ಬೆಂಗಳೂರು ಟರ್ಫ್ ಕ್ಲಬ್‌ PTI
ರಾಜ್ಯ

ಬೆಂಗಳೂರು ಟರ್ಫ್ ಕ್ಲಬ್‌ ಬುಕ್ಕಿಗಳ ವಿರುದ್ಧದ ತೆರಿಗೆ ವಂಚನೆ ಪ್ರಕರಣದ ರದ್ದತಿಗೆ ಹೈಕೋರ್ಟ್ ನಕಾರ

ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಬುಕ್ಕಿಗಳು ತೆರಿಗೆ ವಂಚನೆ ಎಸಗಿದ್ದಾರೆ ಎಂಬ ಆರೋಪದ ಪ್ರಕರಣವನ್ನು ವಜಾಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದ್ದು, ತನಿಖೆಯ ಸಂದರ್ಭದಲ್ಲಿ ಸಂಗ್ರಹಿಸಲಾದ ಸಾಕ್ಷ್ಯವು ಸಂಭಾವ್ಯ ಅಪರಾಧವನ್ನು ಸೂಚಿಸುತ್ತದೆ ಎಂದು ಹೇಳಿದೆ.

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಬುಕ್ಕಿಗಳು ತೆರಿಗೆ ವಂಚನೆ ಎಸಗಿದ್ದಾರೆ ಎಂಬ ಆರೋಪದ ಪ್ರಕರಣವನ್ನು ವಜಾಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದ್ದು, ತನಿಖೆಯ ಸಂದರ್ಭದಲ್ಲಿ ಸಂಗ್ರಹಿಸಲಾದ ಸಾಕ್ಷ್ಯವು ಸಂಭಾವ್ಯ ಅಪರಾಧವನ್ನು ಸೂಚಿಸುತ್ತದೆ ಎಂದು ಹೇಳಿದೆ.

ಬುಕ್ಕಿಗಳು ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ಪೀಠ ಈ ಆದೇಶ ನೀಡಿದೆ. ಕರ್ನಾಟಕ ಪೊಲೀಸ್ ಕಾಯಿದೆ, ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಕರ್ನಾಟಕ ರೇಸ್ ಬೆಟ್ಟಿಂಗ್ ಕಾಯಿದೆಯಡಿ ಜನವರಿಯಲ್ಲಿ ಪ್ರಕರಣ ದಾಖಲಾಗಿತ್ತು. ಬುಕ್ಕಿಗಳು ಸರಿಯಾದ ನೋಂದಣಿ ಇಲ್ಲದೆ ಬೆಟ್ಟಿಂಗ್ ಸ್ವೀಕರಿಸುತ್ತಿದ್ದಾರೆ ಎಂಬ ಮಾಹಿತಿಯ ಮೇರೆಗೆ ದಾಳಿ ನಡೆಸಿದ್ದಾಗ ತೆರಿಗೆ ವಂಚನೆ ಬೆಳಕಿಗೆ ಬಂದಿತ್ತು. ದಾಳಿ ವೇಳೆ ಅಧಿಕಾರಿಗಳು 3.47 ಕೋಟಿ ರೂಪಾಯಿ ವಶಕ್ಕೆ ಪಡೆದುಕೊಂಡಿದ್ದರು.

ಹೈಕೋರ್ಟ್ ನಲ್ಲಿ ವಿಚಾರಣೆ ವೇಳೆ ಬುಕ್ಕಿಗಳು ಪರವಾನಗಿ ಪಡೆದಿದ್ದಾರೆ ಎಂದು ವಕೀಲರು ವಾದಿಸಿದರು. ಅಲ್ಲದೆ IPC ಯ ವಂಚನೆಯ ಸೆಕ್ಷನ್‌ನ ಅನ್ವಯವನ್ನು ಪ್ರಶ್ನಿಸಿದರು. ಇತರ ನಿಬಂಧನೆಗಳ ನಾನ್-ಕಾಗ್ನೈಸಬಲ್ ಸ್ವಭಾವದ ಕಾರಣದಿಂದಾಗಿ ಇದನ್ನು ಅನ್ವಯಿಸಲಾಗಿದೆ ಎಂದು ವಾದಿಸಿದರು.

ಇದಕ್ಕೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, ಬುಕ್ಕಿಗಳು ಸಂಗ್ರಹಿಸಿದ ಜಿಎಸ್‌ಟಿಗೆ ರಸೀದಿಗಳನ್ನು ನೀಡಲು ವಿಫಲರಾಗಿದ್ದಾರೆ. ಇನ್ನು ಟಿಡಿಎಸ್‌ಗೆ ದಾಖಲೆಗಳ ಕೊರತೆಯನ್ನು ಉಲ್ಲೇಖಿಸಿ ಮೂಲದಲ್ಲಿ ತೆರಿಗೆ ಕಡಿತಗೊಳಿಸಲಾಗಿದೆ ಎಂದು ವಾದಿಸಿದರು. ವರದಿಯಾದ ಬೆಟ್ ಮೊತ್ತಗಳು ಮತ್ತು ನಿರ್ದಿಷ್ಟ ಅವಧಿಯಲ್ಲಿ ನಿರೀಕ್ಷಿತ ಸರಾಸರಿಗಳ ನಡುವಿನ ವ್ಯತ್ಯಾಸಗಳನ್ನು ಎತ್ತಿ ತೋರಿಸಿದರು.

GST ಮತ್ತು TDS ಪಾವತಿಗಳಿಗೆ ಗಣನೀಯ ಮೊತ್ತದ ದುರುಪಯೋಗವನ್ನು ಒಳಗೊಂಡಿರುವ ಗಂಭೀರ ಅಪರಾಧವನ್ನು ಆರೋಪಗಳು ಮತ್ತು ಸಾಕ್ಷ್ಯಗಳು ಸೂಚಿಸುತ್ತವೆ ಎಂದು ನ್ಯಾಯಾಲಯವು ಇತ್ತೀಚಿನ ಆದೇಶದಲ್ಲಿ ತೀರ್ಮಾನಿಸಿದ್ದು ಈ ಹಿನ್ನೆಲೆಯಲ್ಲಿ ಬುಕ್ಕಿಗಳ ಅರ್ಜಿಯನ್ನು ವಜಾಗೊಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT