ನಿಖಿಲ್ ಕುಮಾರಸ್ವಾಮಿ 
ರಾಜ್ಯ

ಮಾಜಿ ಪ್ರಧಾನಿ ದೇವೇಗೌಡರ ಸಾವು ಬಯಸುವ ಶಿವರಾಮೇಗೌಡರದ್ದು ಹೀನ ಸಂಸ್ಕೃತಿ: Nikhil

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಸಾವು ಬಯಸುವ ಎಲ್ ಆರ್ ಶಿವರಾಮೇಗೌಡ ಅವರದ್ದು ಹೀನ ಸಂಸ್ಕೃತಿ ಎಂದು ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಸಾವು ಬಯಸುವ ಎಲ್ ಆರ್ ಶಿವರಾಮೇಗೌಡ ಅವರದ್ದು ಹೀನ ಸಂಸ್ಕೃತಿ ಎಂದು ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ನಿಖಿಲ್, ಎಲ್ ಆರ್ ಶಿವರಾಮೇಗೌಡ ಮಾತಾಡುವಾಗ ಸಭ್ಯತೆ ಮರೆಯೋದು ಹೊಸದೇನಲ್ಲ, ಕೇಡು ಬಯಸಿ ಆಡಿರುವ ಮಾತಿನ ಆಡಿಯೋ ವೈರಲ್ ಆಗಿದೆ. ಶಿವರಾಮೇಗೌಡರ ಮಾತುಗಳನ್ನು ಕೇಳಿರುವ ಜನಕ್ಕೆ ಎಂಥ ರಾಜಕಾರಣಿ ಅಂತ ಗೊತ್ತಾಗಿದೆ .ವಿಷಯಾಧಾರಿತ ರಾಜಕಾರಣ ಮಾಡಿ ಗೊತ್ತಿರದ ಮತ್ತು ಒಬ್ಬ ಮಾಜಿ ಪ್ರಧಾನಿಯ ಹಾಗೂ ರಾಜ್ಯದ ಹಿರಿಯ ಮುತ್ಸದ್ದಿಯ ಸಾವು ಬಯಸುವ ಅವರೊಬ್ಬ ಸಂಸ್ಕೃತಿಹೀನ ವ್ಯಕ್ತಿ ಎಂದು ನಿಖಿಲ್ ಹೇಳಿದರು.

ಹೆಚ್ ಡಿ ಕುಮಾರಸ್ವಾಮಿಯವರಿಗೆ ಕೇವಲ ತಮ್ಮ ಮಗನ ಭವಿಷ್ಯದ ಬಗ್ಗೆ ಮಾತ್ರ ಯೋಚನೆ ಇದೆ ಅಂತಲೂ ಅವರು ಹೇಳಿದ್ದಾರೆ, ಆದರೆ ತಮ್ಮ ತಂದೆ ಯಾವತ್ತೂ ಹಾಗೆ ಯೋಚಿಸಿಲ್ಲ. ಬೇರೆಯವರ ಹಾಗೆ ಕುಮಾರಸ್ವಾಮಿಯವರು ಹೊಂದಾಣಿಕೆ ರಾಜಕಾರಣ ಮಾಡಿದ್ದರೆ, ತಾನು ಯಾವುದೋ ಉನ್ನತ ಸ್ಥಾನದಲ್ಲಿರುತ್ತಿದ್ದೆ, ರಾಜಕಾರಣದಲ್ಲಿ ಪರಿಶ್ರಮ ವಹಿಸಿ ತನ್ನ ಐಡೆಂಟಿಟಿ ಸೃಷ್ಟಿಸಿಕೊಳ್ಳುವ ಪ್ರಯತ್ನ ಮಾಡುತ್ತಿರುವೆನೆಂದು ಹೇಳಿದರು. ರಾಜಕಾರಣ ಮಾಡಲಿ, ಆದರೆ ಈ ರೀತಿಯ ನೀಚ ರಾಜಕಾರಣ ಮಾಡಬಾರದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT