ಗೀತಾ ಶಿವರಾಜ ಕುಮಾರ್ 
ರಾಜ್ಯ

1992 ರಲ್ಲಿ ರಾಜೀವ್ ಗಾಂಧಿ ಮಹಿಳಾ ಮೀಸಲಾತಿ ತಂದ ಮೇಲೆ ಇಂದಿರಾ ಗಾಂಧಿ ಪ್ರಧಾನಿಯಾದ್ರು! ಗೀತಾ ಭಾಷಣ ವೈರಲ್

1992ರಲ್ಲಿ ರಾಜೀವ್ ಗಾಂಧಿ ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳೆರಡರಲ್ಲೂ ಶೇ.33.3 ರಷ್ಟು ಮೀಸಲಾತಿ ರಾಜೀವ್ ಗಾಂಧಿ ಜಾರಿಗೆ ತಂದ ಮೇಲೆಯೇ ಇಂದಿರಾ ಗಾಂಧಿ ಪ್ರಧಾನಿಯಾದ್ರು,

ಶಿವಮೊಗ್ಗ: 1992ರಲ್ಲಿ ರಾಜೀವ್ ಗಾಂಧಿ ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳೆರಡರಲ್ಲೂ ಶೇ.33.3 ರಷ್ಟು ಮೀಸಲಾತಿ ರಾಜೀವ್ ಗಾಂಧಿ ಜಾರಿಗೆ ತಂದ ಮೇಲೆಯೇ ಇಂದಿರಾ ಗಾಂಧಿ ಪ್ರಧಾನಿಯಾದರು ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಭಾಷಣದ ವಿಡಿಯೋ ಟ್ರೋಲ್ ಆಗುತ್ತಿದೆ.

ಸಾಮಾನ್ಯವಾಗಿ ಪಂಚಾಯತ್ ಎಲೆಕ್ಷನ್ ಆಗಲಿ ಪುರುಷರಿಗೆ ಜಾಸ್ತಿ ಪ್ರಾತಿನಿಧ್ಯ ಸಿಗುತ್ತಿತ್ತು. ನಮ್ಮ ರಾಜೀವ್ ಗಾಂಧಿಯವರು ಪ್ರೈಮ್ ಮಿನಿಸ್ಟರ್ ಆಗಿದ್ರು. ಅವ್ರು ನಮ್ಮ ಮಹಿಳೆಯರೆಲ್ಲ ಸಮಾನವಾಗಿ ಇರಬೇಕು ಅಂತ 33.3 ಪರ್ಸೆಂಟ್ ಮೀಸಲಾತಿಯನ್ನು ತಂದ್ರು, ಅದಕ್ಕಿಂತ ಮೊದಲು ಮೀಸಲಾತಿ ಅಂತ ನಮ್ಮ ಹೆಣ್ಣು ಮಕ್ಕಳಿಗೆ ಇರಲಿಲ್ಲ, ಪಂಚಾಯತ್‌ನಲ್ಲೇ ಮೀಸಲಾತಿ ಇರಲಿಲ್ಲ ಅಂದ್ರೆ ಎಂಎಲ್ ಎ, ಎಂಪಿ ಆಗೋಕೆ ಹೇಗೆ ಸಾಧ್ಯ, ಮಹಿಳೆಯರು ಉನ್ನತ ಸ್ಥಾನಕ್ಕೆ ಬರೋದು ಹೇಗೆ ಅಂತ ಮೀಸಲಾತಿ ತಂದ್ರು ಎಂದು ಗೀತಾ ಶಿವರಾಜ್‌ಕುಮಾರ್ ಹೇಳಿದ್ದಾರೆ.

ಈ ಮಹಿಳಾ ಮೀಸಲಾತಿ ಅನುಷ್ಠಾನ ಮಾಡಿದ್ರು. ಇದು ಆಗಿದ್ದು 1992ರಲ್ಲಿ ಅಂತ ಗೀತಾ ಶಿವರಾಜ್‌ಕುಮಾರ್ ಹೇಳಿದ್ದಾರೆ. ಇದಾದ ಮೇಲೆ ನಮ್ಮ ಹೆಣ್ಣು ಮಕ್ಕಳು ಎಲ್ಲಿಂದ ಎಲ್ಲಿಗೋ ರೀಚ್ ಆದ್ರು. ಬಹಳ ಧೈರ್ಯ, ಶಕ್ತಿವಂತರು ನಮ್ಮ ಹೆಣ್ಣು ಮಕ್ಕಳು ಅಂತ ಗೀತಾ ಶಿವರಾಜ್‌ಕುಮಾರ್ ಹೇಳಿದ್ದಾರೆ. ಈ ಮೀಸಲಾತಿ ಬಂದ ಮೇಲೆಯೇ ಇಂದಿರಾ ಗಾಂಧಿ ದೇಶದ ಪ್ರಧಾನಿಯಾದ್ರು ಅಂತ ಗೀತಾ ಶಿವರಾಜ್‌ಕುಮಾರ್ ಹೇಳಿದ್ದಾರೆ. ಅಲ್ಲದೇ ಮಾಯಾವತಿ, ಜಯಲಲಿತಾ ಅಂತವರು ಸಿಎಂ ಆದ್ರೂ ಅಂತಲೂ ಗೀತಾ ಶಿವರಾಜ್‌ಕುಮಾರ್ ಹೇಳಿದ್ದಾರೆ. ಗೀತಾ ಅವರ ಈ ಭಾಷಣ ಎಲ್ಲೆಡೆ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT