ಪೊಲೀಸರು ತಪಾಸಣೆ ನಡೆಸುತ್ತಿರುವುದು. 
ರಾಜ್ಯ

ಮುಂದುವರೆದ ಹುಚ್ಚಾಟ: ನಗರದಲ್ಲಿ ಪ್ರತಿಷ್ಟಿತ ಶಾಲೆಗಳಿಗೆ ಬಾಂಬ್ ಬೆದರಿಕೆ; ಪೊಲೀಸರಿಂದ ಪರಿಶೀಲನೆ

ದೇಶಾದ್ಯಂತ ಶಾಲೆಗಳಿಗೆ ಬಾಂಬ್ ಇಡಲಾಗಿದೆ ಎಂಬ ಹುಸಿ ಕರೆಗಳು ಬರುತ್ತಿದ್ದು, ಆತಂಕದ ವಾತಾವರಣ ಸೃಷ್ಟಿಯಾಗುತ್ತಿರುವುದು ಇತ್ತೀಚೆಗೆ ಸಾಮಾನ್ಯವಾಗಿದೆ. ನಕಲಿ ಬೆದರಿಕೆ ಕರೆ ಎಂದು ತಿಳಿದಿದ್ದರೂ ಉದಾಸೀನ ಮಾಡುವಂತಿಲ್ಲ. ನಗರದಲ್ಲಿ ಮಂಗಳವಾರ ಕನಿಷ್ಟ 8 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಗಳು ಬಂದು, ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಬೆಂಗಳೂರು: ದೇಶಾದ್ಯಂತ ಶಾಲೆಗಳಿಗೆ ಬಾಂಬ್ ಇಡಲಾಗಿದೆ ಎಂಬ ಹುಸಿ ಕರೆಗಳು ಬರುತ್ತಿದ್ದು, ಆತಂಕದ ವಾತಾವರಣ ಸೃಷ್ಟಿಯಾಗುತ್ತಿರುವುದು ಇತ್ತೀಚೆಗೆ ಸಾಮಾನ್ಯವಾಗಿದೆ. ನಕಲಿ ಬೆದರಿಕೆ ಕರೆ ಎಂದು ತಿಳಿದಿದ್ದರೂ ಉದಾಸೀನ ಮಾಡುವಂತಿಲ್ಲ. ನಗರದಲ್ಲಿ ಮಂಗಳವಾರ ಕನಿಷ್ಟ 8 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಗಳು ಬಂದು, ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಶಾಲೆಗಳು ಬೆದರಿಕೆ ಇ-ಮೇಲ್ ಬಗ್ಗೆ ಮಾಹಿತಿ ನೀಡುತ್ತಿದ್ದಂತೆಯೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳಗಳು ತೀವ್ರ ಪರಿಶೀಲನೆ ನಡೆಸಿತು. ಆದರೆ, ಯಾವುದೇ ಸ್ಫೋಟಕ ವಸ್ತುಗಳು ಪತ್ತಯಾಗಿರಲಿಲ್ಲ. ನಂತರ ಇದು ಹುಸಿ ಬಾಂಬ ಬೆದರಿಕ ಎಂಬುದು ತಿಳಿದುಬಂದಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಬೆಂಗಳೂರು ಸ್ಕಾಟಿಷ್ ಶಾಲೆ, ಭವನ್ ಬೆಂಗಳೂರು ಪ್ರೆಸ್ ಸ್ಕೂಲ್, ಚಿತ್ರಕೂಟ ಶಾಲೆ, ದೀಕ್ಷಾ ಹೈಸ್ಕೂಲ್, ಎಡಿಫೈ ಸ್ಕೂಲ್, ಗಂಗೋತ್ರಿ ಇಂಟರ್‌ನ್ಯಾಶನಲ್ ಪಬ್ಲಿಕ್ ಸ್ಕೂಲ್, ಗಿರಿಧನ್ವ ಶಾಲೆ ಮತ್ತು ಜೈನ್ ಹೆರಿಟೇಜ್ ಶಾಲೆಗಳಿಗೆ ಬೆದರಿಕೆ ಇ-ಮೇಲ್ ಗಳು ಬಂದಿದ್ದವು ಎನ್ನಲಾಗಿದೆ.

ಶಾಲಾ ಆವರಣದಲ್ಲಿ ಬಾಂಬ್ ಇಡಲಾಗಿದೆ. ಅದು ಇನ್ನು ಕೆಲವೇ ಗಂಟೆಗಳಲ್ಲಿ ಸ್ಫೋಟಗೊಳ್ಳಲಿದೆ. ಕೋರ್ಟ್ ಎಂಬ ಗುಂಪು ಈ ಹತ್ಯಾಕಾಂಡದ ಹಿಂದೆ ಇದೆ ಎಂದು ಶಾಲೆಗಳಿಗೆ ಬೆದರಿಕೆ ಇ-ಮೇಲ್ ಬಂದಿರುವುದಾಗಿ ತಿಳಿದುಬಂದಿದೆ.

ಈ ಹಿಂದೆಯೂ ಬೆಂಗಳೂರಿನ ಶಾಲೆಗಳಿಗೆ ಇದೇ ರೀತಿಯ ಬೆದರಿಕೆ ಇ-ಮೇಲ್‌ಗಳು ಬಂದಿದ್ದವು. ಒಂದೇ ಬಾರಿ 20-30 ಶಾಲೆಗಳಿಗೆ ಏಕ ಕಾಲಕ್ಕೆ ಬಾಂಬ್ ಇಡಲಾಗಿದೆ ಎಂಬ ಸಂದೇಶ ಇಡೀ ನಗರದಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT