ಆರಗ ಜ್ಞಾನೇಂದ್ರ 
ರಾಜ್ಯ

ಲೈಂಗಿಕ ಕಿರುಕುಳ ಹಗರಣ: ಎಸ್ಐಟಿ ತನಿಖೆ ದಿಕ್ಕು ತಪ್ಪಿದೆ, ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಿ- ಆರಗ ಜ್ಞಾನೇಂದ್ರ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಸೋರಿಕೆ ಪ್ರಕರಣದ ತನಿಖೆಯು ಪಾರದರ್ಶಕವಾಗಿಲ್ಲ ಎಂದು ಆರೋಪಿಸಿರುವ ಮಾಜಿ ಆರೋಗ್ಯ ಸಚಿವ ಆರಗ ಜ್ಞಾನೇಂದ್ರ, ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಶಿವಮೊಗ್ಗ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಸೋರಿಕೆ ಪ್ರಕರಣದ ತನಿಖೆಯು ಪಾರದರ್ಶಕವಾಗಿಲ್ಲ ಎಂದು ಆರೋಪಿಸಿರುವ ಮಾಜಿ ಆರೋಗ್ಯ ಸಚಿವ ಆರಗ ಜ್ಞಾನೇಂದ್ರ, ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಬುಧವಾರ ಇಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್‌ಐಟಿಯಲ್ಲಿ ಉತ್ತಮ ಸಂಖ್ಯೆಯ ಅಧಿಕಾರಿಗಳಿದ್ದರೂ ಅವರಿಗೆ ತನಿಖೆಯಲ್ಲಿ ಮುಕ್ತ ಹಸ್ತ ನೀಡುತ್ತಿಲ್ಲ. ಅಧಿಕಾರಿಗಳು ಸಿಎಂ ಮತ್ತು ಡಿಸಿಎಂ ಇಬ್ಬರ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

'ಇದು ಹಳೇ ವಿಚಾರವಾಗಿದ್ದು, ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಅವಧಿಯಲ್ಲಿಯೇ ನಡೆದಿತ್ತು. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರಿಗೂ ಈ ಬಗ್ಗೆ ಅರಿವಿತ್ತು. ಆದರೆ ಈಗ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಯ ಭವಿಷ್ಯವನ್ನು ಹಾಳುಮಾಡಲೆಂದು ಕಾಂಗ್ರೆಸ್ ಪೆನ್ ಡ್ರೈವ್ ಬಿಡುಗಡೆ ಮಾಡಿದೆ' ಎಂದು ಅವರು ಹೇಳಿದರು.

'ಪೆನ್ ಡ್ರೈವ್‌ನ ವಿವರಗಳನ್ನು ಹಂಚಿಕೊಂಡವರು ಸಹ ಪ್ರಕರಣದಲ್ಲಿ ಜವಾಬ್ದಾರರಾಗಿರಬೇಕು. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಬ್ಬರೂ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ. ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರನ್ನು ರಾಜಕೀಯದಲ್ಲಿ ಮೂಲೆಗುಂಪು ಮಾಡುವ ಷಡ್ಯಂತ್ರ ಇದಾಗಿದೆ. ಈ ವಿಷಯದ ಹಿಂದೆ ಸಿಎಂ ಮತ್ತು ಡಿಸಿಎಂ ಇಬ್ಬರೂ ಇದ್ದಾರೆ. ನಿಜವಾದ ಅಪರಾಧಿಗಳನ್ನು ರಕ್ಷಿಸಲಾಗುತ್ತಿದೆ ಮತ್ತು ಈ ಪೆನ್ ಡ್ರೈವ್‌ಗಳನ್ನು ಮಲೇಷ್ಯಾದಲ್ಲಿ ಸಿದ್ಧಪಡಿಸಲಾಗಿದೆ ಎಂಬ ವದಂತಿಗಳಿವೆ ಎಂದು ಆರೋಪಿಸಿದರು.

ಈ ಬಗ್ಗೆ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಪತ್ರದ ಮೂಲಕ ತಿಳಿಸಿರುವ ವಕೀಲ ದೇವರಾಜೇಗೌಡ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಆರಗ, ಈ ವಿಷಯ ತಮಗೆ ತಿಳಿದಿಲ್ಲ. ಆದರೆ, ನಾಲ್ಕು ವರ್ಷಗಳ ಹಿಂದೆಯೇ ಈ ವಿಚಾರ ಕಾಂಗ್ರೆಸ್ ನಾಯಕರಿಗೆ ತಿಳಿದಿದ್ದರೂ, ಚುನಾವಣೆಯ ಕೊನೆಯ ಘಳಿಗೆಯಲ್ಲಿ ಈ ವಿಚಾರವನ್ನು ಮುನ್ನಲೆಗೆ ತಂದಿದ್ದು ಏಕೆ ಎಂದು ಪ್ರಶ್ನಿಸಿದರು. ಒಕ್ಕಲಿಗ ಸಮುದಾಯದ ನಾಯಕತ್ವದ ಸಮಸ್ಯೆಯೂ ಇದರ ಹಿಂದೆ ಪ್ರಮುಖ ಪಾತ್ರ ವಹಿಸುತ್ತಿರಬಹುದು ಎಂಬ ಅನುಮಾನ ವ್ಯಕ್ತಪಡಿಸಿದರು. ಅಲ್ಲದೆ, ಯಾವುದೇ ಪ್ರಭಾವದ ಹೊರತಾಗಿಯೂ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸಂಸದ ಬಿವೈ ರಾಘವೇಂದ್ರ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT