ಆರಗ ಜ್ಞಾನೇಂದ್ರ 
ರಾಜ್ಯ

ಲೈಂಗಿಕ ಕಿರುಕುಳ ಹಗರಣ: ಎಸ್ಐಟಿ ತನಿಖೆ ದಿಕ್ಕು ತಪ್ಪಿದೆ, ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಿ- ಆರಗ ಜ್ಞಾನೇಂದ್ರ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಸೋರಿಕೆ ಪ್ರಕರಣದ ತನಿಖೆಯು ಪಾರದರ್ಶಕವಾಗಿಲ್ಲ ಎಂದು ಆರೋಪಿಸಿರುವ ಮಾಜಿ ಆರೋಗ್ಯ ಸಚಿವ ಆರಗ ಜ್ಞಾನೇಂದ್ರ, ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಶಿವಮೊಗ್ಗ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಸೋರಿಕೆ ಪ್ರಕರಣದ ತನಿಖೆಯು ಪಾರದರ್ಶಕವಾಗಿಲ್ಲ ಎಂದು ಆರೋಪಿಸಿರುವ ಮಾಜಿ ಆರೋಗ್ಯ ಸಚಿವ ಆರಗ ಜ್ಞಾನೇಂದ್ರ, ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಬುಧವಾರ ಇಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್‌ಐಟಿಯಲ್ಲಿ ಉತ್ತಮ ಸಂಖ್ಯೆಯ ಅಧಿಕಾರಿಗಳಿದ್ದರೂ ಅವರಿಗೆ ತನಿಖೆಯಲ್ಲಿ ಮುಕ್ತ ಹಸ್ತ ನೀಡುತ್ತಿಲ್ಲ. ಅಧಿಕಾರಿಗಳು ಸಿಎಂ ಮತ್ತು ಡಿಸಿಎಂ ಇಬ್ಬರ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

'ಇದು ಹಳೇ ವಿಚಾರವಾಗಿದ್ದು, ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಅವಧಿಯಲ್ಲಿಯೇ ನಡೆದಿತ್ತು. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರಿಗೂ ಈ ಬಗ್ಗೆ ಅರಿವಿತ್ತು. ಆದರೆ ಈಗ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಯ ಭವಿಷ್ಯವನ್ನು ಹಾಳುಮಾಡಲೆಂದು ಕಾಂಗ್ರೆಸ್ ಪೆನ್ ಡ್ರೈವ್ ಬಿಡುಗಡೆ ಮಾಡಿದೆ' ಎಂದು ಅವರು ಹೇಳಿದರು.

'ಪೆನ್ ಡ್ರೈವ್‌ನ ವಿವರಗಳನ್ನು ಹಂಚಿಕೊಂಡವರು ಸಹ ಪ್ರಕರಣದಲ್ಲಿ ಜವಾಬ್ದಾರರಾಗಿರಬೇಕು. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಬ್ಬರೂ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ. ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರನ್ನು ರಾಜಕೀಯದಲ್ಲಿ ಮೂಲೆಗುಂಪು ಮಾಡುವ ಷಡ್ಯಂತ್ರ ಇದಾಗಿದೆ. ಈ ವಿಷಯದ ಹಿಂದೆ ಸಿಎಂ ಮತ್ತು ಡಿಸಿಎಂ ಇಬ್ಬರೂ ಇದ್ದಾರೆ. ನಿಜವಾದ ಅಪರಾಧಿಗಳನ್ನು ರಕ್ಷಿಸಲಾಗುತ್ತಿದೆ ಮತ್ತು ಈ ಪೆನ್ ಡ್ರೈವ್‌ಗಳನ್ನು ಮಲೇಷ್ಯಾದಲ್ಲಿ ಸಿದ್ಧಪಡಿಸಲಾಗಿದೆ ಎಂಬ ವದಂತಿಗಳಿವೆ ಎಂದು ಆರೋಪಿಸಿದರು.

ಈ ಬಗ್ಗೆ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಪತ್ರದ ಮೂಲಕ ತಿಳಿಸಿರುವ ವಕೀಲ ದೇವರಾಜೇಗೌಡ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಆರಗ, ಈ ವಿಷಯ ತಮಗೆ ತಿಳಿದಿಲ್ಲ. ಆದರೆ, ನಾಲ್ಕು ವರ್ಷಗಳ ಹಿಂದೆಯೇ ಈ ವಿಚಾರ ಕಾಂಗ್ರೆಸ್ ನಾಯಕರಿಗೆ ತಿಳಿದಿದ್ದರೂ, ಚುನಾವಣೆಯ ಕೊನೆಯ ಘಳಿಗೆಯಲ್ಲಿ ಈ ವಿಚಾರವನ್ನು ಮುನ್ನಲೆಗೆ ತಂದಿದ್ದು ಏಕೆ ಎಂದು ಪ್ರಶ್ನಿಸಿದರು. ಒಕ್ಕಲಿಗ ಸಮುದಾಯದ ನಾಯಕತ್ವದ ಸಮಸ್ಯೆಯೂ ಇದರ ಹಿಂದೆ ಪ್ರಮುಖ ಪಾತ್ರ ವಹಿಸುತ್ತಿರಬಹುದು ಎಂಬ ಅನುಮಾನ ವ್ಯಕ್ತಪಡಿಸಿದರು. ಅಲ್ಲದೆ, ಯಾವುದೇ ಪ್ರಭಾವದ ಹೊರತಾಗಿಯೂ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸಂಸದ ಬಿವೈ ರಾಘವೇಂದ್ರ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT