ಸಾಂದರ್ಭಿಕ ಚಿತ್ರ 
ರಾಜ್ಯ

ಸೈಬರ್ ವಂಚನೆ: 5.17 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಉದ್ಯಮಿ

ಆಧುನಿಕತೆ ಹೆಚ್ಚಾದಂತೆ ತಂತ್ರಜ್ಞಾನ ಆಧಾರಿತ ಅಪರಾಧ, ವಂಚನೆ ಪ್ರಕರಣಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ಸೈಬರ್​​ ವಂಚನೆಗೆ ಸಿಲುಕಿ ಉದ್ಯಮಿಯೊಬ್ಬರು ಬರೋಬ್ಬರಿ 5.17 ಕೋಟಿ ರೂ. ಕಳೆದುಕೊಂಡಿದ್ದಾರೆ.

ಬೆಂಗಳೂರು: ಆಧುನಿಕತೆ ಹೆಚ್ಚಾದಂತೆ ತಂತ್ರಜ್ಞಾನ ಆಧಾರಿತ ಅಪರಾಧ, ವಂಚನೆ ಪ್ರಕರಣಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ಸೈಬರ್​​ ವಂಚನೆಗೆ ಸಿಲುಕಿ ಉದ್ಯಮಿಯೊಬ್ಬರು ಬರೋಬ್ಬರಿ 5.17 ಕೋಟಿ ರೂ. ಕಳೆದುಕೊಂಡಿದ್ದಾರೆ.

ವಂಚನೆಗೊಳಗಾದ ಉದ್ಯಮಿ ಅಶೋಕ್ ತಿರುಪಲಪ್ಪ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿ 3ರಂದು ಅಶೋಕ್​ ಅವರ ವಾಟ್ಸಪ್​ಗೆ ಅಪರಿಚಿತ ನಂಬರ್​​ನಿಂದ https://www.bys-app.com ಲಿಂಗ್ ಬಂದಿತ್ತು. ಈ ಬಗ್ಗೆ ಅಶೋಕ್ ತಲೆಕೆಡಿಸಿಕೊಂಡಿರಲಿಲ್ಲ. ಆದರೆ ಕೆಲ ದಿನಗಳ ನಂತರ ವೈ-5-ಎವರ್ ಕೋರ್ ಫೈನಾನ್ಸಿಯಲ್ ಲೀಡರ್ ಎಂಬ ವಾಟ್ಸಪ್​ ಗ್ರೂಪ್​ಗೆ ಅಶೋಕ್ ರನ್ನು ಸೇರಿಸಲಾಯಿತು. ಆ ಬಳಿಕ ಕೆಲ ಅಪರಿಚಿತರು ಅಶೋಕ್ ಕರೆ ಕರೆ ಮಾಡಿ ಈ ಆ್ಯಪ್ ನಲ್ಲಿ ಹಣ ಹೂಡಿ ಹೆಚ್ಚಿನ ಲಾಭ ಬರುತ್ತದೆ ಎಂದು ಆಮಿಷ ಒಡ್ಡಿದರು.

ನಂತರ ಅಶೋಕ್ ಆ್ಯಪ್ ಡೌನ್ ಲೋಡ್ ಮಾಡಿ ಅಪರಿಚಿತರು ಹೇಳಿದಂತೆ ಕೆಲ ಅಕೌಂಟ್​ಗೆ ಹಂತ ಹಂತವಾಗಿ ಹಣ ಹಾಕಲು ಆರಂಭಿಸಿದರು. ಹೀಗೆ ಬರೊಬ್ಬರಿ 5.17 ಕೋಟಿ ರೂಪಾಯಿಯನ್ನು ಹೂಡಿಕೆ ಮಾಡಿದ ನಂತರ ಎಚ್ಚೇತ ಅಶೋಕ್ ನನ್ನ ಹಣವನ್ನು ವಾಪಸ್ ಆ್ಯಪ್ ಮೂಲಕ ಪಡೆಯಲು ಪ್ರಯತ್ನಿಸಿ ವಿಫಲರಾಗುತ್ತಾರೆ.

ಇದಾದ ಬಳಿಕ ತಾವು ಮೋಸ ಹೋಗಿದ್ದಾಗಿ ಮನವರಿಕೆಯಾದ ಬಳಿಕ ಅಶೋರ್ ಸೈಬರ್​ ಕ್ರೈಂ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಸೈಬರ್​ ಕ್ರೈಂ ಪೊಲೀಸರು Fyers Securities Pvt Ltd, Eercore Company ಎಂಬ ಕಂಪನಿಗಳ ಮೇಲೆ ಎಫ್​ಐಆರ್ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT