ಸಾ.ರಾ ಮಹೇಶ್ 
ರಾಜ್ಯ

ಮಹಿಳೆ ಕಿಡ್ನಾಪ್ ಕೇಸ್: ಎಫ್ ಐಆರ್ ದಾಖಲಾಗುವ ಮುನ್ನವೇ ಸತೀಶ್ ಬಾಬು ಬಂಧನ; ಸಾ.ರಾ ಮಹೇಶ್ ಆರೋಪ

ಜೆಡಿಎಸ್ ಮುಖಂಡ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ದಾಖಲಾಗಿರುವ ಅಪಹರಣ ಪ್ರಕರಣದಲ್ಲಿ ಸಂಚು ನಡೆದಿದೆ ಎಂದು ಜೆಡಿಎಸ್‌ನ ಹಿರಿಯ ಮುಖಂಡ ಸಾ.ರಾ.ಮಹೇಶ್‌ ಹೇಳಿದ್ದಾರೆ.

ಮೈಸೂರು: ಜೆಡಿಎಸ್ ಮುಖಂಡ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ದಾಖಲಾಗಿರುವ ಅಪಹರಣ ಪ್ರಕರಣದಲ್ಲಿ ಸಂಚು ನಡೆದಿದೆ ಎಂದು ಜೆಡಿಎಸ್‌ನ ಹಿರಿಯ ಮುಖಂಡ ಸಾ.ರಾ.ಮಹೇಶ್‌ ಹೇಳಿದ್ದಾರೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ. ಆರ್ ನಗರ ಮಹಿಳೆ ಅಪಹರಣ ಪ್ರಕರಣದ ಎಫ್​ಐಆರ್ ದಾಖಲಾಗುವ ಮುನ್ನವೆ ಸತೀಶ್ ಬಾಬು ಅವರನ್ನು ಎಸ್‌ಐಟಿ ವಶಕ್ಕೆ ಪಡೆಯಲಾಗಿತ್ತು ಎಂದು ಮಾಜಿ ಸಚಿವ ಸಾ. ರಾ ಮಹೇಶ್ ಆರೋಪಿಸಿದ್ದಾರೆ.

ಕೆ.ಆರ್ ನಗರದ ಮಹಿಳೆ ಅಪಹರಣಕ್ಕೆ ಸಂಬಂಧಿಸಿದಂತೆ ರಾತ್ರಿ 9.30ಕ್ಕೆ ಪ್ರಕರಣ ದಾಖಲಾಗಿದೆ. ಆದರೆ, ಅದಕ್ಕೂ ಮುನ್ನ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಸತೀಶ್ ಬಾಬು ಅವರನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಇದಕ್ಕೆ ನಮ್ಮಲ್ಲಿ ಸಾಕ್ಷಿಗಳಿವೆ ಎಂದು ಅಚ್ಚರಿ ಮಾಹಿತಿ ಹೊರ ಹಾಕಿದ್ದಾರೆ.

ಸಿಸಿ ಕ್ಯಾಮರಾದಲ್ಲಿ ಅವರನ್ನು ಕರೆದ್ಯೊಯುತ್ತಿರುವ ವಿಡಿಯೋ ದಾಖಲೆ ನಮ್ಮ ಬಳಿ ಇದೆ. ಇದು ಗೊತ್ತಾಗುತ್ತಿದ್ದಂತೆ ಬೇಕರಿಯ ಹಾರ್ಡ್ ಡಿಸ್ಕ್ ತೆಗೆದುಕೊಂಡು ಹೋಗಿ ಡಿಲಿಟ್ ಮಾಡಿಕೊಟ್ಟಿದ್ದಾರೆ. ಆದರೆ, ಮತ್ತೊಬ್ಬ ಮೊಬೈಲ್ ವಿಡಿಯೋ ಮಾಡಿ ಅದನ್ನು ಬೇರೊಬ್ಬರಿಗೆ ಕಳುಹಿಸಿದ್ದಾನೆ. ಮೈಸೂರಿನಿಂದ ಸಬ್​ ಇನ್‌ಸ್ಪೆಕ್ಟರ್​ವೊಬ್ಬರು ಆಲ್ಟೊ ಕಾರಿನಲ್ಲಿ ಹೋಗಿ ದಾಖಲೆಗಳನ್ನು ನಾಶ ಮಾಡಿದ್ದಾರೆ. ಇಷ್ಟೆಲ್ಲ ಸಾಕ್ಷಿಗಳು ನಮ್ಮ ಬಳಿ ಇದ್ದು, ಇದನ್ನು ನಮ್ಮ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ ಎಂದು ವಿವರಿಸಿದರು.

ಮಹಿಳೆ ಅಪಹರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ ಹುಡುಗ ಅಮಾಯಕನಾಗಿದ್ದು, ಆತನಿಗೆ ಹಣ ನೀಡಿ ಖಾಲಿ ಪೇಪರ್‌ನಲ್ಲಿ ಸಹಿ ಪಡೆದುಕೊಂಡಿದ್ದಾರೆ. ದೂರು ಕೊಟ್ಟ ಯುವಕ ಈಗ ಎಲ್ಲಿದ್ದಾನೆ?, ಎಲ್ಲಿಗೆ ಹೋಗಿದ್ದಾನೆ ಎಂದು ಪ್ರಶ್ನಿಸಿದರು.

ದೂರು ಕೊಟ್ಟ ಯುವಕ ಈವರೆಗೂ ಆತ ಎಲ್ಲಿ ಹೋಗಿದ್ದಾನೆ ಎಂದು ಯಾರಿಗೂ ಗೊತ್ತಿಲ್ಲ. ಆ ಮಹಿಳೆ ಬಳಿಯೂ ಈವರೆಗೆ 164ಎ ಹೇಳಿಕೆ ಏಕೆ ದಾಖಲಿಸಿಲ್ಲ. ಆಕೆ ತೋಟದ ಮನೆಗೆ ಹೋಗಿದ್ದು ಸತ್ಯ. ಇದಕ್ಕೆ ಅಲ್ಲಿರುವವರು ಸಾಕ್ಷಿ ಇದ್ದಾರೆ. ಅವರು ಹೇಳುವಂತೆ ಆಕೆ ಕುರಿ ಕಾಯುವಿಕೆ ಕೆಲಸ ಮಾಡುತ್ತಿದ್ದಳು. ಕುರಿ ಕಾಯುತ್ತಿದ್ದ ಮೇಲೆ ಕಿಡ್ನ್ಯಾಪ್​ ಹೇಗೆ ಆಗುತ್ತದೆ? ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT