ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಈಜುಕೊಳ ಬಳಕೆಯ ನಿಷೇಧ ಸಡಿಲಿಸಿದ ಜಲಮಂಡಳಿ!

ಅಪಾರ್ಟ್‌ಮೆಂಟ್‌ ಹಾಗೂ ಕ್ರೀಡಾ ಸಂಸ್ಥೆಯವರು ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಜಲಮಂಡಳಿ ಅಧ್ಯಕ್ಷ ಡಾ. ರಾಮ್‌ ಪ್ರಸಾತ್‌ ಮನೋಹರ್‌, ಕೆಲವು ಷರತ್ತುಗಳನ್ನ ವಿಧಿಸುವ ಮೂಲಕ ಈಜುಕೊಳದ ಬಳಕೆಯ ನಿಷೇಧವನ್ನು ಸಡಿಲಿಸಿದ್ದಾರೆ.

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ ಹಾಗೂ ಕ್ರೀಡಾ ಸಂಸ್ಥೆಯವರು ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಜಲಮಂಡಳಿ ಅಧ್ಯಕ್ಷ ಡಾ. ರಾಮ್‌ ಪ್ರಸಾತ್‌ ಮನೋಹರ್‌, ಕೆಲವು ಷರತ್ತುಗಳನ್ನ ವಿಧಿಸುವ ಮೂಲಕ ಈಜುಕೊಳದ ಬಳಕೆಯ ನಿಷೇಧವನ್ನು ಸಡಿಲಿಸಿದ್ದಾರೆ.

ಕಡ್ಡಾಯವಾಗಿ ಈಜುಕೊಳಕ್ಕೆ ಕಾವೇರಿ ನೀರನ್ನು ಬಳಸುವಂತಿಲ್ಲ. ಈಜುಕೊಳಕ್ಕೆ ಮಳೆ ನೀರು ಅಥವಾ ಕೊಳವೆ ಬಾವಿ ಮೂಲಕ ನೀರನ್ನು ಮಾತ್ರ ಬಳಸತಕ್ಕದ್ದು. ಈಜು ಕೊಳಕ್ಕೆ ನೀರನ್ನು ಶುದ್ದೀಕರಿಸುವ ಯಂತ್ರವನ್ನು ಅಳವಡಿಸಿಕೊಂಡು ನೀರನ್ನು ಮರುಬಳಕೆ ಮಾಡಬೇಕು ಎಂಬ ಷರತ್ತು ಹಾಕಲಾಗಿದೆ.

ತಮ್ಮ ಸಮುಚ್ಚಯದಲ್ಲಿ ಕಡ್ಡಾಯವಾಗಿ ಕೊಳವೆ ಬಾವಿ ಅಕ್ಕಪಕ್ಕದಲ್ಲಿ ಮಳೆ ನೀರು ಇಂಗು ಗುಂಡಿಗಳನ್ನು ನಿರ್ಮಿಸಿರಬೇಕು. ಎಲ್ಲಾ ಟ್ಯಾಪ್‌ಗಳಿಗೆ ಕಡ್ಡಾಯವಾಗಿ ಏರಿಯೇಟರ್‌ ಅಳವಡಿಸಿಕೊಂಡಿರಬೇಕು ಹಾಗೂ ಕುಡಿಯುವುದನ್ನು ಹೊರತುಪಡಿಸಿ ಅನ್ಯ ಬಳಕೆಗಳಿಗೆ (ಗಾರ್ಡೆನಿಂಗ್‌ ಮತ್ತು ಫ್ಲಶಿಂಗ್)‌ ಗೆ ಕಡ್ಡಾಯವಾಗಿ ಸಂಸ್ಕರಿಸಿದ ನೀರನ್ನು ಬಳಸಬೇಕು ಎನ್ನುವ ಷರತ್ತುಗಳನ್ನು ವಿಧಿಸಲಾಗಿದೆ.

ಈಜುಕೊಳಕ್ಕೆ ಕಾವೇರಿ ನೀರು ಬಳಕೆ ಮಾಡುವುದು ಕಂಡಬಂದಲ್ಲಿ ಜಲಮಂಡಳಿಯ ಕಾಯ್ದೆ 1964 ರ ಕಲಂ 109 ಅನ್ವಯ 5,000 ರೂಗಳ ದಂಡ ವಿಧಿಸಲಾಗುವುದು. ಈ ಉಲ್ಲಂಘನೆ ಮರುಕಳಿಸಿದಲ್ಲಿ ದಂಡ ಮೊತ್ತ 5,000 ರೂಗಳ ಜೊತೆಗೆ ಹೆಚ್ಚುವರಿಯಾಗಿ ಪ್ರತಿದಿನ ರೂ. 500 ದಂಡ ವಿಧಿಸಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT