ದೇವರಾಜೇಗೌಡ 
ರಾಜ್ಯ

ಅತ್ಯಾಚಾರ, ಲೈಂಗಿಕ ಕಿರುಕುಳ ಪ್ರಕರಣ: ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ

ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಬಿಜೆಪಿ ನಾಯಕ ಮತ್ತು ವಕೀಲ ಜೆ. ದೇವರಾಜೇಗೌಡ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಶನಿವಾರ ಒಪ್ಪಿಸಲಾಗಿದೆ.

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಬಿಜೆಪಿ ನಾಯಕ ಮತ್ತು ವಕೀಲ ಜೆ. ದೇವರಾಜೇಗೌಡ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಶನಿವಾರ ಒಪ್ಪಿಸಲಾಗಿದೆ. ಶುಕ್ರವಾರ ತಡರಾತ್ರಿ ಚಿತ್ರದುರ್ಗ ಜಿಲ್ಲೆಯ ಗೂಳಿಹಾಲ್ ಟೋಲ್ ಗೇಟ್ ಬಳಿ ಅವರನ್ನು ಹಿರಿಯೂರು ಪೊಲೀಸರು ಬಂಧಿಸಿದ್ದರು. ನಂತರ ಹಾಸನ ಜಿಲ್ಲೆ ಹೊಳೆನರಸೀಪುರ ಪೊಲೀಸರು ಅಲ್ಲಿಗೆ ತೆರಳಿ ದೇವರಾಜೇಗೌಡ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.

ಶನಿವಾರ ಬೆಳಗ್ಗೆ ಅವರನ್ನು ವಿಚಾರಣೆಗಾಗಿ ಅತ್ಯಾಚಾರ ಘಟನೆ ನಡೆದಿದೆ ಎನ್ನಲಾದ ಹಾಸನ ಜಿಲ್ಲೆಯ ಹೊಳೆನರಸೀಪುರಕ್ಕೆ ಕರೆದೊಯ್ಯಲಾಯಿತು. ನಂತರ ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

ಹಾಸನ ಜಿಲ್ಲೆಯ 36 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ದೇವರಾಜೇಗೌಡ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆಸ್ತಿ ಮಾರಾಟ ಮಾಡಲು ಸಹಾಯ ಮಾಡುವ ನೆಪದಲ್ಲಿ ತನಗೆ ಕಿರುಕುಳ ನೀಡಿ ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಏಪ್ರಿಲ್ 1 ರಂದು ಅವರ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಶುಕ್ರವಾರ, ಮಹಿಳೆ ಮತ್ತೊಮ್ಮೆ ಪೊಲೀಸರನ್ನು ಸಂಪರ್ಕಿಸಿದ್ದು, ಅವರಿಂದ ಅತ್ಯಾಚಾರವೆಸಗಿರುವುದಾಗಿ ಆರೋಪಿಸಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೇವರಾಜೇಗೌಡ ಅವರು 2023 ರ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಲ್ಲಿ ಹೆಚ್. ಡಿ. ರೇವಣ್ಣ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡಿದ್ದರು. ಕಳೆದ ವರ್ಷ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣವನ್ನು ಮೊದಲ ಬಾರಿಗೆ ಹೊರಗೆ ತಂದು, ಅವರಿಗೆ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡದಂತೆ ಕೇಂದ್ರದ ಬಿಜೆಪಿ ನಾಯಕರಿಗೆ ಪತ್ರ ಬರೆದಿರುವುದಾಗಿ ಅವರು ಹೇಳಿಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT