ಸಾಂದರ್ಭಿಕ ಚಿತ್ರ 
ರಾಜ್ಯ

ಹೊಸ ಹಗರಣ: ಅಂಬೇಡ್ಕರ್ ಕಾರ್ಪೊರೇಷನ್ ಎಂಡಿ ಇ-ಆಫೀಸ್ ಲೆಟರ್ ಹೆಡ್, ಡಿಜಿಟಲ್ ಸಹಿ ಫೋರ್ಜರಿ!

ಇ-ಆಫೀಸ್ ಲೆಟರ್ ಹೆಡ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಡಿಜಿಟಲ್ ಸಹಿಯನ್ನು ಫೋರ್ಜರಿ ಮಾಡಲಾಗಿದೆ.

ಬೆಂಗಳೂರು: ಇ-ಆಫೀಸ್ ಲೆಟರ್ ಹೆಡ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಡಿಜಿಟಲ್ ಸಹಿಯನ್ನು ಫೋರ್ಜರಿ ಮಾಡಲಾಗಿದೆ.

ಯಾದಗಿರಿ ಜಿಲ್ಲೆಯ ಪರಿಶಿಷ್ಟ ಜಾತಿಯ 17 ಫಲಾನುಭವಿಗಳಿಗೆ ‘ಐರಾವತ’ ಯೋಜನೆಯಡಿ ತಲಾ 5 ಲಕ್ಷ ರೂ.ಗಳ ಸಹಾಯಧನವನ್ನು ಎಂಡಿ ಮಂಜೂರು ಮಾಡಿದ್ದಾರೆ ಎಂದು ತೋರಿಸಲು ಇ-ಆಫೀಸ್ ಲೆಟರ್ ಹೆಡ್ ಮತ್ತು ಎಂಡಿ ಸಹಿಯನ್ನು ನಕಲು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ವಿದ್ಯಾವಂತ ಮತ್ತು ನಿರುದ್ಯೋಗಿ ಪರಿಶಿಷ್ಟ ಜಾತಿಯ ಯುವಕರು ಓಲಾ/ಉಬರ್/ಮೇರು ಸಹಯೋಗದೊಂದಿಗೆ ಪ್ರವಾಸಿ ಟ್ಯಾಕ್ಸಿಗಳ ಮಾಲೀಕರಾಗಿ ಆದಾಯ ಗಳಿಸಲು ಸಹಾಯ ಮಾಡಲು ಐರಾವತ ಯೋಜನೆಯನ್ನು ಪರಿಚಯಿಸಲಾಗಿದೆ. ನಿಗಮವು ಪ್ರತಿ ಫಲಾನುಭವಿಗೆ 5 ಲಕ್ಷ ರೂ.ವರೆಗೆ ಸಹಾಯಧನ ನೀಡುತ್ತಿತ್ತು ಮತ್ತು 2018ರಿಂದ 2020ರವರೆಗೆ ಈ ಯೋಜನೆ ಜಾರಿಯಲ್ಲಿತ್ತು.

ಅಂಬೇಡ್ಕರ್ ಅಭಿವೃದ್ಧಿಆದರೆ ಯಾದಗಿರಿಯಲ್ಲಿರುವ ನಿಗಮದ ಕಚೇರಿಯ ವ್ಯವಸ್ಥಾಪಕರಿಗೆ ನಕಲಿ ಇ-ಆಫೀಸ್ ಲೆಟರ್ ಹೆಡ್ ಮತ್ತು ಎಂಡಿಯ ಡಿಜಿಟಲ್ ಸಹಿ ಬಳಸಿ 2024ರ ಏಪ್ರಿಲ್ 3ರಂದು ನಕಲಿ ಮಂಜೂರಾತಿ ಆದೇಶ ಹೊರಡಿಸಲಾಗಿದೆ.

ಈ ಯೋಜನೆ ಸ್ಥಗಿತಗೊಂಡಿದ್ದರಿಂದ ಅನುಮಾನಗೊಂಡ ಯಾದಗಿರಿ ಕಚೇರಿಯ ವ್ಯವಸ್ಥಾಪಕ ಸಿದ್ದಲಿಂಗರೆಡ್ಡಿ ಅವರು ಮಂಜೂರಾತಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಬೆಂಗಳೂರಿನ ವಿವಿ ಟವರ್‌ನಲ್ಲಿರುವ ನಿಗಮದ ಕೇಂದ್ರ ಕಚೇರಿಯಲ್ಲಿ ಯೋಜನೆಯನ್ನು ನಿರ್ವಹಿಸುವ ಸಿಬ್ಬಂದಿಗೆ ಆದೇಶವನ್ನು ರವಾನಿಸಿದ್ದಾರೆ. ಅವರು ಫೋರ್ಜರಿ ಮಾಡಿರುವ ಶಂಕೆಯಿಂದ ಮೇಲಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಫೋರ್ಜರಿ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಕಲಿ ಲೆಟರ್‌ಹೆಡ್‌ನಲ್ಲಿ ಹೆಸರು ನಮೂದಿಸಿರುವ ಅಮಾಯಕ ‘ಫಲಾನುಭವಿ’ಗಳಿಂದ ಹಣ ವಸೂಲಿ ಮಾಡಿ, ಸಬ್ಸಿಡಿಗೆ ಮಂಜೂರಾತಿ ಪಡೆದಿದ್ದೇವೆ ಎಂದು ನಂಬಿಸಲು ಈ ಮಂಜೂರಾತಿ ಆದೇಶ ಸೃಷ್ಟಿಸಲಾಗಿದೆ.

ಈ ಸಂಬಂಧ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ್ ಪಿ ಬಾಗೇವಾಡಿ ಅವರು ವಿಧಾನಸೌಧ ಪೊಲೀಸರಿಗೆ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ನಿಗಮದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ

NLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!

ಪಂಜಾಬ್: ತಪ್ಪಿದ ಭಾರಿ ಅನಾಹುತ; ಉಗ್ರ ದಾಳಿ ಸಂಚು ವಿಫಲ, 690 ಗ್ರಾಂ IED ಪೊಲೀಸ್ ವಶಕ್ಕೆ

SIR ಪ್ರಕ್ರಿಯೆ ಯಶಸ್ಸು: ಬಿಹಾರ ಚುನಾವಣೆ ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಮತ್ತು ಜಪಾನ್‌ಗಳನ್ನು ಮೀರಿಸಿದೆ: CEC ಜ್ಞಾನೇಶ್ ಕುಮಾರ್

ಭಾರತದ ಹೊಸ ಶಕ್ತಿ ಪ್ರದರ್ಶನ: ಜೆಟ್ ಚಾಲಿತ ಸ್ವದೇಶಿ 'ದಿವ್ಯಾಸ್ತ್ರ Mk3' ಮೊದಲ ಪರೀಕ್ಷೆ ಯಶಸ್ವಿ! Video