಿಗಳ ಮೇಲೆ ಎಫ್​ಐಆರ್ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT