ಪ್ರಾತಿನಿಧಿಕ ಚಿತ್ರ 
ರಾಜ್ಯ

ಬೆಳಗಾವಿ: ಕೃಷಿ ಕೆಲಸ ಮುಗಿಸಿ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದಾಗ ಮೊಸಳೆ ದಾಳಿ; ರೈತ ಬಲಿ

ಚಿಕ್ಕೋಡಿ ತಾಲ್ಲೂಕಿನ ದತ್ತವಾಡ-ಸದಲಗಾ ಬಳಿಯ ದೂಧ್‌ಗಂಗಾ ನದಿ ದಡದಲ್ಲಿ ಶನಿವಾರ ಮೊಸಳೆ ದಾಳಿಗೆ ವೃದ್ಧ ರೈತ ಮೃತಪಟ್ಟಿದ್ದಾರೆ. ಮೃತ ರೈತನನ್ನು ಚಿಕ್ಕೋಡಿ ತಾಲ್ಲೂಕಿನ ಸದಲಗಾ ಗ್ರಾಮದ ನಿವಾಸಿ ಮಹಾದೇವ ಪುನ್ನಪ್ಪ ಖುರೆ (72) ಎಂದು ಗುರುತಿಸಲಾಗಿದೆ.

ಬೆಳಗಾವಿ: ಚಿಕ್ಕೋಡಿ ತಾಲ್ಲೂಕಿನ ದತ್ತವಾಡ-ಸದಲಗಾ ಬಳಿಯ ದೂಧ್‌ಗಂಗಾ ನದಿ ದಡದಲ್ಲಿ ಶನಿವಾರ ಮೊಸಳೆ ದಾಳಿಗೆ ವೃದ್ಧ ರೈತ ಮೃತಪಟ್ಟಿದ್ದಾರೆ.

ಮೃತ ರೈತನನ್ನು ಚಿಕ್ಕೋಡಿ ತಾಲ್ಲೂಕಿನ ಸದಲಗಾ ಗ್ರಾಮದ ನಿವಾಸಿ ಮಹಾದೇವ ಪುನ್ನಪ್ಪ ಖುರೆ (72) ಎಂದು ಗುರುತಿಸಲಾಗಿದೆ.

ಶುಕ್ರವಾರ (ಮೇ 10) ಮಹಾದೇವ ಪುನ್ನಪ್ಪ ಖುರೆ ಅವರು ನದಿ ತೀರದ ಕಾಂತಿ ಪ್ರದೇಶದಲ್ಲಿನ ತಮ್ಮ ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದರು. ಕೃಷಿ ಕೆಲಸ ಮುಗಿಸಿ ಸ್ನಾನ ಮಾಡಲು ನದಿಗೆ ತೆರಳಿದ್ದರು. ನದಿಯಲ್ಲಿ ಕೆಲಹೊತ್ತು ಈಜಿ ಮರಳಿ ನದಿಯ ದಡಕ್ಕೆ ಬರುತ್ತಿದ್ದಾಗ ಮೊಸಳೆ ಅವರ ಕಾಲು ಹಿಡಿದು ನೀರಿನೊಳಗೆ ಎಳೆದೊಯ್ದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ರೈತ ಮಹಾದೇವ ಅವರ ಎಡತೊಡೆಯ ಮೇಲೆ ಗಾಯದ ಗುರುತು ಇತ್ತು. ಶನಿವಾರ ರಮೇಶ ಪ್ರಧಾನ ಎಂಬುವವರ ಜಮೀನಿನ ಬಳಿಯ ನದಿ ದಂಡೆಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತರ ಶವವನ್ನು ಸಾಮಾಜಿಕ ಕಾರ್ಯಕರ್ತ ಸುಕುಮಾರ್ ಉಗಾರೆ ಮತ್ತು ಇತರ ಗ್ರಾಮಸ್ಥರು ನದಿ ದಡದಿಂದ ಹೊರತೆಗೆದಿದ್ದಾರೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ.

ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿಯ ನಂತರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ದೂಧ್‌ಗಂಗಾ ನದಿಯಲ್ಲಿ ಮೊಸಳೆಗಳ ಸಂಖ್ಯೆ ವಿಪರೀತ ಏರಿಕೆ ಕಂಡಿದೆ. ಈ ಘಟನೆಯಿಂದಾಗಿ ರೈತರಲ್ಲಿ ಆತಂಕ ಹೆಚ್ಚಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT