ಎಚ್. ಡಿ. ರೇವಣ್ಣ 
ರಾಜ್ಯ

SIT ವಿಚಾರಣೆ ವೇಳೆ, ನ್ಯಾಯಾಧೀಶರ ಮುಂದೆಯೂ ಕೈಯ್ಯಲ್ಲಿ 3 ನಿಂಬೆಹಣ್ಣು ಹಿಡಿದಿದ್ದ ಎಚ್.ಡಿ.ರೇವಣ್ಣ!

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್​ನಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದೆ.

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್​ನಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದೆ.

ಎಸ್ ಐ ಟಿ ಅಧಿಕಾರಿಗಳ ವಿಚಾರಣೆ ವೇಳೆ ಹಾಗೂ ನ್ಯಾಯಾಧೀಶರ ಎದುರು ಹಾಜರುಪಡಿಸುವ ಸಂದರ್ಭದಲ್ಲಿ ಎಚ್‌.ಡಿ.ರೇವಣ್ಣ ಅವರು ಮೂರು ನಿಂಬೆಹಣ್ಣು ಕೈಯಲ್ಲಿ ಹಿಡಿದುಕೊಂಡಿದ್ದರು. ಪೊಲೀಸ್ ವಾಹನದಿಂದ ಇಳಿದಿದ್ದ ರೇವಣ್ಣ, ನಿಂಬೆ ಹಣ್ಣುಗಳ ಸಮೇತ ನ್ಯಾಯಾಧೀಶರ ಮನೆಯತ್ತ ಹೆಜ್ಜೆ ಹಾಕಿದರು. ವಿಶೇಷ ಕೊಠಡಿಯಲ್ಲಿ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲೂ ರೇವಣ್ಣ ನಿಂಬೆ ಹಣ್ಣು ಬಿಟ್ಟಿರಲಿಲ್ಲ.

ವಿಚಾರಣೆ ವೇಳೆ ನ್ಯಾಯಾಧೀಶರ ಎದುರು ಕಣ್ಣೀರು ಹಾಕಿದ್ದ ರೇವಣ್ಣ, ‘ನನ್ನ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ. ರಾಜಕೀಯ ಬೆಳವಣಿಗೆ ಸಹಿಸದವರು ಈ ರೀತಿ ಮಾಡಿದ್ದಾರೆ. ನನಗೆ ನ್ಯಾಯ ಕೊಡಿ’ ಎಂದು ಮನವಿ ಮಾಡಿದ್ದಾರೆಂದು ತಿಳಿದು ಬಂದಿದೆ.

ನ್ಯಾಯಾಧೀಶರ ನಿವಾಸದಲ್ಲಿ ಎಚ್​.ಡಿ. ರೇವಣ್ಣ ಪರ ವಕೀಲ ಮತ್ತು ಎಸ್​ಐಟಿ ಅಧಿಕಾರಿಗಳ ನಡುವಿನ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ರವೀಂದ್ರ ಕಟ್ಟಿಮನಿ ಅವರು, ರೇವಣ್ಣರನ್ನು ಮೇ.08ರವರೆಗೆ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದ್ದಾರೆ.

ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ರಾಷ್ಟ್ರಮಟ್ಟದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಒಂದೆಡೆ ವಿದೇಶಕ್ಕೆ ಹಾರಿರುವ ಪ್ರಜ್ವಲ್​ ಬಂಧಿಸಲು ಎಸ್​ಐಟಿ ಅಧಿಕಾರಿಗಳು ಏರ್​ಪೋರ್ಟ್​ನಲ್ಲಿ ಕಾದು ಕುಳಿತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ