ಪರಿಶ್ರಮ ನೀಟ್ ಅಕಾಡೆಮಿ ಮಕ್ಕಳೊಂದಿಗೆ ಶಾಸಕ ಪ್ರದೀಪ್ ಈಶ್ವರ್  
ರಾಜ್ಯ

ಶಾಸಕ ಪ್ರದೀಪ್ ಈಶ್ವರ್ 'ಸೂಪರ್ 60' ಯೋಜನೆ: SSLC ವಿದ್ಯಾರ್ಥಿಗಳ ಸಾಧನೆ

ಚಿಕ್ಕಬಳ್ಳಾಪುರ ಜಿಲ್ಲೆ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಶಾಸಕ ಪ್ರದೀಪ್ ಈಶ್ವರ್ ಅವರು ಜಿಲ್ಲೆಯಲ್ಲಿ ‘ಸೂಪರ್ 60’ ಎಂಬ ವಿನೂತನ ಯೋಜನೆಯನ್ನು ರೂಪಿಸಿದ್ದಾರೆ.

ಬೆಂಗಳೂರು: ‘ಸೂಪರ್ 60’ ಯೋಜನೆಯಡಿ ಎಸ್ ಎಸ್ ಎಲ್ ಸಿ ಓದುತ್ತಿರುವ 60 ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಲಾಯಿತು. ತರಬೇತಿ ಪಡೆದ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಗೆ ಮತ್ತು ತಮ್ಮ ಸಂಸ್ಥೆಗಳಿಗೆ ಹೆಮ್ಮೆ ತಂದಿದ್ದಾರೆ ಎಂದು ಪರಿಶ್ರಮ ನೀಟ್ ಅಕಾಡೆಮಿ ತಿಳಿಸಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಶಾಸಕ ಪ್ರದೀಪ್ ಈಶ್ವರ್ ಅವರು ಜಿಲ್ಲೆಯಲ್ಲಿ ‘ಸೂಪರ್ 60’ ಎಂಬ ವಿನೂತನ ಯೋಜನೆಯನ್ನು ರೂಪಿಸಿದ್ದಾರೆ ಎಂದು ಅಕಾಡೆಮಿ ತಿಳಿಸಿದೆ. ಇದರಡಿ ಚಿಕ್ಕಬಳ್ಳಾಪುರ ಕ್ಷೇತ್ರದ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಬಡ ಕುಟುಂಬದ 60 ಮಕ್ಕಳು, ಅನಾಥರು ಮತ್ತು ಒಂಟಿ ಪೋಷಕರ ಮಕ್ಕಳನ್ನು ಆಯ್ಕೆ ಮಾಡಿ ಅನುಮತಿಯೊಂದಿಗೆ ತರಬೇತಿ ನೀಡಲಾಯಿತು.

ಶಾಸಕರ ಯೋಜನೆಯು ಅಭೂತಪೂರ್ವ ಯಶಸ್ಸನ್ನು ಕಂಡಿದೆ ಎಂದು ಎಸ್‌ಎಸ್‌ಎಲ್‌ಸಿ ಫಲಿತಾಂಶಗಳು ತೋರಿಸಿವೆ. ಶಾಸಕ ಪ್ರದೀಪ್ ಈಶ್ವರ್ ಅವರು ವಿದ್ಯಾರ್ಥಿಗಳನ್ನು ಖುದ್ದು ಭೇಟಿಯಾಗಿ ಯೋಜನೆಯಡಿ ಉತ್ತಮ ಅಂಕ ಗಳಿಸಿ ಉತ್ತೀರ್ಣರಾದವರನ್ನು ಅಭಿನಂದಿಸಿದರು.‘‘ಯಾವುದೇ ಕುಟುಂಬದ ಜೀವನಮಟ್ಟ ಅಭಿವೃದ್ಧಿಯಾಗಬೇಕು ಎಂದರೆ ಮಕ್ಕಳಿಗೆ ಶಿಕ್ಷಣ ಸಿಗಬೇಕು ಎಂಬ ಅಂಶವನ್ನು ಗುರುತಿಸಿ ಸೂಪರ್ 60 ಯೋಜನೆ ಆರಂಭಿಸಲಾಗಿದೆ ಎಂದರು.

3,000 ವಿದ್ಯಾರ್ಥಿಗಳಿಗೆ ಶಾಸಕರು 1,000 ರೂಪಾಯಿಗಳ ವಿದ್ಯಾರ್ಥಿವೇತನವನ್ನು ನೀಡಿದರು ಎಂದು ಅಕಾಡೆಮಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT