ಡಾ. ಜಿ.ಪರಮೇಶ್ವರ್ 
ರಾಜ್ಯ

ಸೆಕ್ಸ್ ವೀಡಿಯೋ ಪ್ರಕರಣ: ಸಂತ್ರಸ್ತೆಗೆ ಬೆದರಿಕೆ ಕುರಿತು NCW ಮಾಹಿತಿ ಹಂಚಿಕೊಳ್ಳಲು ಗೃಹ ಸಚಿವ ಪರಮೇಶ್ವರ್ ಸೂಚನೆ

ಸೆಕ್ಸ್ ವೀಡಿಯೋ ಪ್ರಕರಣದಲ್ಲಿ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ದಾಖಲಿಸಿರುವ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿರುವ ಕುರಿತು ವಿಶೇಷ ತನಿಖಾ ತಂಡದೊಂದಿಗೆ (ಎಸ್‌ಐಟಿ) ಮಾಹಿತಿ ಹಂಚಿಕೊಳ್ಳುವಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (ಎನ್‌ಸಿಡಬ್ಲ್ಯು) ಸೂಚಿಸಿದ್ದಾರೆ.

ಬೆಂಗಳೂರು: ಸೆಕ್ಸ್ ವೀಡಿಯೋ ಪ್ರಕರಣದಲ್ಲಿ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ದಾಖಲಿಸಿರುವ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿರುವ ಕುರಿತು ವಿಶೇಷ ತನಿಖಾ ತಂಡದೊಂದಿಗೆ (ಎಸ್‌ಐಟಿ) ಮಾಹಿತಿ ಹಂಚಿಕೊಳ್ಳುವಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (ಎನ್‌ಸಿಡಬ್ಲ್ಯು) ಸೂಚಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪರಮೇಶ್ವರ್, “ಅವರು ಯಾರೆಂದು ನಮಗೆ ತಿಳಿದಿಲ್ಲ. ಎಲ್ಲಾ ಪ್ರಶ್ನೆಗಳಿಗೆ ಎಸ್‌ಐಟಿ ಉತ್ತರ ನೀಡಲಿದೆ. ದೂರುಗಳು ಅಥವಾ ಏನೇ ಅಡಚಣೆಗಳಿದ್ದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ ಎಸ್‌ಐಟಿಯೊಂದಿಗೆ ಮಾತನಾಡಲಿ, ರಾಜ್ಯ ಮಹಿಳಾ ಆಯೋಗವು ಸರ್ಕಾರಕ್ಕೆ ಹೇಗೆ ಪತ್ರ ಬರೆಯಿತೋ ಹಾಗೆಯೇ ರಾಷ್ಟ್ರೀಯ ಮಹಿಳಾ ಆಯೋಗ, ಎಸ್ ಐಟಿಗೆ ಮಾಹಿತಿ ನೀಡಬಹುದು. ಎಸ್‌ಐಟಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ಯಾವಾಗ ಪತ್ತೆ ಮಾಡುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, “ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲು ಇಂಟರ್‌ಪೋಲ್ ಮತ್ತು ಇತರ ಏಜೆನ್ಸಿಗಳಿಗೆ ಮನವಿ ಮಾಡುವಂತೆ ಸಿಬಿಐಗೆ ಮನವಿ ಮಾಡಿದ್ದೇವೆ. ಅದನ್ನು ಈಗ ಮಾಡಲಾಗುತ್ತಿದೆ. ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿ ನೆಲೆಸಿದ್ದಾರೆ ಎಂಬ ಮಾಹಿತಿಗಾಗಿ ನಾವು ಕಾಯಬೇಕಾಗಿದೆ. ಎಸ್‌ಐಟಿ ಸಮರ್ಥವಾಗಿದ್ದು, ಸತ್ಯಾಂಶ ಹೊರಬರಲಿದೆ ಎಂದರು.

ಪ್ರಕರಣದ ಮಹಿಳಾ ದೂರುದಾರರಲ್ಲಿ ಒಬ್ಬರು ಬೆದರಿಕೆಯ ನಂತರ ಸುಳ್ಳು ದೂರು ದಾಖಲಿಸಲು ಜನರ ಗುಂಪಿನಿಂದ ಒತ್ತಾಯಿಸಲಾಗಿದೆ. ಮಹಿಳೆಗೆ ಸೂಕ್ತ ಭದ್ರತೆಯನ್ನು ಒದಗಿಸುವಂತೆ ಡಿಜಿಪಿ ಅಲೋಕ್ ಮೋಹನ್ ಅವರಿಗೆ ಸೂಚಿಸಲಾಗಿದೆ

ರಾಷ್ಟ್ರೀಯ ಮಹಿಳಾ ಆಯೋಗ ಗುರುವಾರ ಹೇಳಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT