ಎಚ್‌ಡಿ ರೇವಣ್ಣ - ಪ್ರಜ್ವಲ್ ರೇವಣ್ಣ 
ರಾಜ್ಯ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಎಚ್.ಡಿ. ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ತಡೆಯಾಜ್ಞೆ!

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ ಮತ್ತು ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.

ಉಭಯ ನಾಯಕರು ಸೆಷನ್ಸ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಪ್ರಕರಣಗಳ ಬಗ್ಗೆ ಸುದ್ದಿ ಪ್ರಸಾರ‌ ಮಾಡುವಾಗ ತಮ್ಮ ಹೆಸರುಗಳನ್ನು ಬಳಸದಂತೆ ತಡೆಯಾಜ್ಞೆಯನ್ನು ತಂದಿದ್ದಾರೆ. ಇಷ್ಟು ದಿನ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಎಚ್‌.ಡಿ. ಕುಮಾರಸ್ವಾಮಿ ಅವರು ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು.

ಇನ್ನೂ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಎಸ್ ಐಟಿ ವಶದಲ್ಲಿರುವ ರೇವಣ್ಣ ಅಪಹರಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದು ನಾನು ಈಗಾಗಲೇ ಹೇಳಿದ್ದೇನೆ. ಆದರೂ ನೀವುಗಳು ಬರೆದುಕೊಂಡಿದ್ದೀರಿ. ನಾನೇ ಮಾಡಿಸಿರುವ ಹಾಗೆ ಬರೆದುಕೊಂಡಿದ್ದೀರಿ. ನಾನು ಯಾವ ಹೇಳಿಕೆಗೂ ಸಹಿ ಹಾಕಲ್ಲ ಎಂದು ರೇವಣ್ಣ ನಿರಾಕರಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ