ಹೆಚ್ ಡಿ ರೇವಣ್ಣ  
ರಾಜ್ಯ

'ತಾಯಿ ಚಾಮುಂಡಿಗೆ ಎಲ್ಲವನ್ನೂ ಬಿಟ್ಟಿದ್ದೇನೆ': ಪುತ್ರ ಪ್ರಜ್ವಲ್ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದ ಹೆಚ್ ಡಿ ರೇವಣ್ಣ

ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ ನಿನ್ನೆ ಮಂಗಳವಾರ ಜೈಲಿನಿಂದ ಬಿಡುಗಡೆ ಆಗಿ ತಮ್ಮ ತಂದೆ ಹೆಚ್ ಡಿ ದೇವೇಗೌಡ ನಿವಾಸಕ್ಕೆ ಆಗಮಿಸಿ ತಂದೆ-ತಾಯಿ ಕಾಲಿಗೆ ನಮಸ್ಕರಿಸಿ ಮಾತುಕತೆ ನಡೆಸಿದ ನಂತರ ಸಾಯಂಕಾಲ ಟೆಂಪಲ್ ರನ್ ನಡೆಸಿದ್ದಾರೆ.

ಮೈಸೂರು: ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ ನಿನ್ನೆ ಮಂಗಳವಾರ ಜೈಲಿನಿಂದ ಬಿಡುಗಡೆ ಆಗಿ ತಮ್ಮ ತಂದೆ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ಆಗಮಿಸಿ ತಂದೆ-ತಾಯಿ ಕಾಲಿಗೆ ನಮಸ್ಕರಿಸಿ ಮಾತುಕತೆ ನಡೆಸಿದ ನಂತರ ಸಾಯಂಕಾಲ ಟೆಂಪಲ್ ರನ್ ನಡೆಸಿದ್ದಾರೆ.

ಬಸವನಗುಡಿಯಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ತದನಂತರ ಬನಶಂಕರಿಯ ತಮ್ಮ ನಿವಾಸಕ್ಕೆ ಆಗಮಿಸಿ ಅಲ್ಲಿಯೂ ಸಹ ದೇವರ ಪ್ರಾರ್ಥನೆ ಮಾಡಿದರು. ಬಳಿಕ ಅಲ್ಲಿಂದ ನೇರವಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪುತ್ರ ಪ್ರಜ್ವಲ್ ರೇವಣ್ಣ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿಸಿದರು. ಕುಟುಂಬದ ಪ್ರತಿಯೊಬ್ಬರ ಹೆಸರು ಹಾಗೂ ನಕ್ಷತ್ರ ಹೇಳಿ ಅರ್ಚನೆ ಮಾಡಿಸಿದರು. ಬಳಿಕ ದೇವಾಲಯದಲ್ಲಿ ಸುಮಾರು ಹತ್ತು ನಿಮಿಷಗಳ ಕಾಲ ಏಕಾಂಗಿಯಾಗಿ ಕುಳಿತು ದೇವಿಗೆ ಪ್ರಾರ್ಥನೆ ಮಾಡಿದರು.

ತಾಯಿ ಚಾಮುಂಡಿಗೆ ಎಲ್ಲವನ್ನೂ ಬಿಟ್ಟು ಬಿಟ್ಟೀದ್ದೀನಿ: ದೇಗುಲದಿಂದ ಹೊರಬಂದು ಮಾಧ್ಯಮ ಪ್ರತಿನಿಧಿಗಳು ಮಾತನಾಡಿಸಿದಾಗ, ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವುದರಿಂದ ಈ ಬಗ್ಗೆ ಮಾತನಾಡುವುದಿಲ್ಲ. ನನಗೆ ನ್ಯಾಯಾಂಗದ ಮೇಲೆ ಗೌರವವಿದೆ. ತಾಯಿ ಚಾಮುಂಡಿಯ ದರ್ಶನ ಮಾಡಿದ್ದೇನೆ. ನನಗೆ ದೇವರು ಮತ್ತು ಈ ರಾಜ್ಯದ ಜನತೆ ಮೇಲೆ ನಂಬಿಕೆಯಿದೆ ಎಂದರು.

40 ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿದ್ದೇನೆ. ಇದೇ ಮೊದಲು ನ್ಯಾಯಾಲಯದಲ್ಲಿ ನನ್ನ ಕೇಸು ದಾಖಲಾಗಿರುವುದು. ನ್ಯಾಯಾಂಗದ ಮೇಲೆ ನಂಬಿಕೆಯಿರಿಸಿದ್ದೇನೆ. ತಾಯಿ ಚಾಮುಂಡೇಶ್ವರಿಗೆ ಎಲ್ಲವನ್ನೂ ಬಿಟ್ಟಿದ್ದೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್