ಬಿಬಿಎಂಪಿ 
ರಾಜ್ಯ

ಮಳೆ ಅವಾಂತರ: ಎಲ್ಲಾ 8 ವಲಯಗಳಲ್ಲಿ ವಿಪತ್ತು ನಿರ್ವಹಣಾ ತಂಡ ನಿಯೋಜನೆಗೆ BBMP ಮುಂದು!

ನಗರದಲ್ಲಿ ಮಳೆಯಿಂದಾಗುವ ಹಾನಿಯನ್ನು ತಪ್ಪಿಸಲು ಎಲ್ಲಾ 8 ವಲಯಗಳಲ್ಲಿ ವಿಪತ್ತು ನಿರ್ವಹಣಾ ತಂಡಗಳ ನಿಯೋಜನೆಗೊಳಿಸಲು ಬಿಬಿಎಂಪಿ ಮುಂದಾಗಿದೆ.

ಬೆಂಗಳೂರು: ನಗರದಲ್ಲಿ ಮಳೆಯಿಂದಾಗುವ ಹಾನಿಯನ್ನು ತಪ್ಪಿಸಲು ಎಲ್ಲಾ 8 ವಲಯಗಳಲ್ಲಿ ವಿಪತ್ತು ನಿರ್ವಹಣಾ ತಂಡಗಳ ನಿಯೋಜನೆಗೊಳಿಸಲು ಬಿಬಿಎಂಪಿ ಮುಂದಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಮಳೆಯಿಂದಾಗಿ ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ. ಹೀಗಾಗಿ ಮಳೆಗಾಲದ ಸಿದ್ಧತೆಗಳ ಬಗ್ಗೆ 8 ವಲಯಗಳ ಅಧಿಕಾರಿಗಳ ಜೊತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸಭೆ ನಡೆಸಿ, ಮಳೆಗಾಲದ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಗಾಲ ಆರಂಭವಾಗಿದ್ದು, ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗುವುದು, ಚರಂಡಿಗಳಿಂದ ನೀರು ಉಕ್ಕಿ ಹರಿಯುವುದು, ಮರಗಳು, ವಿದ್ಯುತ್ ಕಂಬಗಳು ಬೀಳುವುದನ್ನು ತಡೆಯಲು ಮತ್ತು ಮಳೆಯಿಂದಾಗುವ ಇತರೆ ಅನಾಹುತಗಳನ್ನು ತಡೆಯಲು ವಿಪತ್ತು ನಿರ್ವಹಣಾ ತಂಡವನ್ನು ಸ್ಥಾಪಿಸಬೇಕಾಗಿದೆ. ಈ ತಂಡದಲ್ಲಿ ಬಿಬಿಎಂಪಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB), ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM), ಮತ್ತು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಇರಲಿದ್ದಾರೆಂದು ಮಾಹಿತಿ ನೀಡಿದರು.

ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಮಳೆಯಾಗುತ್ತಿದ್ದು, ನಗರದ ವಿವಿಧ ಭಾಗಗಳಲ್ಲಿ ಮಳೆಯ ಪ್ರಮಾಣ ವಿಭಿನ್ನವಾಗಿದೆ. ಕೆಲವೆಡೆ ಸಾಮಾನ್ಯ ಮಳೆಯಾಗಿದ್ದರೆ, ಇನ್ನು ಕೆಲವೆಡೆ ಸಾಧಾರಣದಿಂದ ಭಾರಿ ಮಳೆಯಾಗಿದೆ. ಮಳೆಯಿಂದಾಗಿ ನಗರದಾದ್ಯಂತ 150 ಕಡೆಗಳಲ್ಲಿ ನೀರು ತುಂಬಿಕೊಂಡಿದೆ, ಈ ಸಮಸ್ಯೆಯನ್ನು ಬಗೆಹರಿಸಲಾಗಿದೆ.

ಮಳೆ ಆರಂಭವಾದಾಗಿನಿಂದ ಇಲ್ಲಿಯವರೆಗೆ 325 ಮರಗಳು ಬಿದ್ದಿವೆ. ಈ ಪೈಕಿ 320 ಮರಗಳನ್ನು ತೆರವುಗೊಳಿಸಲಾಗಿದೆ. 171 ದೊಡ್ಡ ಮರಗಳು, 690 ಕೊಂಬೆಗಳು ಬಿದ್ದಿವೆ. ಉಳಿದವುಗಳನ್ನು ಶೀಘ್ರದಲ್ಲಿ ತೆರವುಗೊಳಿಸಲಾಗುವುದು. ಬಿದ್ದಿರುವ ಮರ, ಕೊಂಬೆಗಳನ್ನು ತೆರವುಗೊಳಿಸಲು 39 ತಂಡಗಳು ಕರ್ತವ್ಯ ನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದರು.

ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 225 ವಾರ್ಡ್‌ಗಳಲ್ಲಿನ ಚರಂಡಿಗಳಲ್ಲಿ ಹೂಳು ತೆಗೆಯುವುದು ಸೇರಿ ಮಳೆಗಾಲದಲ್ಲಿ ಸಮಸ್ಯೆ ಎದುರಾಗದಂತೆ ನಿರ್ವಹಣಾ ಕಾರ್ಯ ಕೈಗೊಳ್ಳಲು ತಲಾ 30 ಲಕ್ಷ ರೂ.ನಂತೆ 67.50 ಕೋಟಿ ರೂ ನೀಡಲಾಗಿದೆ. ಜೊತೆಗೆ ಈ ಬಾರಿ ನಗರದಲ್ಲಿ ವಿಪತ್ತು ನಿರ್ವಹಣೆಗಾಗಿ ಬ್ರ್ಯಾಂಡ್ ಬೆಂಗಳೂರು ಯೋಜನೆ ಅಡಿಯಲ್ಲಿ ಹೆಚ್ಚುವರಿಯಾಗಿ 10 ಕೋಟಿ ರೂ.ಮೀಸಲಿಡಲಾಗಿದೆ. ಒಟ್ಟಾರೆ ಮಳೆಗಾಲದಲ್ಲಿ ಉಂಟಾಗಲಿರುವ ಸಮಸ್ಯೆಗೆ ಮುನ್ನೆಚ್ಚರಿಕಾ ಕ್ರಮ ಹಾಗೂ ಪರಿಹಾರ ಕಾರ್ಯಕ್ಕೆ 77.50 ಕೋಟಿ ರೂ. ನೀಡಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT