ರೇವಣ್ಣ  
ರಾಜ್ಯ

ಒತ್ತಡದ ನಡುವೆಯೂ ಕಾಗದ ಪತ್ರ ಸಮಿತಿ ಸಭೆಯಲ್ಲಿ ಹೆಚ್ ಡಿ ರೇವಣ್ಣ ಭಾಗಿ!

ಲೈಂಗಿಕ ಕಿರುಕುಳ ಅರೋಪ, ಕಾನೂನು ಹೋರಾಟದ ಒತ್ತಡಗಳ ನಡುವಲ್ಲೂ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರು ವಿಧಾನ ಸೌಧದಲ್ಲಿ ಶುಕ್ರವಾರ ನಡೆದ ಕಾಗದ ಪತ್ರ ಸಮಿತಿ ಸಭೆಯಲ್ಲಿ ಭಾಗವಹಿಸಿದರು.

ಬೆಂಗಳೂರು: ಲೈಂಗಿಕ ಕಿರುಕುಳ ಅರೋಪ, ಕಾನೂನು ಹೋರಾಟದ ಒತ್ತಡಗಳ ನಡುವಲ್ಲೂ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರು ವಿಧಾನ ಸೌಧದಲ್ಲಿ ಶುಕ್ರವಾರ ನಡೆದ ಕಾಗದ ಪತ್ರ ಸಮಿತಿ ಸಭೆಯಲ್ಲಿ ಭಾಗವಹಿಸಿದರು.

ರೇವಣ್ಣ ಅವರು ಈ ಸಮಿತಿಯ ಅಧ್ಯಕ್ಷ ಕೂಡ ಆಗಿದ್ದು, ಕೋರ್ಟ್ ಗೆ ತೆರಳುವ ಮುನ್ನ ಸಭೆಯಲ್ಲಿ ಭಾಗಿಯಾಗಿದ್ದರು. ಬರಿಗಾಲಿನಲ್ಲಿ ಬಂದ ರೇವಣ್ಣ ಅವರು, ಸಭೆ ನಡೆಸಿದರು. ಸಮಿತಿಯಲ್ಲಿರುವ 20 ಸದಸ್ಯರ ಪೈಕಿ 10ರಿಂದ 11 ಶಾಸಕರು ಸಭೆಗೆ ಆಗಮಿಸಿದ್ದರು. ಹೆಚ್ಚಿನ ಅಧಿಕಾರಿಗಳು ಚುನಾವಣಾ ಕರ್ತವ್ಯದಿಂದ ಹಿಂತಿರುಗದ ಕಾರಣ ಮುಂದಿನ ಸಭೆಯಲ್ಲಿ ಕೂಲಂಕುಷವಾಗಿ ಚರ್ಚಿಸಲು ನಿರ್ಧರಿಸಿದರು ಎಂದು ತಿಳಿದುಬಂದಿದ.

ಸಭೆ ಬಳಿಕ ಹೊರ ಬಂದ ರೇವಣ್ಣ ಅವರು, ತಮ್ಮನ್ನು ಸುತ್ತುವರಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಲಿಲ್ಲ. ಸಮಿತಿಯ ಅಧ್ಯಕ್ಷರನ್ನು ಬದಲಿಸುವ ಕುರಿತು ಗುಸುಗುಸುಗಳು ಕೇಳಿ ಬರುತ್ತಿವೆ ಈ ಬಗ್ಗೆ ಏನು ಹೇಳುತ್ತೀರಿ ಎಂಬ ಪ್ರಶ್ನೆಗೂ ಉತ್ತರಿಸಲು ನಿರಾಕರಿಸಿದರು. ದಾರಿ ಬಿಡಿ, ನಾನು ಕೋರ್ಟ್ ಹೋಗಬೇಕಿದೆ ಎಂದು ಹೇಳಿದರು. ನಂತರ ರೇವಣ್ಣ ಸ್ಥಿತಿಯನ್ನು ಅರ್ಥ ಮಾಡಿಕೊಂಡ ಪತ್ರಕರ್ತರು ಅವರಿಗೆ ಹೋಗಲು ದಾರಿ ಬಿಟ್ಟರು.

ಜೈಲಿಗೆ ಹೋಗಿ ಬಂದಾಗಿನಿಂದ ರೇವಣ್ಣ ಚಪ್ಪಲಿ ಧರಿಸುವುದನ್ನು ನಿಲ್ಲಿಸಿದ್ದಾರೆ. ದೈವಭಕ್ತರಾಗಿರುವ ಅವರು, ಅರೋಪಗಳಿಂದ ಮುಕ್ತರಾಗುವವರೆಗೆ ಚಪ್ಪಲಿ ಧರಿಸದಿರುವ ಪಣ ತೊಟ್ಟಿದ್ದಾರೆಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT