ಪೊಲೀಸರು ತಪಾಸಣೆ ನಡೆಸುತ್ತಿರುವುದು. 
ರಾಜ್ಯ

ಮುಂದುವರೆದ ಹುಚ್ಚಾಟ: ನಗರದಲ್ಲಿ ಪ್ರತಿಷ್ಟಿತ ಶಾಲೆಗಳಿಗೆ ಬಾಂಬ್ ಬೆದರಿಕೆ; ಪೊಲೀಸರಿಂದ ಪರಿಶೀಲನೆ

ದೇಶಾದ್ಯಂತ ಶಾಲೆಗಳಿಗೆ ಬಾಂಬ್ ಇಡಲಾಗಿದೆ ಎಂಬ ಹುಸಿ ಕರೆಗಳು ಬರುತ್ತಿದ್ದು, ಆತಂಕದ ವಾತಾವರಣ ಸೃಷ್ಟಿಯಾಗುತ್ತಿರುವುದು ಇತ್ತೀಚೆಗೆ ಸಾಮಾನ್ಯವಾಗಿದೆ. ನಕಲಿ ಬೆದರಿಕೆ ಕರೆ ಎಂದು ತಿಳಿದಿದ್ದರೂ ಉದಾಸೀನ ಮಾಡುವಂತಿಲ್ಲ. ನಗರದಲ್ಲಿ ಮಂಗಳವಾರ ಕನಿಷ್ಟ 8 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಗಳು ಬಂದು, ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಬೆಂಗಳೂರು: ದೇಶಾದ್ಯಂತ ಶಾಲೆಗಳಿಗೆ ಬಾಂಬ್ ಇಡಲಾಗಿದೆ ಎಂಬ ಹುಸಿ ಕರೆಗಳು ಬರುತ್ತಿದ್ದು, ಆತಂಕದ ವಾತಾವರಣ ಸೃಷ್ಟಿಯಾಗುತ್ತಿರುವುದು ಇತ್ತೀಚೆಗೆ ಸಾಮಾನ್ಯವಾಗಿದೆ. ನಕಲಿ ಬೆದರಿಕೆ ಕರೆ ಎಂದು ತಿಳಿದಿದ್ದರೂ ಉದಾಸೀನ ಮಾಡುವಂತಿಲ್ಲ. ನಗರದಲ್ಲಿ ಮಂಗಳವಾರ ಕನಿಷ್ಟ 8 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಗಳು ಬಂದು, ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಶಾಲೆಗಳು ಬೆದರಿಕೆ ಇ-ಮೇಲ್ ಬಗ್ಗೆ ಮಾಹಿತಿ ನೀಡುತ್ತಿದ್ದಂತೆಯೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳಗಳು ತೀವ್ರ ಪರಿಶೀಲನೆ ನಡೆಸಿತು. ಆದರೆ, ಯಾವುದೇ ಸ್ಫೋಟಕ ವಸ್ತುಗಳು ಪತ್ತಯಾಗಿರಲಿಲ್ಲ. ನಂತರ ಇದು ಹುಸಿ ಬಾಂಬ ಬೆದರಿಕ ಎಂಬುದು ತಿಳಿದುಬಂದಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಬೆಂಗಳೂರು ಸ್ಕಾಟಿಷ್ ಶಾಲೆ, ಭವನ್ ಬೆಂಗಳೂರು ಪ್ರೆಸ್ ಸ್ಕೂಲ್, ಚಿತ್ರಕೂಟ ಶಾಲೆ, ದೀಕ್ಷಾ ಹೈಸ್ಕೂಲ್, ಎಡಿಫೈ ಸ್ಕೂಲ್, ಗಂಗೋತ್ರಿ ಇಂಟರ್‌ನ್ಯಾಶನಲ್ ಪಬ್ಲಿಕ್ ಸ್ಕೂಲ್, ಗಿರಿಧನ್ವ ಶಾಲೆ ಮತ್ತು ಜೈನ್ ಹೆರಿಟೇಜ್ ಶಾಲೆಗಳಿಗೆ ಬೆದರಿಕೆ ಇ-ಮೇಲ್ ಗಳು ಬಂದಿದ್ದವು ಎನ್ನಲಾಗಿದೆ.

ಶಾಲಾ ಆವರಣದಲ್ಲಿ ಬಾಂಬ್ ಇಡಲಾಗಿದೆ. ಅದು ಇನ್ನು ಕೆಲವೇ ಗಂಟೆಗಳಲ್ಲಿ ಸ್ಫೋಟಗೊಳ್ಳಲಿದೆ. ಕೋರ್ಟ್ ಎಂಬ ಗುಂಪು ಈ ಹತ್ಯಾಕಾಂಡದ ಹಿಂದೆ ಇದೆ ಎಂದು ಶಾಲೆಗಳಿಗೆ ಬೆದರಿಕೆ ಇ-ಮೇಲ್ ಬಂದಿರುವುದಾಗಿ ತಿಳಿದುಬಂದಿದೆ.

ಈ ಹಿಂದೆಯೂ ಬೆಂಗಳೂರಿನ ಶಾಲೆಗಳಿಗೆ ಇದೇ ರೀತಿಯ ಬೆದರಿಕೆ ಇ-ಮೇಲ್‌ಗಳು ಬಂದಿದ್ದವು. ಒಂದೇ ಬಾರಿ 20-30 ಶಾಲೆಗಳಿಗೆ ಏಕ ಕಾಲಕ್ಕೆ ಬಾಂಬ್ ಇಡಲಾಗಿದೆ ಎಂಬ ಸಂದೇಶ ಇಡೀ ನಗರದಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT