ಪ್ರಾತಿನಿಧಿಕ ಚಿತ್ರ 
ರಾಜ್ಯ

ಮಳೆಗಾಲಕ್ಕೆ ಸಜ್ಜಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದು; ಸಮಸ್ಯೆಗಳನ್ನು ನಿಭಾಯಿಸಲು ಸಿದ್ಧತೆ ಆರಂಭಿಸಲು ಸೂಚನೆ

ಮಳೆಗಾಲದಲ್ಲಿ (ಜೂನ್‌ನಿಂದ ಆಗಸ್ಟ್‌ವರೆಗೆ) ಪೂರ್ವಭಾವಿಯಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ವಿವಿಧ ಮಳೆ ಸಂಬಂಧಿತ ಸಮಸ್ಯೆಗಳನ್ನು ಎದುರಿಸಲು ಸಿದ್ಧತೆಗಳನ್ನು ಆರಂಭಿಸಿದೆ. ಮಂಗಳವಾರ ನಡೆದ ಸಭೆಯಲ್ಲಿ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂಪಿ ಅವರು ಮುಂಗಾರು ಹಂಗಾಮಿನ ಸವಾಲುಗಳನ್ನು ಹೇಗೆ ನಿಭಾಯಿಸಬೇಕು ಎಂಬುದರ ಕುರಿತು ನಿರ್ದೇಶನಗಳೊಂದಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಗಳೂರು: ಮಳೆಗಾಲದಲ್ಲಿ (ಜೂನ್‌ನಿಂದ ಆಗಸ್ಟ್‌ವರೆಗೆ) ಪೂರ್ವಭಾವಿಯಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ವಿವಿಧ ಮಳೆ ಸಂಬಂಧಿತ ಸಮಸ್ಯೆಗಳನ್ನು ಎದುರಿಸಲು ಸಿದ್ಧತೆಗಳನ್ನು ಆರಂಭಿಸಿದೆ.

ಮಂಗಳವಾರ ನಡೆದ ಸಭೆಯಲ್ಲಿ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂಪಿ ಅವರು ಮುಂಗಾರು ಹಂಗಾಮಿನ ಸವಾಲುಗಳನ್ನು ಹೇಗೆ ನಿಭಾಯಿಸಬೇಕು ಎಂಬುದರ ಕುರಿತು ನಿರ್ದೇಶನಗಳೊಂದಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕುಡಿಯುವ ನೀರು ಮತ್ತು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮಂಗಳೂರು ವಿದ್ಯುತ್ ಸರಬರಾಜು ಕಂಪನಿ (ಮೆಸ್ಕಾಂ) ಅಡಿಯಲ್ಲಿನ ವಿದ್ಯುತ್ ವ್ಯವಸ್ಥೆಯ ಅಸಮರ್ಪಕ ನಿರ್ವಹಣೆಯಿಂದ ಎದುರಿಸುತ್ತಿರುವ ಸಮಸ್ಯೆಗಳನ್ನು ಎತ್ತಿ ತೋರಿಸಿದರು. ಮಳೆ ಸಮಯದಲ್ಲಿ ವಿದ್ಯುತ್ ಸರಬರಾಜಿನ ವೈಫಲ್ಯ ಮಾತ್ರವಲ್ಲದೆ ಲೈವ್ ಕೇಬಲ್‌ಗಳು, ಸಂಪರ್ಕ ಕಡಿತ ಮತ್ತು ಧರೆಗುರುಳುವ ವಿದ್ಯುತ್ ಕಂಬಗಳು ಆತಂಕಕ್ಕೆ ಕಾರಣವಾಗಿವೆ. ಇದರಿಂದ ಪ್ರಾಣ ಮತ್ತು ಆಸ್ತಿಪಾಸ್ತಿಗೆ ಗಂಭೀರ ಹಾನಿಯಾಗುವುದರಿಂದ ಮೆಸ್ಕಾಂ ಮುಂಜಾಗ್ರತಾ ಕ್ರಮವಾಗಿ ತಪಾಸಣೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮಳೆಗಾಲದಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲು ಮತ್ತು ಜಿಲ್ಲೆಯಾದ್ಯಂತ ಹೆಚ್ಚಿನ ನಿಯಂತ್ರಣ ಕೊಠಡಿಗಳನ್ನು ತೆರೆಯಲು ಮೆಸ್ಕಾಂಗೆ ನಿರ್ದೇಶನ ನೀಡಿದರು. ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಸಮಾನ ಪ್ರಾಮುಖ್ಯತೆ ನೀಡಬೇಕು. ಮುಂಗಾರು ಪೂರ್ವದಲ್ಲಿ, ಈಗಿರುವ ನೀರಿನ ಲಭ್ಯತೆಯನ್ನು ವಿವೇಚನೆಯಿಂದ ನಿರ್ವಹಿಸಬೇಕು ಎಂದು ಹೇಳಿದರು.

ಮಳೆಗಾಲಕ್ಕೂ ಮುನ್ನ ಡಂಪಿಂಗ್ ಯಾರ್ಡ್ ಹಾಗೂ ಕಸ ವಿಲೇವಾರಿ ಸ್ಥಳಗಳ ಸ್ವಚ್ಛತೆಗೆ ಒತ್ತು ನೀಡಲಾಯಿತು. ಮಳೆಗಾಲದಲ್ಲಿ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಸೂಚಿಸಲಾಯಿತು.

ರಾಷ್ಟ್ರೀಯ ಹೆದ್ದಾರಿ ಚಾರ್ಮಾಡಿ ಘಾಟ್ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಪ್ರದೇಶಗಳನ್ನು ಪಟ್ಟಿ ಮಾಡಬೇಕು ಮತ್ತು ಘಾಟ್ ಪ್ರದೇಶಗಳಲ್ಲಿನ ಟ್ರಾಫಿಕ್ ಸಮಸ್ಯೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ಮಳೆಗಾಲದಲ್ಲಿ ಮೀನುಗಾರರಿಗೆ ಮುಂಜಾಗ್ರತಾ ಕ್ರಮಗಳ ಕುರಿತು ಸಭೆ ನಡೆಸುವಂತೆ ಮೀನುಗಾರಿಕಾ ಇಲಾಖೆಗೆ ಜಿಲ್ಲಾ ಉಪ ಆಯುಕ್ತರು ಸೂಚನೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT