ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ, ತೆಲುಗು ನಟಿಯರು, ಮಾಡೆಲ್ ಗಳು ಸೇರಿ ಟೆಕ್ಕಿಗಳು ಭಾಗಿ, CCB ದಾಳಿ ವೇಳೆ ಡ್ರಗ್ಸ್ ಪತ್ತೆ

ಐಟಿ ಸಿಟಿ ಬೆಂಗಳೂರಿನಲ್ಲಿ ವಾರಾಂತ್ಯ ನಡೆದ ರೇವ್ ಪಾರ್ಟಿ ಮೇಲೆ ನಗರ ಅಪರಾಧ ದಳ ವಿಭಾಗ ಪೊಲೀಸರು ದಾಳಿ ನಡೆಸಿದ್ದಾರೆ. ಎಕ್ಟ್ರಾನಿಕ್ ಸಿಟಿ ಬಳಿಯ ಜಿ ಆರ್.ಫಾರ್ಮ್​​​ಹೌಸ್​​ನಲ್ಲಿ ನಡೆಯುತ್ತಿದ್ದ ರೇವ್​​ಪಾರ್ಟಿ ಮೇಲೆ ಸಿಸಿಬಿ ತಂಡ ನಸುಕಿನ ಜಾವ 3 ಗಂಟೆ ಸುಮಾರಿಗೆ ದಾಳಿ ನಡೆಸಿದ್ದು, ದಾಳಿ ವೇಳೆ ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿದೆ.

ಬೆಂಗಳೂರು: ಐಟಿ ಸಿಟಿ ಬೆಂಗಳೂರಿನಲ್ಲಿ ವಾರಾಂತ್ಯ ನಡೆದ ರೇವ್ ಪಾರ್ಟಿ ಮೇಲೆ ನಗರ ಅಪರಾಧ ದಳ ವಿಭಾಗ ಪೊಲೀಸರು ದಾಳಿ ನಡೆಸಿದ್ದಾರೆ. ಎಕ್ಟ್ರಾನಿಕ್ ಸಿಟಿ ಬಳಿಯ ಜಿ ಆರ್.ಫಾರ್ಮ್​​​ಹೌಸ್​​ನಲ್ಲಿ ನಡೆಯುತ್ತಿದ್ದ ರೇವ್​​ಪಾರ್ಟಿ ಮೇಲೆ ಸಿಸಿಬಿ ತಂಡ ನಸುಕಿನ ಜಾವ 3 ಗಂಟೆ ಸುಮಾರಿಗೆ ದಾಳಿ ನಡೆಸಿದ್ದು, ದಾಳಿ ವೇಳೆ ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿದೆ. ಪಾರ್ಟಿಯಲ್ಲಿ ಕೆಲ ಮಾಡೆಲ್ ಗಳು, ಟೆಕ್ಕಿಗಳು, ತೆಲುಗು ನಟಿಯರು ಭಾಗಿಯಾಗಿದ್ದರು ಎಂದು ಗೊತ್ತಾಗಿದೆ.

ಪಾರ್ಟಿ ನಡೆಸಿದ್ದು ಯಾರು?: ಕಾನ್ ಕಾರ್ಡ್ ಗೋಪಾಲ ರೆಡ್ಡಿ ಎಂಬುವವರ ಮಾಲಿಕತ್ವದ ಜಿ ಆರ್.ಫಾರ್ಮ್​​​ಹೌಸ್​​ನಲ್ಲಿ ಹೈದರಾಬಾದ್ ಮೂಲದ ವಾಸು ಎಂಬಾತ ಪಾರ್ಟಿ ಆಯೋಜನೆ ಮಾಡಿದ್ದ. ಬರ್ತಡೇ ಪಾರ್ಟಿ ಹೆಸರಿನಲ್ಲಿ ನಡೆಯುತ್ತಿದ್ದ ಈ ಪಾರ್ಟಿ ತಡರಾತ್ರಿ 2 ಗಂಟೆಯಾದ್ರೂ ಮುಗಿದಿರಲಿಲ್ಲ. ಅವಧಿ ಮೀರಿ ಪಾರ್ಟಿ ಮಾಡಲಾಗುತ್ತಿರುವ ಸುದ್ದಿ ತಿಳಿದ ಸಿಸಿಬಿಯ ಆಂಟಿ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದಾಗ ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿದೆ.

ದಾಳಿ ವೇಳೆ 17 ಎಂಡಿಎಂಎ ಮಾತ್ರೆ, ಕೊಕೇನ್ ಪತ್ತೆಯಾಗಿದೆ. ಆಂಧ್ರ, ಬೆಂಗಳೂರು ಮೂಲದ 100ಕ್ಕೂ ಹೆಚ್ಚು ಜನ ಮತ್ತು 25ಕ್ಕೂ ಹೆಚ್ಚು ಯುವತಿಯರು ಪಾರ್ಟಿಯಲ್ಲಿ ಭಾಗಿಯಾಗಿದ್ದು ತಿಳಿದುಬಂದಿದೆ.

ಬೆಂಜ್ ಕಾರಿನಲ್ಲಿ ಆಂಧ್ರ ಶಾಸಕನ ಪಾಸ್ ಪತ್ತೆಯಾಗಿದೆ. ಎಂಎಲ್​ಎ ಕಾಕನಿ ಗೋವರ್ಧನರೆಡ್ಡಿ ಹೆಸರಿನ ಪಾಸ್ ಸಿಕ್ಕಿದೆ. ಜೊತೆಗೆ ದಾಳಿ ನಡೆದ ಫಾರ್ಮ್​​​ಹೌಸ್ ಬಳಿ ಮರ್ಸಿಡಿಸ್-ಬೆನ್ಜ್, ಜಾಗ್ವಾರ್, ಆಡಿ ಕಾರ್ ಸೇರಿದಂತೆ 15ಕ್ಕೂ ಹೆಚ್ಚು ಐಷಾರಾಮಿ ಕಾರುಗಳು ಪತ್ತೆಯಾಗಿವೆ. ಪಾರ್ಟಿಯಲ್ಲಿ ಮಾಡೆಲ್​​ಗಳು, ಟೆಕ್ಕಿಗಳು ತೆಲುಗು ನಟಿಯರು ಸೇರಿದಂತೆ ಅನೇಕರು ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.

ಪೊಲೀಸರು ಪಾರ್ಟಿಯಲ್ಲಿ ಭಾಗಿಯಾದವರ ಗುರುತು ಪತ್ತೆ ಮಾಡುತ್ತಿದ್ದಾರೆ. ಎಲೆಕ್ಟ್ರಾನಿಕ್​​ಸಿಟಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT