ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ಬಿ.ಎನ್.ಜಗದೀಶ 
ರಾಜ್ಯ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕೇಸು: SPP ಬಿ ಎನ್ ಜಗದೀಶ್ ರಾಜೀನಾಮೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಗಳಲ್ಲಿ ವಿಶೇಷ ತನಿಖಾ ತಂಡ (SIT) ಪರ ವಾದಿಸುತ್ತಿರುವ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (SPP) ಬಿಎನ್ ಜಗದೀಶ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರಿಂದಾಗಿ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆಯುಂಟಾಗಿದೆ.

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಗಳಲ್ಲಿ ವಿಶೇಷ ತನಿಖಾ ತಂಡ (SIT) ಪರ ವಾದಿಸುತ್ತಿರುವ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (SPP) ಬಿಎನ್ ಜಗದೀಶ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರಿಂದಾಗಿ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆಯುಂಟಾಗಿದೆ.

ಎಸ್‌ಐಟಿ ರಚನೆಯಾಗಿರುವ ಅಪರಾಧ ತನಿಖಾ ವಿಭಾಗದ (CID) ಮುಖ್ಯಸ್ಥರಿಗೆ ಅವರ ರಾಜೀನಾಮೆಯನ್ನು ದೃಢಪಡಿಸಿದ ಮೂಲಗಳು, ವಿಚಾರಣಾ ನ್ಯಾಯಾಲಯ ಮತ್ತು ಸೆಷನ್‌ಗಳ ಮುಂದೆ ಪ್ರಾಸಿಕ್ಯೂಷನ್ ನ್ನು ಸಮರ್ಥಿಸಲು ರಾಜ್ಯ ಸರ್ಕಾರವು ಇಬ್ಬರು ಹಿರಿಯ ವಕೀಲರನ್ನು ಹೆಚ್ಚುವರಿ ಎಸ್‌ಪಿಪಿಗಳಾಗಿ ನೇಮಿಸಿದ ನಂತರ ಜಗದೀಶ್ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ನ್ಯಾಯಾಲಯ ವ್ಯವಹರಿಸುತ್ತದೆ.

ಹೆಚ್ಚುವರಿ ಎಸ್‌ಪಿಪಿಗಳ ನೇಮಕ;

ಹಿರಿಯ ವಕೀಲರಾದ ಅಶೋಕ್ ಎನ್ ನಾಯಕ್ ಮತ್ತು ಜಯ್ನಾ ಕೊಠಾರಿ ಅವರನ್ನು ಹೆಚ್ಚುವರಿ ಎಸ್‌ಪಿಪಿಗಳಾಗಿ ಸರ್ಕಾರ ನೇಮಿಸಿದೆ. ಈ ಎರಡು ನೇಮಕಾತಿಗಳು ತನ್ನದೇ ಆದ ಕಾರಣಗಳಿಗಾಗಿ ಜಗದೀಶ ಅವರನ್ನು ಬದಲಾಯಿಸಲು ರಾಜ್ಯ ಸರ್ಕಾರ ನಡೆಸಿದ ಪ್ರಯತ್ನವಾಗಿದೆ ಎಂದು ಮೂಲಗಳು ತಿಳಿಸಿವೆ.

ಆದರೆ, ಯಾವುದೇ ಸಕಾರಣವಿಲ್ಲದೇ ಏಕಾಏಕಿ ಬದಲಾವಣೆ ಮಾಡಿದರೆ ತಪ್ಪು ಸಂದೇಶ ಬರಲಿದೆ ಎಂದು ಮನಗಂಡ ರಾಜ್ಯ ಸರ್ಕಾರ, ಬದಲಿ ಅಧಿಸೂಚನೆ ಹೊರಡಿಸುವ ಮುನ್ನವೇ ಹಿಂಪಡೆದಿದ್ದು, ಇಬ್ಬರು ಹಿರಿಯ ವಕೀಲರನ್ನು ಹೆಚ್ಚುವರಿ ಎಸ್‌ಪಿಪಿಗಳನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ.

ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸುತ್ತಿದ್ದ ವಿಶೇಷ ನ್ಯಾಯಾಲಯ ಹಾಗೂ ಶಾಸಕರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಎಸ್‌ಐಟಿ ಪರವಾಗಿ ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಜಗದೀಶ ಹಾಜರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT