ಮರವೇರಿ ಮಾವು ಕಿತ್ತ ಜನಾರ್ಧನ್ ರೆಡ್ಡಿ 
ರಾಜ್ಯ

ಪ್ರೀತಿಯ ಪತ್ನಿಗಾಗಿ ಮರವೇರಿ ಮಾವು ಕಿತ್ತ Janardhan Reddy: ವಿಡಿಯೊ ವೈರಲ್

ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಗಣಿ ಧಣಿ ಜನಾರ್ಧನ ರೆಡ್ಡಿ ಮತ್ತೆ ಸುದ್ದಿಯಲ್ಲಿದ್ದು ಈ ಬಾರಿ ತಮ್ಮ ಪ್ರೀತಿಯ ಮಡದಿಗಾಗಿ ಮಾವು ಕೀಳಲು ಮರವೇರಿ ಸುದ್ದಿಗೆ ಗ್ರಾಸವಾಗಿದ್ದಾರೆ.

ಗಂಗಾವತಿ: ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಗಣಿ ಧಣಿ ಜನಾರ್ಧನ ರೆಡ್ಡಿ ಮತ್ತೆ ಸುದ್ದಿಯಲ್ಲಿದ್ದು ಈ ಬಾರಿ ತಮ್ಮ ಪ್ರೀತಿಯ ಮಡದಿಗಾಗಿ ಮಾವು ಕೀಳಲು ಮರವೇರಿ ಸುದ್ದಿಗೆ ಗ್ರಾಸವಾಗಿದ್ದಾರೆ.

ಹೌದು.. ಗಂಗಾವತಿ ಶಾಸಕ ಜಿ. ಜನಾರ್ದನರೆಡ್ಡಿ (Janardhan Reddy) ತಮ್ಮ ಪ್ರೀತಿಯ ಮಡದಿಗಾಗಿ ಮಾವು ಕೀಳಲು ಮರವೇರಿರುವ ಹಳೆಯ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿ ಪತ್ನಿ ಲಕ್ಷ್ಮಿ ಅರುಣಾರೊಂದಿಗೆ ತಮ್ಮ ಮಾವಿನ ತೋಟದಲ್ಲಿ ವಿಹರಿಸುತ್ತಿರುವಾಗ ಜನಾರ್ದನರೆಡ್ಡಿ ಮಾವಿನ ಮರವನ್ನು ಪ್ರಯಾಸಪಟ್ಟು ಏರಿ ಕಾಯಿಯೊಂದನ್ನು ಕಿತ್ತು ಪತ್ನಿಯ ಕೈಗಿಡುತ್ತಾರೆ. ಮರದ ಟೊಂಗೆಗಳ ಮೇಲೆ ಶಾಸಕ ರೆಡ್ಡಿ ಜಾಗ್ರತೆಯಿಂದ ಹೆಜ್ಜೆ ಇಡುತ್ತಾ, ಬ್ಯಾಲೆನ್ಸ್ ಮಾಡಿ ಕಾಯಿ ಕಿತ್ತು, ಮರಳಿ ಮರ ಇಳಿಯುವಾಗ ತಮ್ಮ ಬಾಲ್ಯವನ್ನು ನೆನೆಸಿಕೊಂಡು ಇಳಿಯಲು ಪ್ರಯಾಸ ಪಡುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಸದ್ಯ ಮಾವಿನ ಹಣ್ಣಿನ ಸೀಸನ್‌ ಆಗಿರುವುದರಿಂದ ತರಹೇವಾರಿ ಹಣ್ಣುಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ. ಈ ನಡುವೆ ಜನಾರ್ದನ ರೆಡ್ಡಿ ಅವರು ಮಡದಿಗಾಗಿ ಮಾವಿನ ಕಾಯಿ ಕಿತ್ತುಕೊಟ್ಟಿರುವ ಹಳೆಯ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಎಂಆರ್ ರಾಧಾಕೃಷ್ಣ ರೆಡ್ಡಿ ಎನ್ನುವವರು ಈ ವಿಡಿಯೋವನ್ನು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದು 2019ರಲ್ಲಿ ರೆಡ್ಡಿ ಅವರ ಮಾವಿನ ತೋಟದಲ್ಲಿ ತೆಗೆದಿರುವ ವಿಡಿಯೊ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!