ರೇಸ್ ಕೋರ್ಸ್ ರಸ್ತೆಯಲ್ಲಿರುವ ಗುಂಡಿ 
ರಾಜ್ಯ

BBMP 8 ವಲಯಗಳ ವ್ಯಾಪ್ತಿಯಲ್ಲಿರುವ 5500 ರಸ್ತೆಗುಂಡಿ ಮುಚ್ಚಲು ಕ್ರಮ: ತುಷಾರ್ ಗಿರಿನಾಥ್

ರಸ್ತೆ ಗುಂಡಿಗಳನ್ನು ತುಂಬಿಸಲು ವಲಯ ಆಯುಕ್ತರು ತಮ್ಮ ವ್ಯಾಪ್ತಿಯಲ್ಲಿ ಗುತ್ತಿಗೆದಾರರನ್ನು ನೇಮಿಸಿಕೊಂಡಿದ್ದು, ಕಾಮಗಾರಿ ನಡೆಯುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಕೆಲವು ದಿನಗಳಲ್ಲಿ ಮಳೆಯ ಮುನ್ಸೂಚನೆ ನೀಡಿದೆ.

ಬೆಂಗಳೂರು: ಬಿಬಿಎಂಪಿಯ ಎಂಟು ವಲಯಗಳಲ್ಲಿ 5,500 ಕ್ಕೂ ಹೆಚ್ಚು ಹೊಸ ಗುಂಡಿಗಳಿವೆ. ಮುಖ್ಯ ಮತ್ತು ಉಪಮುಖ್ಯ ರಸ್ತೆಗಳಲ್ಲಿ 670 ಗುಂಡಿಗಳು ಮತ್ತು 66 ಕೆಟ್ಟ ತೇಪೆಗಳಿದ್ದು, ಹೊಂಡಗಳನ್ನು ಸರಿಪಡಿಸಲು ಬಿಬಿಎಂಪಿ ಈಗಾಗಲೇ 5,000 ಬ್ಯಾಗ್ ಕೋಲ್ಡ್ ಮಿಕ್ಸ್‌ಗೆ ವ್ಯವಸ್ಥೆ ಮಾಡಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತರು ತಿಳಿಸಿದ್ದಾರೆ.

ತುಷಾರ್ ಗಿರಿನಾಥ್ ಮಾತನಾಡಿ, ಭಾನುವಾರ ಸುರಿದ ಭಾರೀ ಮಳೆಗೆ ಯಲಹಂಕ ವಲಯದ ವಿಲ್ಲಾಗಳು ಜಲಾವೃತಗೊಂಡಿವೆ. ಗುಂಡಿಗಳನ್ನು ತುಂಬಿಸಲು ವಲಯ ಆಯುಕ್ತರು ತಮ್ಮ ವ್ಯಾಪ್ತಿಯಲ್ಲಿ ಗುತ್ತಿಗೆದಾರರನ್ನು ನೇಮಿಸಿಕೊಂಡಿದ್ದು, ಕಾಮಗಾರಿ ನಡೆಯುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಕೆಲವು ದಿನಗಳಲ್ಲಿ ಮಳೆಯ ಮುನ್ಸೂಚನೆ ನೀಡಿದೆ. ವಲಯ ಎಂಜಿನಿಯರ್‌ಗಳು ನಾಲ್ಕೈದು ದಿನಗಳಲ್ಲಿ ಆಯಾ ವಲಯದ ಸುಮಾರು 500 ರಿಂದ 800 ಗುಂಡಿಗಳನ್ನು ಮುಚ್ಚುತ್ತಾರೆ ಎಂದು ಗಿರಿನಾಥ್ ಹೇಳಿದರು.

74 ದುರ್ಬಲ ಸ್ಥಳಗಳಿದ್ದು, 47 ಸ್ಥಳಗಳಲ್ಲಿ ಮಳೆಯ ಸಂದರ್ಭದಲ್ಲಿ ತೀವ್ರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಅವರು ಮಾಹಿತಿ ನೀಡಿದರು. “ನಾವು ಈಗಾಗಲೇ ತಾತ್ಕಾಲಿಕ ವ್ಯವಸ್ಥೆಗಳನ್ನು ಮಾಡಿದ್ದೇವೆ. 2023ರ ಜನವರಿಯಲ್ಲಿ 2000 ಕೋಟಿ ರೂ.ಗಳ ರಾಜಕಾಲುವೆ ಅಭಿವೃದ್ಧಿ ಕಾಮಗಾರಿ ಆರಂಭಗೊಂಡಿದ್ದು, ಒಮ್ಮೆ ಪೂರ್ಣಗೊಂಡರೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಹೇಳಿದರು. ಪ್ರವಾಹದಿಂದ ಹಾನಿಗೊಳಗಾದ ನಾರ್ತ್‌ವುಡ್ ವಿಲ್ಲಾಗಳು ಮತ್ತು ರಮಣಶ್ರೀ ಲೇಔಟ್ ಗಳ ಕುರಿತು ತುಷಾರ್ ಗಿರಿನಾಥ್ ಮಾಹಿತಿ ನೀಡಿದರು.

ಯಲಹಂಕ ವಲಯದಲ್ಲಿರುವ ಗಾರ್ಡೇನಿಯಾ ಲೇಔಟ್. ಬಿಬಿಎಂಪಿಯ 110 ಗ್ರಾಮಗಳ ಘಟಕದ ಅಡಿಯಲ್ಲಿ ಒಳಚರಂಡಿ ಮಾರ್ಗವನ್ನು ಒಳಗೊಂಡಿಲ್ಲ ಎಂದು ಅವರು ಹೇಳಿದರು. ಒಂದು ವರ್ಷದ ಹಿಂದೆ, ಚರಂಡಿಗಳಿಂದ ಬರುವ ನೀರು ತೆರೆದ ಪ್ರದೇಶಗಳಿಗೆ ಪ್ರವೇಶಿಸಿದ್ದರಿಂದ ಪ್ರವಾಹ ಇರಲಿಲ್ಲ. ಈಗ ಹೊಸ ಕಟ್ಟಡಗಳ ನಿರ್ಮಾಣವಾದ್ದರಿಂದ ಪ್ರವಾಹ ಉಂಟಾಗಿದೆ. ಬಿಬಿಎಂಪಿಯು ಮಳೆನೀರು ಚರಂಡಿ ಸಂಪರ್ಕ ಕಲ್ಪಿಸುತ್ತಿದ್ದು, ಪುಟ್ಟೇನಹಳ್ಳಿ ಕೆರೆಯ ಒಳಭಾಗದಲ್ಲಿ ಒಳಚರಂಡಿಯನ್ನು ಹಾಕಲು ಅರಣ್ಯ ಇಲಾಖೆ ಅನುಮತಿ ನಿರಾಕರಿಸಿದ್ದರಿಂದ ಯೋಜನೆ ವಿಳಂಬವಾಗಿದೆ ಎಂದರು.

ಅರಣ್ಯ ಇಲಾಖೆ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮತ್ತಿತರರು ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸಿದರು. ಬಿಬಿಎಂಪಿಯು ಪುಟ್ಟೇನಹಳ್ಳಿ ಕೆರೆಯ ಪಕ್ಕದಲ್ಲಿ 520 ಮೀಟರ್ ಉದ್ದದ 1,600 ಎಂಎಂ ಪೈಪ್‌ಲೈನ್ ಅನ್ನು ಸ್ಥಾಪಿಸುತ್ತದೆ ಮತ್ತು ಮಳೆಯ ಸಮಯದಲ್ಲಿ ಹೆಚ್ಚಿನ ಪ್ರವಾಹ ಉಂಟಾಗದಂತೆ ರಾಜ ಕಾಲುವೆಯನ್ನು ಸಂಪರ್ಕಿಸುತ್ತದೆ. ಅಲ್ಲಿಯವರೆಗೆ ಪಂಪ್‌ಸೆಟ್ ಬಳಸಿ ಹೆಚ್ಚುವರಿ ನೀರನ್ನು ತೆರವುಗೊಳಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT