ಎಚ್.ಡಿ. ರೇವಣ್ಣ 
ರಾಜ್ಯ

ಮನೆ ಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣಗೆ ಜಾಮೀನು

ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಮಧ್ಯ ವಯಸ್ಸಿನ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಎಚ್. ಡಿ. ರೇವಣ್ಣ ಅವರಿಗೆ ನಗರದ 24ನೇ ಎಸಿಎಂಎಂ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರು: ಹೊಳೆ ನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ. ತಮ್ಮ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಮಧ್ಯ ವಯಸ್ಸಿನ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಎಚ್. ಡಿ. ರೇವಣ್ಣ ಅವರಿಗೆ ನಗರದ 24ನೇ ಎಸಿಎಂಎಂ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ.

ಈ ಕುರಿತು ಕಾಯ್ದಿರಿಸಲಾಗಿದ್ದ ಆದೇಶವನ್ನು ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ವಿಚಾರಣೆಯ (42ನೇ ಎಸಿಎಂಎಂ ಕೋರ್ಟ್ ) ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜೆ. ಪ್ರೀತ್ ಅವರು ಪ್ರಕಟಿಸಿದರು. ರೂ. 5 ಲಕ್ಷ ಮೊತ್ತದ ಬಾಂಡ್ ಹಾಗೂ ಇಷ್ಟೇ ಮೊತ್ತರ ಒಬ್ಬರ ಶ್ಯೂರಿಟಿ ಒದಗಿಸುವುದು ಸೇರಿದಂತೆ ಮತ್ತಿತರ ಷರತ್ತುಗಳನ್ನು ವಿಧಿಸಲಾಗಿದೆ.

ಈ ಮೊದಲು ಇದೇ ನ್ಯಾಯಾಲಯ ನೀಡಿದ್ದ ಮಧ್ಯಂತರ ಜಾಮೀನಿಗೆ ಪ್ರಾಸಿಕ್ಯೂಷನ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅಂತೆಯೇ ಈ ಅರ್ಜಿಯು, ಪರಿಶೀಲನೆಗೆ ಅರ್ಹವೊ ಅಲ್ಲವೋ ಎಂಬ ಆಕ್ಷೇಪದ ಮೇಲಿನ ವಾದ- ಪ್ರತಿವಾದ ಆಲಿಸಿ ಆದೇಶವನ್ನು ಕಾಯ್ದಿರಿಸಿತ್ತು.

ರೇವಣ್ಣ ಮತ್ತು ಅವರ ಪುತ್ರ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು 47 ವರ್ಷದ ಮನೆ ಕೆಲಸದಾಕೆ ವಿರುದ್ಧ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಕುರಿತು ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 28 ರಂದು ದೂರು ದಾಖಲಿಸಲಾಗಿತ್ತು.

ಪ್ರಜ್ವಲ್ ರೇವಣ್ಣ ಏಪ್ರಿಲ್ 27 ರಂದು ಜರ್ಮನಿಗೆ ತೆರಳಿದ್ದಾರೆ ಎಂದು ವರದಿಯಾಗಿದೆ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅವರ ವಿರುದ್ಧ ಬಂಧನ ವಾರಂಟ್ ಕೂಡ ಹೊರಡಿಸಲಾಗಿದೆ. ಪರಾರಿಯಾಗಿರುವ ಪ್ರಜ್ವಲ್ ವಿರುದ್ಧ ಇಂಟರ್ ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ.

ಹೆಚ್.ಡಿ.ರೇವಣ್ಣ ಅವರನ್ನು ಮೇ 4 ರಂದು ಬಂಧಿಸಲಾಗಿತ್ತು. ಬಳಿಕ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಅವರ ನ್ಯಾಯಾಂಗ ಬಂಧನ ಅಂತ್ಯದ ವೇಳೆಗೆ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT