ಆರೋಪಿ ಗಿರೀಶ್ ಸಾವಂತ್ 
ರಾಜ್ಯ

ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಪ್ರಕರಣ: ಆರೋಪಿ ಗಿರೀಶ್ ಸಾವಂತ್ ದಾವಣಗೆರೆಯಲ್ಲಿ ಬಂಧನ

ಪ್ರೀತಿ ನಿರಾಕರಿಸಿದ ಕಾರಣಕ್ಕೆ ಮನೆಯೊಳಗೆ ನುಗ್ಗಿ ಮಲಗಿದ್ದಲ್ಲೇ ಯುವತಿಯನ್ನು ಹತ್ಯೆ ಮಾಡಿದ ಆರೋಪಿಯನ್ನು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.

ಹುಬ್ಬಳ್ಳಿ/ದಾವಣಗೆರೆ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಮನೆಯೊಳಗೆ ನುಗ್ಗಿ ಮಲಗಿದ್ದಲ್ಲೇ ಯುವತಿಯನ್ನು ಹತ್ಯೆ ಮಾಡಿದ ಆರೋಪಿಯನ್ನು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಎರಡು ದಿನಗಳ ಹಿಂದೆ ಅಂಜಲಿ ಅಂಬಿಗೇರ್ ಎಂಬ ಯುವತಿಯನ್ನು ವಿಶ್ವ ಅಲಿಯಾಸ್ ಗಿರೀಶ್ ಸಾವಂತ್ ಎಂಬ ಯುವಕ ತನ್ನ ಪ್ರೇಮ ನಿವೇದನೆಗೆ ಸಹಕರಿಸುತ್ತಿಲ್ಲ ಎಂದು ಸಿಟ್ಟಿನಿಂದ ಬೆಳ್ಳಂಬೆಳಗ್ಗೆ ಆಕೆಯ ಮನೆಯೊಳಗೆ ನುಗ್ಗಿ ಚಾಕುವಿನಿಂದ ಮನಸೋ ಇಚ್ಛೆ ತಿವಿದು ಹತ್ಯೆ ಮಾಡಿ ಪರಾರಿಯಾಗಿದ್ದ.

ಹುಬ್ಬಳ್ಳಿ ಪೊಲೀಸರು ಆರೋಪಿ ವಿಶ್ವ ಸಾವಂತ್ ಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದರು. ಇದೀಗ ದಾವಣಗೆರೆಯಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಪೊಲೀಸರು ವಿಶ್ವ ಸಾವಂತ್ ಕೊಲೆ ಮಾಡುವುದಕ್ಕೆ ಮುನ್ನ ಮೊಬೈಲ್ ನಲ್ಲಿ ಸಂವಾದ ನಡೆಸುತ್ತಿದ್ದ ಮೂವರನ್ನು ಕರೆದು ತೀವ್ರ ವಿಚಾರಣೆ ನಡೆಸಿದ್ದರು. ಅದರ ಸುಳಿವಿನ ಆಧಾರದಲ್ಲಿ ಇದೀಗ ವಿಶ್ವನಾಥ್ ನನ್ನು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.

ಮುಂಬೈಗೆ ಪರಾರಿಯಾಗಲು ಯತ್ನ, ರೈಲಿನಿಂದ ಬಿದ್ದು ಗಾಯ: ಅಂಜಲಿಯನ್ನು ಹತ್ಯೆಗೈದ ನಂತರ ಆರೋಪಿ ವಿಶ್ವ ಬೆಂಗಳೂರು ಮೂಲಕವಾಗಿ ರೈಲಿನಲ್ಲಿ ಗೋವಾಕ್ಕೆ ಹೋದ ನಂತರ ಮುಂಬೈಗೆ ಪರಾರಿಯಾಗಲು ಯತ್ನಿಸಿದ್ದ. ರೈಲಿನಲ್ಲಿ ಪ್ರಯಾಣಿಸುತ್ತಿರುವ ಮಾಹಿತಿ ಸಿಕ್ಕ ಹುಬ್ಬಳ್ಳಿ ಪೊಲೀಸರು ದಾವಣಗೆರೆಯಲ್ಲಿ ಅವನನ್ನು ಬಂಧಿಸಲು ಯತ್ನಿಸುವ ವೇಳೆ ರೈಲಿನಿಂದ ಜಿಗಿದು ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ರೈಲಿನಿಂದ ಬಿದ್ದ ರಭಸಕ್ಕೆ ಆತನಿಗೆ ಗಾಯಗಳಾಗಿವೆ. ಆತನ ಮುಖ ಮತ್ತು ತಲೆಗೆ ಗಂಭೀರ ಗಾಯವಾಗಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಸ್ಪತ್ರೆಗೆ ಭೇಟಿ ನೀಡಿದ ಹುಬ್ಬಳ್ಳಿ ನಗರ ಪೊಲೀಸ್ ಆಯುಕ್ತೆ ರೇಣುಕಾ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT