ಪ್ರಾತಿನಿಧಿಕ ಚಿತ್ರ 
ರಾಜ್ಯ

ಬೆಳಗಾವಿ: ಮದುವೆಯಾಗುವಂತೆ ಅಪ್ರಾಪ್ತೆಗೆ ಒತ್ತಾಯ; ಜೋಡಿ ಕೊಲೆ ಮಾಡಿದ್ದ ಆರೋಪಿ ತಂದೆಯ ಬಂಧನ

ತನ್ನನ್ನು ಮದುವೆಯಾಗುವಂತೆ ಅಪ್ರಾಪ್ತ ಬಾಲಕಿಯನ್ನು ಒತ್ತಾಯಿಸುತ್ತಿದ್ದ ಯುವಕನನ್ನು ಮತ್ತು ಆತನ ರಕ್ಷಣೆಗೆ ಧಾವಿಸಿದ ಹಿರಿಯ ಸೋದರನನ್ನು ಬಾಲಕಿಯ ತಂದೆ ಹತ್ಯೆಗೈದಿರುವ ಘಟನೆ ಸವದತ್ತಿ ತಾಲ್ಲೂಕಿನ ದುಂಡನಕೊಪ್ಪ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಬೆಳಗಾವಿ: ತನ್ನನ್ನು ಮದುವೆಯಾಗುವಂತೆ ಅಪ್ರಾಪ್ತ ಬಾಲಕಿಯನ್ನು ಒತ್ತಾಯಿಸುತ್ತಿದ್ದ ಯುವಕನನ್ನು ಮತ್ತು ಆತನ ರಕ್ಷಣೆಗೆ ಧಾವಿಸಿದ ಹಿರಿಯ ಸೋದರನನ್ನು ಬಾಲಕಿಯ ತಂದೆ ಹತ್ಯೆಗೈದಿರುವ ಘಟನೆ ಸವದತ್ತಿ ತಾಲ್ಲೂಕಿನ ದುಂಡನಕೊಪ್ಪ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಮೃತ ಯುವಕರನ್ನು ಸವದತ್ತಿ ತಾಲ್ಲೂಕಿನ ದುಂಡನಕೊಪ್ಪ ಗ್ರಾಮದ ಮಾಯಪ್ಪ ಸೋಮಪ್ಪ ಹಳೇಗುಡಿ (20) ಮತ್ತು ಅವರ ಅಣ್ಣ ಯಲ್ಲಪ್ಪ ಸೋಮಪ್ಪ ಹಳೆಗುಡಿ (22) ಎಂದು ಗುರುತಿಸಲಾಗಿದೆ. ಆರೋಪಿಯನ್ನು ದುಂಡನಕೊಪ್ಪ ಗ್ರಾಮದ ನಿವಾಸಿ ಫಕೀರಪ್ಪ ಮಾರುತಿ ಭಾವಿಹಾಳ್ (50) ಎಂದು ಗುರುತಿಸಲಾಗಿದ್ದು, ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮೂಲಗಳ ಪ್ರಕಾರ, ಆರೋಪಿ ಫಕೀರಪ್ಪನಿಗೆ ಮಗಳಿದ್ದಾಳೆ. ಸಂತ್ರಸ್ತ ಮಾಯಪ್ಪ ಅಪ್ರಾಪ್ತ ಬಾಲಕಿಯನ್ನು ತಾನು ಪ್ರೀತಿಸುತ್ತಿರುವುದಾಗಿಯೂ ಮತ್ತು ಆಕೆಗೂ ತನ್ನ ಮೇಲೆ ಪ್ರೀತಿ ಇರುವುದಾಗಿಯೂ ಆಕೆಯ ಪೋಷಕರಿಗೆ ಹೇಳುತ್ತಿದ್ದ. ಆಕೆಯನ್ನು ಮದುವೆ ಮಾಡಿಕೊಡುವಂತೆ ಪದೇ ಪದೆ ಒತ್ತಾಯಿಸುತ್ತಿದ್ದ.

ಮೃತರು ಪದೇ ಪದೇ ಈ ವಿಷಯವನ್ನು ಪ್ರಸ್ತಾಪಿಸಿ ಕುಟುಂಬಕ್ಕೆ ತೊಂದರೆ ನೀಡುತ್ತಿದ್ದರು. ಈತನ ವರ್ತನೆಯಿಂದ ಕೋಪಗೊಂಡ ಫಕೀರಪ್ಪ ಮಂಗಳವಾರ ರಾತ್ರಿ ಮತ್ತೊಮ್ಮೆ ಪ್ರಸ್ತಾವನೆಯೊಂದಿಗೆ ಬಂದಾಗ ಮಾಯಪ್ಪನ ಎದೆ ಹಾಗೂ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾರೆ, ಇದನ್ನು ತಡೆಯಲು ಯತ್ನಿಸಿದ ಅಣ್ಣ ಯಲ್ಲಪ್ಪನಿಗೂ ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಮುರಗೋಡು ಠಾಣೆಯ ಪೊಲೀಸರು ಆಗಮಿಸಿ ಯಲ್ಲಪ್ಪನನ್ನು ಗ್ರಾಮಸ್ಥರ ಸಹಾಯದಿಂದ ಆಸ್ಪತ್ರೆಗೆ ಸಾಗಿಸಿದ್ದು, ಮಾಯಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಯಲ್ಲಪ್ಪ ಬುಧವಾರ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಫಕೀರಪ್ಪನನ್ನು ಬಂಧಿಸಿರುವ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT