ಪದಿನಾಲ್ಕು ಕಾಡು ಅರಣ್ಯದಲ್ಲಿ ಮರಗಳನ್ನು ಕತ್ತರಿಸಿರುವುದು 
ರಾಜ್ಯ

ಕೊಡಗು ಮೀಸಲು ಅರಣ್ಯದಲ್ಲಿ ಸಾವಿರಾರು ಮರಗಳ ಮಾರಣ ಹೋಮ: ಬೆಂಕಿ ಹಚ್ಚಿದ ಕಿಡಿಗೇಡಿಗಳು!

ಕೊಡಗಿನ ತಲಕಾವೇರಿ ಅಭಯಾರಣ್ಯದ ಸಮೀಪವಿರುವ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾವಿರಾರು ಮರಗಳನ್ನು ಕತ್ತರಿಸಲಾಗಿದೆ.

ಮಡಿಕೇರಿ: ಕೊಡಗಿನ ತಲಕಾವೇರಿ ಅಭಯಾರಣ್ಯದ ಸಮೀಪವಿರುವ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾವಿರಾರು ಮರಗಳನ್ನು ಕತ್ತರಿಸಲಾಗಿದೆ.

ಕೊಡಗು ಏಕೀಕರಣ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ವಿಷಯ ಪ್ರಸ್ತಾಪಿಸಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯದಲ್ಲಿ ಮರಗಳ್ಳರ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ವಿರಾಜಪೇಟೆ ಶಾಸಕ ಎಎಸ್ ಪೊನ್ನಣ್ಣ ಅವರಿಗೆ ದೂರು ಸಲ್ಲಿಸಿದ್ದಾರೆ.

ತಲಕಾವೇರಿ ಅಭಯಾರಣ್ಯದ ಅಂಚಿನಲ್ಲಿರುವ ಪದಿನಾಲ್ಕುನಾಡು ಮೀಸಲು ಅರಣ್ಯ ಪ್ರದೇಶದ ಮುಂಡ್ರೋಟ್ ಅರಣ್ಯ ಶ್ರೇಣಿಯು 6,000 ಕ್ಕೂ ಹೆಚ್ಚು ಜಾತಿಯ ಮರಗಳು ಮತ್ತು ಸಸ್ಯಗಳಿಗೆ ನೆಲೆಯಾಗಿದೆ. ಆದರೆ, ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾವಿರಾರು ಮರಗಳನ್ನು ಕಡಿದು ಹಾಕಲಾಗಿದ್ದು, ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಾಕ್ಷ್ಯನಾಶ ಮಾಡುವ ನಿಟ್ಟಿನಲ್ಲಿ ಅವರು ತಲಕಾವೇರಿ ಅಭಯಾರಣ್ಯ ಪ್ರದೇಶದಾದ್ಯಂತ ಕಾಡ್ಗಿಚ್ಚು ಹರಡುವ ಅಪಾಯವನ್ನುಂಟುಮಾಡುವ ಮರಗಳನ್ನು ಸುಟ್ಟುಹಾಕಿದ್ದಾರೆ.

ಕೊಡಗು ಏಕೀಕರಣ ರಂಗ ವೇದಿಕೆ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿದಾಗ 5 ಎಕರೆಗೂ ಹೆಚ್ಚು ಮೀಸಲು ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವುದು ಕಂಡು ಬಂದಿದೆ. ಮೀಸಲು ಅರಣ್ಯ ಪ್ರದೇಶದಲ್ಲಿ ಕಡಿಯಲಾಗಿದೆಯೇ ಅಥವಾ ಮೀಸಲು ಅರಣ್ಯ ಪ್ರದೇಶಕ್ಕೆ ತಾಗಿಕೊಂಡಿರುವ ಖಾಸಗಿ ಜಮೀನಿನಲ್ಲಿ ಕತ್ತರಿಸಲಾಗಿದೆಯೇ ಎಂಬುದು ಇಲಾಖೆಯಿಂದ ತಿಳಿಸಬೇಕಾಗಿದೆ ಎಂದು ವಿರಾಜಪೇಟೆ ಡಿಸಿಎಫ್ ಜಗನಾಥ್ ಹೇಳಿದ್ದಾರೆ.

ಆದರೆ, ಮೀಸಲು ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಇಲಾಖೆ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಫ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT