ಕಾಡಾನೆ ಸೆರೆ ಕಾರ್ಯಾಚರಣೆ online desk
ರಾಜ್ಯ

ಕೊಡಗು: ಕಾಡಾನೆಗೆ ರೇಡಿಯೋ ಕಾಲರ್ ಅಳವಡಿಕೆ ಯಶಸ್ವಿ, ಸ್ಥಳಾಂತರ

ಮನುಷ್ಯ ವಾಸಸ್ಥಳಕ್ಕೆ ನುಗ್ಗಿದ್ದ ಕಾಡಾನೆಗೆ ರೇಡಿಯೋ ಕಾಲರ್ ಅವಳಡಿಕೆ ಮಾಡಲಾಗಿದ್ದು, ಅದನ್ನು ಮರು ಸ್ಥಳಾಂತರ ಮಾಡಲಾಗಿದೆ.

ಕೊಡಗು: ಮನುಷ್ಯ ವಾಸಸ್ಥಳಕ್ಕೆ ನುಗ್ಗಿದ್ದ ಕಾಡಾನೆಗೆ ರೇಡಿಯೋ ಕಾಲರ್ ಅವಳಡಿಕೆ ಮಾಡಲಾಗಿದ್ದು, ಅದನ್ನು ಮರು ಸ್ಥಳಾಂತರ ಮಾಡಲಾಗಿದೆ.

ವಿರಾಜಪೇಟೆ ವಿಭಾಗದ ಅರಣ್ಯ ಇಲಾಖೆ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದು, ರೇಡಿಯೋ ಕಾಲರ್ ಅಳವಡಿಕೆ ಮಾಡಿದ್ದ ಆನೆಯನ್ನು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಶೀಘ್ರವೇ ಸ್ಥಳಾಂತರಿಸಲಾಗುತ್ತದೆ.

ಈ ಕಾರ್ಯಾಚರಣೆಯಲ್ಲಿ 100 ಕ್ಕೂ ಹೆಚ್ಚಿನ ಅರಣ್ಯ ಸಿಬ್ಬಂದಿಗಳು ಭಾಗಿಯಾಗಿದ್ದರು. ಮುಂದಿನ ದಿನಗಳಲ್ಲಿ ಇನ್ನೂ 2 ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲು ಇಲಾಖೆ ಚಿಂತನೆ ನಡೆಸಿದೆ.

ಕಳೆದ 4 ತಿಂಗಳ ಹಿಂದೆ ಜಿಲ್ಲೆಯ ಎಸ್ಟೇಟ್ ನಲ್ಲಿ ಮಹಿಳಾ ಕಾರ್ಮಿಕರೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದರು. ಅದಷ್ಟೇ ಅಲ್ಲದೇ ಆಸ್ತಿ ಹಾನಿಯೂ ಸಂಭವಿಸಿದ್ದರಿಂದ ಕಾಡಾನೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಹೆಚ್ಚಿನ ಒತ್ತಡ ಇತ್ತು.

ಆನೆಗೆ ದಕ್ಷ ಎಂದು ನಾಮಕರಣ ಮಾಡಲಾಗಿದ್ದು ಅದನ್ನು ಸೆರೆಹಿಡಿಯಲು ಮತ್ತು ರೇಡಿಯೊ ಕಾಲರ್ ಮಾಡಲು ಇಲಾಖೆ ಅನುಮತಿಯನ್ನು ಪಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT