ಪ್ರಾತಿನಿಧಿಕ ಚಿತ್ರ 
ರಾಜ್ಯ

ಬೆಂಗಳೂರು: ಅನಧಿಕೃತ ಬ್ಯಾನರ್ ಅಳವಡಿಕೆ; ಮಾಜಿ ಮೇಯರ್ ಪುತ್ರನ ವಿರುದ್ಧ ಎಫ್‌ಐಆರ್ ದಾಖಲು

ರಾಜಕಾರಣಿಗಳಿಗೆ ದಿಟ್ಟ ಸಂದೇಶ ರವಾನಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಮ್ಮ ತಂದೆಗೆ ಹುಟ್ಟುಹಬ್ಬದ ಶುಭಾಶಯ ಕೋರಲು ಅನಧಿಕೃತ ಬ್ಯಾನರ್ ಅಳವಡಿಸಿದ್ದ ಮಾಜಿ ಮೇಯರ್ ವೆಂಕಟೇಶ್ ಮೂರ್ತಿ ಅವರ ಪುತ್ರ ಕಾರ್ತಿಕ್ ವೆಂಕಟೇಶ್ ಮೂರ್ತಿ ವಿರುದ್ಧ ಶನಿವಾರ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಾಗಿದೆ.

ಬೆಂಗಳೂರು: ರಾಜಕಾರಣಿಗಳಿಗೆ ದಿಟ್ಟ ಸಂದೇಶ ರವಾನಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಮ್ಮ ತಂದೆಗೆ ಹುಟ್ಟುಹಬ್ಬದ ಶುಭಾಶಯ ಕೋರಲು ಅನಧಿಕೃತ ಬ್ಯಾನರ್ ಅಳವಡಿಸಿದ್ದ ಮಾಜಿ ಮೇಯರ್ ವೆಂಕಟೇಶ್ ಮೂರ್ತಿ ಅವರ ಪುತ್ರ ಕಾರ್ತಿಕ್ ವೆಂಕಟೇಶ್ ಮೂರ್ತಿ ವಿರುದ್ಧ ಶನಿವಾರ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಾಗಿದೆ.

ಅನಧಿಕೃತ ಬ್ಯಾನರ್‌ಗಳ ವಿರುದ್ಧ ಬಿಬಿಎಂಪಿ ವಿಶೇಷ ದಳದ ಸದಸ್ಯ ಅವೀಶ್ ಎಚ್‌ಎಂ ನೀಡಿದ ದೂರಿನ ಮೇರೆಗೆ ಬನಶಂಕರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಕ್ರಮ ಬ್ಯಾನರ್‌ಗಳನ್ನು ಅಳವಡಿಸಿರುವುದು ಆಸ್ತಿ ವಿರೂಪ ಕಾಯ್ದೆ ಮತ್ತು ಬಿಬಿಎಂಪಿ ಕಾಯ್ದೆಯ ಉಲ್ಲಂಘನೆಯಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅನಧಿಕೃತ ಪೋಸ್ಟರ್‌ಗಳು ಅಥವಾ ಬ್ಯಾನರ್‌ಗಳನ್ನು ಹಾಕಿದರೆ ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂತಹ ಉಲ್ಲಂಘನೆಗಳು ಕಂಡುಬಂದಲ್ಲಿ ಜನರು ಅದರ ಚಿತ್ರಗಳು ಮತ್ತು ಸ್ಥಳಗಳನ್ನು ಮೀಸಲಾದ ವಾಟ್ಸಾಪ್ ಸಂಖ್ಯೆ 94806 85700 ಕ್ಕೆ ಹಂಚಿಕೊಳ್ಳಲು ಅಧಿಕಾರಿ ವಿನಂತಿಸಿದ್ದಾರೆ. ಬಳಿಕ ನಗರಸಭೆ ಕ್ರಮ ಕೈಗೊಂಡು ದಂಡವನ್ನೂ ವಿಧಿಸಲಿದೆ.

ಈ ಹಿಂದೆ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಕೆಪಿಸಿಸಿ ಕಚೇರಿ ಹಾಗೂ ಸುತ್ತಮುತ್ತ ಬ್ಯಾನರ್ ಅಳವಡಿಸಿದ್ದಕ್ಕಾಗಿ ಯುವ ಕಾಂಗ್ರೆಸ್‌ಗೆ 50 ಸಾವಿರ ದಂಡವನ್ನು ವಿಧಿಸಿತ್ತು

ದಿ ನ್ಯೂ ಸಂಡೆ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಮಾಜಿ ಮೇಯರ್ ಮೂರ್ತಿ, 'ಯಾರಾದರೂ ಬಿಬಿಎಂಪಿ ನಿಯಮಗಳನ್ನು ಉಲ್ಲಂಘಿಸಿದರೆ ಅದು ತಪ್ಪು. ಜೆಡಿಎಸ್ ಅಥವಾ ಬಿಜೆಪಿ ನಾಯಕರ ಅನುಕರಿಸುವ ಅಥವಾ ನಕಲು ಮಾಡುವುದರ ವಿರುದ್ಧ ನಿಮ್ಮ ಮಗನಿಗೆ ಸಲಹೆ ನೀಡಿದ್ದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT