ಕಾಡಾನೆ ಸೆರೆ ಕಾರ್ಯಾಚರಣೆ online desk
ರಾಜ್ಯ

ಕೊಡಗು: ಕಾಡಾನೆಗೆ ರೇಡಿಯೋ ಕಾಲರ್ ಅಳವಡಿಕೆ ಯಶಸ್ವಿ, ಸ್ಥಳಾಂತರ

ಮನುಷ್ಯ ವಾಸಸ್ಥಳಕ್ಕೆ ನುಗ್ಗಿದ್ದ ಕಾಡಾನೆಗೆ ರೇಡಿಯೋ ಕಾಲರ್ ಅವಳಡಿಕೆ ಮಾಡಲಾಗಿದ್ದು, ಅದನ್ನು ಮರು ಸ್ಥಳಾಂತರ ಮಾಡಲಾಗಿದೆ.

ಕೊಡಗು: ಮನುಷ್ಯ ವಾಸಸ್ಥಳಕ್ಕೆ ನುಗ್ಗಿದ್ದ ಕಾಡಾನೆಗೆ ರೇಡಿಯೋ ಕಾಲರ್ ಅವಳಡಿಕೆ ಮಾಡಲಾಗಿದ್ದು, ಅದನ್ನು ಮರು ಸ್ಥಳಾಂತರ ಮಾಡಲಾಗಿದೆ.

ವಿರಾಜಪೇಟೆ ವಿಭಾಗದ ಅರಣ್ಯ ಇಲಾಖೆ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದು, ರೇಡಿಯೋ ಕಾಲರ್ ಅಳವಡಿಕೆ ಮಾಡಿದ್ದ ಆನೆಯನ್ನು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಶೀಘ್ರವೇ ಸ್ಥಳಾಂತರಿಸಲಾಗುತ್ತದೆ.

ಈ ಕಾರ್ಯಾಚರಣೆಯಲ್ಲಿ 100 ಕ್ಕೂ ಹೆಚ್ಚಿನ ಅರಣ್ಯ ಸಿಬ್ಬಂದಿಗಳು ಭಾಗಿಯಾಗಿದ್ದರು. ಮುಂದಿನ ದಿನಗಳಲ್ಲಿ ಇನ್ನೂ 2 ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲು ಇಲಾಖೆ ಚಿಂತನೆ ನಡೆಸಿದೆ.

ಕಳೆದ 4 ತಿಂಗಳ ಹಿಂದೆ ಜಿಲ್ಲೆಯ ಎಸ್ಟೇಟ್ ನಲ್ಲಿ ಮಹಿಳಾ ಕಾರ್ಮಿಕರೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದರು. ಅದಷ್ಟೇ ಅಲ್ಲದೇ ಆಸ್ತಿ ಹಾನಿಯೂ ಸಂಭವಿಸಿದ್ದರಿಂದ ಕಾಡಾನೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಹೆಚ್ಚಿನ ಒತ್ತಡ ಇತ್ತು.

ಆನೆಗೆ ದಕ್ಷ ಎಂದು ನಾಮಕರಣ ಮಾಡಲಾಗಿದ್ದು ಅದನ್ನು ಸೆರೆಹಿಡಿಯಲು ಮತ್ತು ರೇಡಿಯೊ ಕಾಲರ್ ಮಾಡಲು ಇಲಾಖೆ ಅನುಮತಿಯನ್ನು ಪಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT