ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ತಣ್ಣೀರಬಾವಿ ಬೀಚ್ ಬಳಿ ಪ್ರಯಾಣಿಕರ ಹತ್ತಿಸಿಕೊಂಡಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ

ಮಂಗಳೂರಿನಲ್ಲಿ ಗುರುವಾರದಂದು ತಣ್ಣೀರಬಾವಿ ಬೀಚ್ ಬಳಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದ ಆಟೋ ಚಾಲಕನ ಮೇಲೆ ಕೆಲವು ಆಟೋ ರಿಕ್ಷಾ ಚಾಲಕರು ಹಲ್ಲೆ ನಡೆಸಿದ್ದಾರೆ.

ಮಂಗಳೂರು: ಮಂಗಳೂರಿನಲ್ಲಿ ಗುರುವಾರದಂದು ತಣ್ಣೀರಬಾವಿ ಬೀಚ್ ಬಳಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದ ಆಟೋ ಚಾಲಕನ ಮೇಲೆ ಕೆಲವು ಆಟೋ ರಿಕ್ಷಾ ಚಾಲಕರು ಹಲ್ಲೆ ನಡೆಸಿದ್ದಾರೆ.

ಮೊಹಮ್ಮದ್ ಅರಾಫತ್ ಹಲ್ಲೆಗೊಳಗಾದ ಆಟೋ ಚಾಲಕನಾಗಿದ್ದು, ಈ ಬಗ್ಗೆ ಮಾತನಾಡಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು, 'ಅರಾಫತ್ ಕೆಲವು ಪ್ರಯಾಣಿಕರನ್ನು ಬೀಚ್ ಬಳಿ ಇಳಿಸಲು ಹೋದಾಗ ಈ ಘಟನೆ ನಡೆದಿದೆ.

ಅವರು ಪ್ರಯಾಣಿಕರನ್ನು ಇಳಿಸಿ ಹಿಂತಿರುಗುತ್ತಿದ್ದಾಗ, ಅಲ್ಲಿದ್ದ ಇತರೆ ಆಟೋ ಚಾಲಕರು ರಿಕ್ಷಾ ಚಾಲಕರು ವಿರೋಧಿಸಿ ಗಲಾಟೆ ಮಾಡಿದದರು ಎಂದು ಹೇಳಿದ್ದಾರೆ.

ಆದರೆ ಈ ವೇಳೆ ಸ್ಥಳೀಯ ಆಟೊ ಚಾಲಕರು ಅರಾಫತ್‌ನನ್ನು ಸಮಾಧಾನಪಡಿಸಿದ್ದಾರೆ. ಆ ಬಳಿಕವೂ ಅರಾಫತ್ ಸ್ಥಳದಲ್ಲಿ ಪ್ರಯಾಣಿಕರಿಗಾಗಿ ದೀರ್ಘಕಾಲ ಕಾಯುತ್ತಿದ್ದರು. ಇದರಿಂದ ವಾಗ್ವಾದ ನಡೆದು ಸ್ಥಳೀಯ ಮೂವರು ಆಟೋ ಚಾಲಕರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT