ಹೆಚ್ ಡಿ ರೇವಣ್ಣ 
ರಾಜ್ಯ

ಜೈಲು ಪಾಲಾದ ಹೆಚ್ ಡಿ ರೇವಣ್ಣ ಅಮಾನತಿಗೆ ಪಕ್ಷದಲ್ಲಿ ಹೆಚ್ಚಿದ ಒತ್ತಡ, ಇಂದು ಜಾಮೀನು ಭವಿಷ್ಯ ನಿರ್ಧಾರ

ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕೆಂಬ ಒತ್ತಡ ಹೆಚ್ಚಾಗುತ್ತಿದೆ.

ಬೆಂಗಳೂರು: ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕೆಂಬ ಒತ್ತಡ ಹೆಚ್ಚಾಗುತ್ತಿದೆ.

ಹೆಚ್.ಡಿ.ರೇವಣ್ಣ ಅವರನ್ನು ಅಮಾನತು ಮಾಡಬೇಕೆಂದು ಪಕ್ಷದ ಮುಖಂಡರು ಒತ್ತಾಯಿಸುತ್ತಿದ್ದಾರೆ. ಇದೀಗ ರೇವಣ್ಣ ವಿರುದ್ಧ ಕೇಳಿಬಂದಿರುವ ಆರೋಪಗಳು ಹಾಗೂ ಅವರನ್ನು ಎಸ್‌ಐಟಿ ತಂಡ ಬಂಧಿಸಿ ಜೈಲುಪಾಲಾಗಿರುವುದು ಪಕ್ಷದ ಕಾರ್ಯಕರ್ತರು ಮುಜುಗರ ಎದುರಿಸುವಂತಾಗಿದೆ. ಪಕ್ಷದ ಬಗ್ಗೆ ನಾಯಕರಿಗೆ ಗಟ್ಚಿಯಾಗಿ ಮಾತನಾಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ಕೂಡಲೇ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕೆಂದು ಆಗ್ರಹಿಸಿದ್ದಾರೆ.

ಇಂದು ಕೋರ್ ಕಮಿಟಿ ಸಭೆ: ಜೆಡಿಎಸ್ ಕೋರ್ ಸಮಿತಿ ಸಭೆ ಇಂದು ಬೆಂಗಳೂರಿನಲ್ಲಿ ನಡೆಯಲಿದ್ದು ಅದರಲ್ಲಿ ಹೆಚ್ ಡಿ ರೇವಣ್ಣ ಅಮಾನತಿನ ಕುರಿತು ನಿರ್ಧಾರವಾಗಲಿದೆ ಎಂದು ತಿಳಿದುಬಂದಿದೆ.

ಎಸ್ ಐಟಿ ಕಸ್ಟಡಿಯಲ್ಲಿದ್ದ ಹೆಚ್ ಡಿ ರೇವಣ್ಣ ಅವರನ್ನು ಬೆಂಗಳೂರಿನ 17ನೇ ಎಸಿಎಂಎಂ ಕೋರ್ಟ್ 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದು ಅವರೀಗ ಕೈದಿ ನಂಬರ್ 4567 ಆಗಿದ್ದಾರೆ.

ಇಂದು ಜಾಮೀನು ಭವಿಷ್ಯ ನಿರ್ಧಾರ: ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ರೇವಣ್ಣ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ. ಒಂದು ವೇಳೆ ಜಾಮೀನು ಸಿಗದ್ದಿದ್ದರೆ ಮೇ 14ರವರೆಗೆ ರೇವಣ್ಣ ಜೈಲಿನಲ್ಲೇ ಇರಬೇಕಾಗುತ್ತದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾತ್ರಿ ಕಳೆದ ರೇವಣ್ಣ: ರಾಜಕಾರಣಿಯಾಗಿ, ಶಾಸಕರಾಗಿ ಐಷಾರಾಮಿ ಜೀವನ ನಡೆಸಿದ್ದ ರೇವಣ್ಣ, ಸೆಂಟ್ರಲ್ ಜೈಲಿನ ಕ್ವಾರಂಟೈನ್ ಸೆಲ್​ನಲ್ಲಿ ಕಳೆದ ರಾತ್ರಿ ಕಳೆದಿದ್ದಾರೆ. ರಾತ್ರಿ ನೀಡಿದ್ದ ಮುದ್ದೆ, ಚಪಾತಿ, ರೈಸ್, ಸಾಂಬಾರ್ ತಡವಾಗಿ ಸೇವಿಸಿದ್ದಾರೆ. ಇತರೆ ಕೈದಿಗಳಂತೆ ಜೈಲಿನಲ್ಲಿ ನೀಡುವ ಊಟವನ್ನೇ ಅವರು ಸೇವಿಸಿದ್ದಾರೆ. ಮನೆಯವರು ತಂದು ಕೊಟ್ಟಿರುವ ಬಟ್ಟೆಯನ್ನು ಪಡೆದಿದ್ದಾರೆ.

ರಾತ್ರಿ ತಡವಾಗಿ ಊಟ ಮಾಡಿ ಮೌನಕ್ಕೆ ಜಾರಿದ್ದಾರೆ. ರಾತ್ರಿ 1 ಗಂಟೆಯವರೆಗೆ ನಿದ್ರೆ ಮಾಡದೆ ಯೋಚಿಸುತ್ತಿದ್ದರು. ಬಳಿಕ ಜೈಲಿನ ಕೊಠಡಿಯಲ್ಲಿ ನಿದ್ರೆಗೆ ಜಾರಿದ್ದಾರೆ. ಇನ್ನು ಹೆಚ್​.ಡಿ.ರೇವಣ್ಣ ಆರೋಗ್ಯ ಸರಿ‌ ಇಲ್ಲದ ಕಾರಣ ನಿನ್ನೆ ರಾತ್ರಿ ಜೈಲಾಧಿಕಾರಿಗಳು ಅವರ ಮೇಲೆ ಹೆಚ್ಚು ನಿಗಾ ಇಟ್ಟಿದ್ದರು. ರೇವಣ್ಣ ಇದ್ದ ಕೊಠಡಿ ಬಳಿ ಓರ್ವ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು. ಇಂದು ಬೆಳಗ್ಗೆ 5.30ಕ್ಕೆ ನಿದ್ರೆಯಿಂದ ಎದಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT