SSLC ಪರೀಕ್ಷೆಯ ಟಾಪರ್ ಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಸನ್ಮಾನ 
ರಾಜ್ಯ

SSLC ಪರೀಕ್ಷೆ ಟಾಪರ್ ಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಸನ್ಮಾನ, ನಗದು ಬಹುಮಾನ ವಿತರಣೆ

SSLC ಪರೀಕ್ಷೆಯ ಫಲಿತಾಂಶದಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಡಿಸಿಎಂ ಡಿಕೆ ಶಿವಕುಮಾರ್ ಇಂದು ಸನ್ಮಾನಿಸಿ ಪ್ರೋತ್ಸಾಹ ಧನ ನೀಡಿದರು.

ಬೆಂಗಳೂರು: SSLC ಪರೀಕ್ಷೆಯ ಫಲಿತಾಂಶದಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಡಿಸಿಎಂ ಡಿಕೆ ಶಿವಕುಮಾರ್ ಇಂದು ಸನ್ಮಾನಿಸಿ ಪ್ರೋತ್ಸಾಹ ಧನ ನೀಡಿದರು.

ಹೌದು.. ಇತ್ತೀಚೆಗೆ ಪ್ರಕಟಗೊಂಡ SSLC ಪರೀಕ್ಷೆಯ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೇ ಪ್ರಥಮ ರ್ಯಾಂಕ್ ಗಳಿಸಿದ ಬಾಗಲಕೋಟೆಯ ವಿದ್ಯಾರ್ಥಿನಿ ಅಂಕಿತಾ ಅವರನ್ನು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸನ್ಮಾನಿಸಿದರು.

ಅಲ್ಲದೆ ವಿದ್ಯಾರ್ಥಿನಿಗೆ ಪ್ರೋತ್ಸಾಹ ಧನವಾಗಿ 5 ಲಕ್ಷರೂ ಬಹುಮಾನ ನೀಡಿದರು. ಅಂಕಿತಾ ಮಾತ್ರವಲ್ಲದೇ ಮಂಡ್ಯದ ವಿದ್ಯಾರ್ಥಿ ನವನೀತ್ ಅವರನ್ನೂ ಸನ್ಮಾನಿಸಿದ ಡಿಕೆಶಿ ಅವರಿಗೆ 2 ಲಕ್ಷ ರೂ ಹಣವನ್ನು ಬಹುಮಾನವಾಗಿ ನೀಡಿದರು.

ಈ ಹಿಂದೆ SSLC ಪರೀಕ್ಷಾ ಫಲಿತಾಂಶ ಪ್ರಕಟವಾದಾಗ ರಾಜ್ಯಕ್ಕೇ ಟಾಪರ್ ಆಗಿರುವ ಬಾಗಲಕೋಟೆಯ ವಿದ್ಯಾರ್ಥಿನಿ ಅಂಕಿತಾ ಕುಟುಂಬಸ್ಥರಿಗೆ ಕರೆ ಮಾಡಿದ್ದ ಡಿಕೆ ಶಿವಕುಮಾರ್ ಶುಭ ಹಾರೈಸಿದ್ದರು. ಈ ವೇಳೆ “ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಮೊದಲ ಸ್ಥಾನ ಪಡೆದಿರುವುದು ನನಗೆ ಬಹಳ ಸಂತೋಷ ತಂದಿದೆ. ನಿನಗೆ ಶುಭವಾಗಲಿ. ಬೆಂಗಳೂರಿಗೆ ಬಂದಾಗ ತಮ್ಮ ಮನೆಗೆ ಬಾ” ಎಂದು ಡಿಸಿಎಂ ಅಂಕಿತಾರನ್ನು ಆಹ್ವಾನಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT