ವಿದ್ಯಾರ್ಥಿನಿ ಮೀನಾ ಮತ್ತು ಆರೋಪಿ ಪ್ರಕಾಶ್ (ಸಂಗ್ರಹ ಚಿತ್ರ) 
ರಾಜ್ಯ

ಕೊಡಗು: SSLC ವಿದ್ಯಾರ್ಥಿನಿ ಹತ್ಯೆ ಮಾಡಿದ್ದ ಆರೋಪಿ ಪ್ರಕಾಶ್ ಬಂಧನ, ಬಾಲಕಿ ರುಂಡ ಪತ್ತೆ

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಬಳಿಯ ಕುಂಬಾರಗಡಿಗೆ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ನಡೆದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಮೀನಾ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಶನಿವಾರ ಬೆಳಗ್ಗೆ ಬಂಧಿಸಿದ್ದಾರೆ.

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಬಳಿಯ ಕುಂಬಾರಗಡಿಗೆ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ನಡೆದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಮೀನಾ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಶನಿವಾರ ಬೆಳಗ್ಗೆ ಬಂಧಿಸಿದ್ದಾರೆ.

ಎಸ್​ಎಸ್​ಎಲ್​ಸಿ ಫಲಿತಾಂಶ ಹೊರ ಬಿದ್ದ ದಿನವೇ ಬಾಲಕಿಯೊಂದಿಗೆ ನಿಗದಿಯಾಗಿದ್ದ ನಿಶ್ಚಿತಾರ್ಥ ಮುರಿದುಬಿದ್ದ ನಂತರ ಬಾಲಕಿಯ ಮನೆಗೆ ಹೋಗಿ ಪೋಷಕರ ಮೇಲೆ ಹಲ್ಲೆ ಮಾಡಿ ಬಾಲಕಿಯನ್ನು ಎಳೆದಾಡಿ ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಪೊಲೀಸರು ಹಲವು ತಂಡಗಳನ್ನು ಮಾಡಿ ಶೋಧ ಕಾರ್ಯ ನಡೆಸುತ್ತಿದ್ದರು.

ಈ ಹಿಂದೆ, ಆರೋಪಿ ಕೃತ್ಯ ಎಸಗಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಆರೋಪಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಮಡಿಕೇರಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.

ಬಾಲಕಿಯ ರುಂಡ ಪತ್ತೆ:

ಪ್ರಾಥಮಿಕ ತನಿಖೆಯ ನಂತರ ಆರೋಪಿಯು ಬಾಲಕಿಯ ಕತ್ತರಿಸಿದ ತಲೆಯನ್ನು ಇಟ್ಟುಕೊಂಡಿದ್ದ ಸ್ಥಳಕ್ಕೆ ಪೊಲೀಸರನ್ನು ಕರೆದೊಯ್ದನು.

ಬಾಲಕಿಯನ್ನು ಕೊಂದ ನಂತರ ಘಟನಾ ಸ್ಥಳದಿಂದ 300 ಮೀಟರ್ ದೂರದಲ್ಲಿರುವ ಮಾವಿನ ಮರದ ಕೊಂಬೆಯ ಮೇಲೆ ಮೀನಾಳ ತಲೆಯನ್ನು ಇಟ್ಟಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಪೂರ್ತಿ ಶೋಧ ಕಾರ್ಯಾಚರಣೆ ನಡೆಸಿದ ಶ್ವಾನದಳ ಹಾಗೂ ಪೊಲೀಸ್ ಸಿಬ್ಬಂದಿಗೆ ತುಂಡರಿಸಿದ ತಲೆ ಪತ್ತೆಯಾಗಿರಲಿಲ್ಲ.

ಯಾವುದೇ ದೊಡ್ಡ ಹಾನಿಯಾಗದ ಸ್ಥಿತಿಯಲ್ಲಿ ತುಂಡರಿಸಿದ ತಲೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯೊಂದಿಗಿನ ನಿಶ್ಚಿತಾರ್ಥವನ್ನು ರದ್ದುಗೊಳಿಸಿದ ನಂತರ ನಾನು ಕಂಗಾಲಾಗಿದ್ದೆ. ಕಾಡಿನಲ್ಲಿ ಬಾಲಕಿಯೊಂದಿಗೆ ತೀವ್ರ ವಾಗ್ವಾದಕ್ಕಿಳಿದು ನಂತರ ಕೃತ್ಯ ಎಸಗಿರುವುದಾಗಿ ಆರೋಪಿ ಪೊಲೀಸರ ಬಳಿ ಆರೋಪಿ ಪ್ರಕಾಶ್ ತಪ್ಪೊಪ್ಪಿಕೊಂಡಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT