ಮಲ್ಪೆ ಬೀಚ್‌ 
ರಾಜ್ಯ

ಉಡುಪಿ: ಮಲ್ಪೆ ಬೀಚ್‌ನಲ್ಲಿ ಜೀವರಕ್ಷಕನ ಮೇಲೆ ಪ್ರವಾಸಿಗರಿಂದ ಹಲ್ಲೆ; ಪರಾರಿ

ಬೀಚ್‌ನಲ್ಲಿ ನಿಯೋಜನೆಗೊಂಡಿದ್ದ ಜೀವರಕ್ಷಕ ದಳದ ಸಿಬ್ಬಂದಿ ಮೇಲೆ ಆರು ಮಂದಿ ಪ್ರವಾಸಿಗರ ತಂಡವೊಂದು ಗುರುವಾರ ಹಲ್ಲೆ ನಡೆಸಿರುವ ಘಟನೆ ಮಲ್ಪೆ ಬೀಚ್‌ನಲ್ಲಿ ನಡೆದಿದೆ. ಸಮುದ್ರದ ಪ್ರಕ್ಷುಬ್ಧತೆಯ ಬಗ್ಗೆ ಲೈಫ್‌ಗಾರ್ಡ್‌ ಪದೇ ಪದೆ ಎಚ್ಚರಿಕೆ ನೀಡಿದರೂ, ಅದನ್ನು ನಿರ್ಲಕ್ಷಿಸಿ ಪ್ರವಾಸಿಗರು ಈಜುವುದನ್ನು ಮುಂದುವರಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಉಡುಪಿ: ಬೀಚ್‌ನಲ್ಲಿ ನಿಯೋಜನೆಗೊಂಡಿದ್ದ ಜೀವರಕ್ಷಕ ದಳದ ಸಿಬ್ಬಂದಿ ಮೇಲೆ ಆರು ಮಂದಿ ಪ್ರವಾಸಿಗರ ತಂಡವೊಂದು ಗುರುವಾರ ಹಲ್ಲೆ ನಡೆಸಿರುವ ಘಟನೆ ಮಲ್ಪೆ ಬೀಚ್‌ನಲ್ಲಿ ನಡೆದಿದೆ. ಸಮುದ್ರದ ಪ್ರಕ್ಷುಬ್ಧತೆಯ ಬಗ್ಗೆ ಲೈಫ್‌ಗಾರ್ಡ್‌ ಪದೇ ಪದೆ ಎಚ್ಚರಿಕೆ ನೀಡಿದರೂ, ಅದನ್ನು ನಿರ್ಲಕ್ಷಿಸಿ ಪ್ರವಾಸಿಗರು ಈಜುವುದನ್ನು ಮುಂದುವರಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಉದ್ಯಾವರ-ಪಿತ್ರೋಡಿಯ ಜೀವರಕ್ಷಕ ತೇಜ ಕೋಟ್ಯಾನ್ ಅವರು ಅಪಾಯಕಾರಿ ಅಲೆಗಳ ಬಗ್ಗೆ ಪ್ರವಾಸಿಗರಿಗೆ ತಿಳಿಸಿದರೂ, ಗುಂಪು ಅದನ್ನು ನಿರ್ಲಕ್ಷಿಸಿ ಅಪಾಯದ ವಲಯದಲ್ಲಿ ಈಜಲು ಹೋಗಿದೆ. ಕೋಟ್ಯಾನ್ ಅವರು ಈಜುವುದನ್ನು ಮುಂದುವರಿಸಬೇಡಿ ಎಂದು ಕೇಳಿದಾಗ, ಗುಂಪು ಅವರ ಮೇಲೆ ಹಲ್ಲೆ ನಡೆಸಿದೆ.

ಸ್ಥಳದಲ್ಲಿದ್ದ ಇತರ ಜೀವರಕ್ಷಕರು ಮತ್ತು ಗೃಹರಕ್ಷಕರು ದಾಳಿಕೋರರನ್ನು ಹಿಡಿಯಲು ಪ್ರಯತ್ನಿಸಿದರು. ಆದರೆ ಕೆಎ 04 ಎಡಿ 8286 ನೋಂದಣಿ ಸಂಖ್ಯೆಯ ಸ್ವಿಫ್ಟ್ ಮಾರುತಿ ಕಾರಿನಲ್ಲಿ ಅವರು ಪರಾರಿಯಾಗಿದ್ದಾರೆ. ಘಟನೆ ಕುರಿತು ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT