ಪ್ರಾತಿನಿಧಿಕ ಚಿತ್ರ 
ರಾಜ್ಯ

ಬೆಂಗಳೂರು: ಅನಧಿಕೃತ ಬ್ಯಾನರ್ ಅಳವಡಿಕೆ; ಮಾಜಿ ಮೇಯರ್ ಪುತ್ರನ ವಿರುದ್ಧ ಎಫ್‌ಐಆರ್ ದಾಖಲು

ರಾಜಕಾರಣಿಗಳಿಗೆ ದಿಟ್ಟ ಸಂದೇಶ ರವಾನಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಮ್ಮ ತಂದೆಗೆ ಹುಟ್ಟುಹಬ್ಬದ ಶುಭಾಶಯ ಕೋರಲು ಅನಧಿಕೃತ ಬ್ಯಾನರ್ ಅಳವಡಿಸಿದ್ದ ಮಾಜಿ ಮೇಯರ್ ವೆಂಕಟೇಶ್ ಮೂರ್ತಿ ಅವರ ಪುತ್ರ ಕಾರ್ತಿಕ್ ವೆಂಕಟೇಶ್ ಮೂರ್ತಿ ವಿರುದ್ಧ ಶನಿವಾರ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಾಗಿದೆ.

ಬೆಂಗಳೂರು: ರಾಜಕಾರಣಿಗಳಿಗೆ ದಿಟ್ಟ ಸಂದೇಶ ರವಾನಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಮ್ಮ ತಂದೆಗೆ ಹುಟ್ಟುಹಬ್ಬದ ಶುಭಾಶಯ ಕೋರಲು ಅನಧಿಕೃತ ಬ್ಯಾನರ್ ಅಳವಡಿಸಿದ್ದ ಮಾಜಿ ಮೇಯರ್ ವೆಂಕಟೇಶ್ ಮೂರ್ತಿ ಅವರ ಪುತ್ರ ಕಾರ್ತಿಕ್ ವೆಂಕಟೇಶ್ ಮೂರ್ತಿ ವಿರುದ್ಧ ಶನಿವಾರ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಾಗಿದೆ.

ಅನಧಿಕೃತ ಬ್ಯಾನರ್‌ಗಳ ವಿರುದ್ಧ ಬಿಬಿಎಂಪಿ ವಿಶೇಷ ದಳದ ಸದಸ್ಯ ಅವೀಶ್ ಎಚ್‌ಎಂ ನೀಡಿದ ದೂರಿನ ಮೇರೆಗೆ ಬನಶಂಕರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಕ್ರಮ ಬ್ಯಾನರ್‌ಗಳನ್ನು ಅಳವಡಿಸಿರುವುದು ಆಸ್ತಿ ವಿರೂಪ ಕಾಯ್ದೆ ಮತ್ತು ಬಿಬಿಎಂಪಿ ಕಾಯ್ದೆಯ ಉಲ್ಲಂಘನೆಯಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅನಧಿಕೃತ ಪೋಸ್ಟರ್‌ಗಳು ಅಥವಾ ಬ್ಯಾನರ್‌ಗಳನ್ನು ಹಾಕಿದರೆ ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂತಹ ಉಲ್ಲಂಘನೆಗಳು ಕಂಡುಬಂದಲ್ಲಿ ಜನರು ಅದರ ಚಿತ್ರಗಳು ಮತ್ತು ಸ್ಥಳಗಳನ್ನು ಮೀಸಲಾದ ವಾಟ್ಸಾಪ್ ಸಂಖ್ಯೆ 94806 85700 ಕ್ಕೆ ಹಂಚಿಕೊಳ್ಳಲು ಅಧಿಕಾರಿ ವಿನಂತಿಸಿದ್ದಾರೆ. ಬಳಿಕ ನಗರಸಭೆ ಕ್ರಮ ಕೈಗೊಂಡು ದಂಡವನ್ನೂ ವಿಧಿಸಲಿದೆ.

ಈ ಹಿಂದೆ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಕೆಪಿಸಿಸಿ ಕಚೇರಿ ಹಾಗೂ ಸುತ್ತಮುತ್ತ ಬ್ಯಾನರ್ ಅಳವಡಿಸಿದ್ದಕ್ಕಾಗಿ ಯುವ ಕಾಂಗ್ರೆಸ್‌ಗೆ 50 ಸಾವಿರ ದಂಡವನ್ನು ವಿಧಿಸಿತ್ತು

ದಿ ನ್ಯೂ ಸಂಡೆ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಮಾಜಿ ಮೇಯರ್ ಮೂರ್ತಿ, 'ಯಾರಾದರೂ ಬಿಬಿಎಂಪಿ ನಿಯಮಗಳನ್ನು ಉಲ್ಲಂಘಿಸಿದರೆ ಅದು ತಪ್ಪು. ಜೆಡಿಎಸ್ ಅಥವಾ ಬಿಜೆಪಿ ನಾಯಕರ ಅನುಕರಿಸುವ ಅಥವಾ ನಕಲು ಮಾಡುವುದರ ವಿರುದ್ಧ ನಿಮ್ಮ ಮಗನಿಗೆ ಸಲಹೆ ನೀಡಿದ್ದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!