ಪ್ರಾತಿನಿಧಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಮಳೆ ಅವಾಂತರ: ರಸ್ತೆಗಳು ಜಲಾವೃತ, ಸಂಚಾರ ಅಸ್ತವ್ಯಸ್ತ

ಬುಧವಾರ ಸಂಜೆ ಸುರಿದ ಮಳೆಗೆ ಬೆಂಗಳೂರಿನ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಯಿತು. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ನಗರದಲ್ಲಿ ಸರಾಸರಿ 17.9 ಮಿಮೀ ಮಳೆಯಾಗಿದೆ.

ಬೆಂಗಳೂರು: ಬುಧವಾರ ಸಂಜೆ ಸುರಿದ ಮಳೆಗೆ ಬೆಂಗಳೂರಿನ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಯಿತು. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ನಗರದಲ್ಲಿ ಸರಾಸರಿ 17.9 ಮಿಮೀ ಮಳೆಯಾಗಿದೆ.

ಬೆಂಗಳೂರು ಟ್ರಾಫಿಕ್ ಪೊಲೀಸರ ಪ್ರಕಾರ, ಮಳೆ ಮತ್ತು ಜಲಾವೃತದಿಂದಾಗಿ ಜಯಮಹಲ್ ರಸ್ತೆ, ವೀರಣ್ಣ ಪಾಳ್ಯದಿಂದ ಹೆಬ್ಬಾಳ ವೃತ್ತ, ಬೆನ್ನಿಗಾನಹಳ್ಳಿ ರೈಲ್ವೆ ಸೇತುವೆ ಮತ್ತು ಇತರೆಡೆ ಸಂಜೆ 5.30 ರಿಂದ 6.45ರ ನಡುವೆ ನಿಧಾನಗತಿಯ ಸಂಚಾರ ವರದಿಯಾಗಿದೆ. ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲು ಸಂಚಾರಿ ಪೊಲೀಸ್ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ.

ಕಾಮಾಕ್ಷಿ ಪಾಳ್ಯ ಸಂಚಾರ ಪೊಲೀಸರು ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಹೊಂಡದಲ್ಲಿ ತುಂಬಿಕೊಂಡಿದ್ದ ಹೂಳು ಮತ್ತು ಕಸವನ್ನು ತೆರವುಗೊಳಿಸಿದರು. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯ ತಿಮ್ಮಯ್ಯ ರಸ್ತೆಯಲ್ಲಿ ಮತ್ತು ಬ್ಯಾಡರಹಳ್ಳಿ ಪೊಲೀಸ್ ವ್ಯಾಪ್ತಿಯ ಅಂಜನಾ ನಗರದಲ್ಲಿ ಮರವೊಂದು ಆಟೋರಿಕ್ಷಾ ಮೇಲೆ ಬಿದ್ದಿದೆ.

ತೀವ್ರ ಗಾಳಿಯಿಂದಾಗಿ ಮರಗಳು ಮತ್ತು ಕೊಂಬೆಗಳು ಬೀಳುವ ಕುರಿತು ಬಿಬಿಎಂಪಿ ನಿಯಂತ್ರಣ ಕೊಠಡಿಗೆ 152 ದೂರುಗಳು ಬಂದಿದ್ದು, 40 ತುರ್ತು ಆಧಾರದ ಮೇಲೆ ದಾಖಲಾಗಿವೆ.

ವರುಣಮಿತ್ರ ಆ್ಯಪ್ ಪ್ರಕಾರ, ಆರ್‌ಆರ್ ನಗರದ ದೊಡ್ಡಬಿದರಕಲ್ಲುವಿನಲ್ಲಿ 66ಮಿ.ಮೀ, ಪಶ್ಚಿಮ ವಲಯದ ನಾಯಂಡಹಳ್ಳಿ 51.50ಮಿ.ಮೀ, ರಾಜರಾಜೇಶ್ವರಿ ನಗರ ವಾರ್ಡ್ 51ಮಿ.ಮೀ, ಮಾರುತಿ ಮಂದಿರ ವಾರ್ಡ್ 41ಮಿ.ಮೀ, ದಕ್ಷಿಣ ವಲಯದ ವಿದ್ಯಾಪೀಠ 37.50ಮಿ.ಮೀ, ವಿ ನಾಗೇನಹಳ್ಳಿ 30.5.0ಮಿಮೀ, ಕೆಂಗೇರಿಯಲ್ಲಿ 24 ಮಿ.ಮೀ ಮತ್ತು ಬೊಮ್ಮನಹಳ್ಳಿ ವಲಯದ ಗೊಟ್ಟಿಗೆರೆಯಲ್ಲಿ ಬುಧವಾರ ಸಂಜೆ 22 ಮಿ.ಮೀ ಮಳೆ ದಾಖಲಾಗಿದೆ.

ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ

ಚಂಡಮಾರುತದ ಪರಿಚಲನೆಯು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಗೆ ಕಾರಣವಾಗಲಿದೆ. ಸದ್ಯದ ಹವಾಮಾನ ಪರಿಸ್ಥಿತಿಗಳ ಕಾರಣ, ಮುಂದಿನ ಏಳು ದಿನಗಳ ಕಾಲ ಗುಡುಗು ಸಹಿತ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಮೇ 8 ಮತ್ತು ಮೇ 11 ರ ನಡುವೆ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ ಮತ್ತು ಮೇ 12 ರಿಂದ ಕರ್ನಾಟಕದಾದ್ಯಂತ ಸಾಧಾರಣ ಮಳೆಯನ್ನು ನಿರೀಕ್ಷಿಸಬಹುದು ಎಂದು ಹವಾಮಾನ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT