ಸಾಂದರ್ಭಿಕ ಚಿತ್ರ 
ರಾಜ್ಯ

ನೈಸ್ ರಸ್ತೆಯಲ್ಲಿ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಗರದ ಪಶ್ಚಿಮ ಭಾಗದ ನೈಸ್ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಪ್ರಯಾಣಿಕ ಗಾಯಗೊಂಡಿರುವ ಘಟನೆ ನಡೆದಿದೆ.

ಬೆಂಗಳೂರು: ನಗರದ ಪಶ್ಚಿಮ ಭಾಗದ ನೈಸ್ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಪ್ರಯಾಣಿಕ ಗಾಯಗೊಂಡಿರುವ ಘಟನೆ ನಡೆದಿದೆ. ವಿನಾಯಕ್ (20) ಮತ್ತು ಗಿರೀಶ್ (22) ಜಿಗಣಿಯಲ್ಲಿ ಮನೆಯಿಂದ ತುಮಕೂರಿಗೆ ತೆರಳುತ್ತಿದ್ದಾಗ ಮಂಗನಹಳ್ಳಿ ಬಳಿ ವಾಹನ ಡಿಕ್ಕಿ ಹೊಡೆದು ವೇಗವಾಗಿ ಹೋಗಿದೆ. ಇದರಿಂದ ವಿನಾಯಕ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಿರೀಶ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಇಬ್ಬರೂ ನಗರದ ಹೊರವಲಯದಲ್ಲಿರುವ ತಾಂತ್ರಿಕ ಸಂಸ್ಥೆಯಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದರು ಎಂದು ಜ್ಞಾನಭಾರತಿ ಸಂಚಾರ ಪೊಲೀಸರು ತಿಳಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಿದ್ದರೆ ಪರಿಶೀಲಿಸಲಾಗುವುದು, ಯಾವುದೇ ಪ್ರತ್ಯಕ್ಷದರ್ಶಿಗಳಿಂದ ವಿವರ ಪಡೆಯಲಾಗುವುದು ಎಂದು ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. "ಅಪಘಾತ ಹೇಗೆ ಸಂಭವಿಸಿತು ಎಂಬುದು ಖಚಿತವಾಗಿಲ್ಲ. ಅವರ ಕೂಡಾ ವೇಗವಾಗಿ ಚಲಿಸುತ್ತಿದ್ದರೆಂಬ ಅನುಮಾನವಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT