ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲು ಅವರಿಗೆ ದೇವಸ್ಥಾನದ ಅರ್ಚಕರೊಬ್ಬರು ಆಶೀರ್ವದಿಸುತ್ತಿರುವುದು. 
ರಾಜ್ಯ

ದೇವ್ರೇ ಕಾಪಾಡಪ್ಪಾ: ಚುನಾವಣೆ ಮುಕ್ತಾಯ ಬೆನ್ನಲ್ಲೇ ರಾಜಕೀಯ ನಾಯಕರಿಂದ ಟೆಂಪಲ್ ರನ್!

ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿದಿದ್ದು, ಅಭ್ಯರ್ಥಿಗಳು ಮತ್ತು ಅವರ ಹಿಂಬಾಲಕರು ಗೆಲುವಿಗಾಗಿ ದೇವರ ಮೊರೆ ಹೋಗುತ್ತಿದ್ದಾರೆ.

ಬಳ್ಳಾರಿ: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿದಿದ್ದು, ಅಭ್ಯರ್ಥಿಗಳು ಮತ್ತು ಅವರ ಹಿಂಬಾಲಕರು ಗೆಲುವಿಗಾಗಿ ದೇವರ ಮೊರೆ ಹೋಗುತ್ತಿದ್ದಾರೆ.

ಅವಿಭಜಿತ ಬಳ್ಳಾರಿ ಜಿಲ್ಲೆಯ ಸುಪ್ರಸಿದ್ಧ ದೇವಸ್ಥಾನಗಳಾದ ಮೈಲಾರಲಿಂಗೇಶ್ವರ, ಕುರುಗೋಡು ಬಸವಣ್ಣ, ಬಳ್ಳಾರಿ ಕನಕ ದುರ್ಗಮ್ಮ ಮತ್ತಿತರ ದೇವಸ್ಥಾನಗಳಿಗೆ ರಾಜಕಾರಣಿಗಳು ಮತ್ತು ಅವರ ಆಪ್ತರು ಭೇಟಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಬಳ್ಳಾರಿ (ಪರಿಶಿಷ್ಟ ಪಂಗಡ ಮೀಸಲು) ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲು ಮತ್ತು ಕಾಂಗ್ರೆಸ್‌ ಅಭ್ಯರ್ಥಿ ಇ ತುಕಾರಾಂ ಅವರ ಭವಿಷ್ಯವನ್ನು ಮೇ 6 ರಂದು ನಿರ್ಧಾರವಾಗಿದ್ದು, ಜೂನ್ 4 ರಂದು ಫಲಿತಾಂಶ ಬಹಿರಂಗಗೊಳ್ಳಳಿದೆ.

ಬಳ್ಳಾರಿಯ ಬಿಜೆಪಿ ಹಿರಿಯ ಮುಖಂಡ ನಾರಾಯಣರಾವ್ ಮಾತನಾಡಿ, ಇತ್ತೀಚೆಗಷ್ಟೇ ನಾನು ಮತ್ತು ನನ್ನ ಅನುಯಾಯಿಗಳು ಬಳ್ಳಾರಿ ನಗರದ ಕನಕ ದುರ್ಗಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀರಾಮುಲು ಗೆಲುವಿಗಾಗಿ ಪ್ರಾರ್ಥಿಸಿದ್ದೆವು. ಗೆದ್ದರೆ 5,001 ತೆಂಗಿನಕಾಯಿ ಅರ್ಪಿಸುತ್ತೇನೆ ಎಂದು ಹರಕೆ ಹೊತ್ತಿದ್ದೇನೆ. ಕ್ಷೇತ್ರದಲ್ಲಿ ಸುಮಾರು ಶೇ.73ರಷ್ಟು ಮತದಾನವಾಗಿದೆ. ಹೆಚ್ಚಿನ ಮತದಾರರ ಶೇಕಡಾವಾರು ಯಾವಾಗಲೂ ಬಿಜೆಪಿಗೆ ಸಹಾಯ ಮಾಡಿದೆ. ಜೂನ್ 4 ರಂದು ಬಿಜೆಪಿ ದೇಶಾದ್ಯಂತ ಮತ್ತು ಬಳ್ಳಾರಿಯಲ್ಲಿ ಸಂಭ್ರಮಾಚರಣೆ ನಡೆಸಲಿದೆ ಎಂಬ ವಿಶ್ವಾಸವಿದೆ ಎಂದ ಹೇಳಿದ್ದಾರೆ.

ಬಳ್ಳಾರಿ ಕಾಂಗ್ರೆಸ್ ಮುಖಂಡ ನಾಗರಾಜರೆಡ್ಡಿ ಮಾತನಾಡಿ, ನಮ್ಮ ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ. ನಾವು ಯಾವುದೇ ಧರ್ಮದ ವಿರುದ್ಧ ಇಲ್ಲ. ತುಕಾರಾಂ ಗೆಲುವಿಗಾಗಿ ನಮ್ಮ ಪಕ್ಷದ ಲಕ್ಷಾಂತರ ಅನುಯಾಯಿಗಳು ಮತ್ತು ನಾನು ಮೈಲಾರಲಿಂಗೇಶ್ವರ ದೇವರ ಮುಂದೆ ಪ್ರಾರ್ಥಿಸಿದ್ದೇವೆ. ತುಕಾರಾಂ ಅವರು ಕನಿಷ್ಠ 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಅವರು ಗೆದ್ದರೆ ನನ್ನ ತಂಡದಿಂದ ದೇವಸ್ಥಾನದ ಅಭಿವೃದ್ಧಿಗೆ 5 ಲಕ್ಷ ರೂ. ನೀಡುತ್ತೇನೆ. ಜೂನ್ 4 ರಂದು ನಾವು ತುಕಾರಾಂ ವಿಜಯವನ್ನು ಆಚರಿಸುತ್ತೇವೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT