ಸಾಂದರ್ಭಿಕ ಚಿತ್ರ 
ರಾಜ್ಯ

CAA: ಪೌರತ್ವಕ್ಕಾಗಿ ಕರ್ನಾಟಕದ 145 ಮಂದಿ ಅರ್ಜಿ, ರಾಯಚೂರಿನಿಂದಲೇ ಹೆಚ್ಚು ಸಲ್ಲಿಕೆ!

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿಯಲ್ಲಿ ಕರ್ನಾಟಕದಲ್ಲಿ 145 ಮಂದಿ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಅವರು ತಮ್ಮ ಅರ್ಜಿಗಳನ್ನು ಅಂಚೆ ಇಲಾಖೆಗೆ ಕಳುಹಿಸಿದ್ದಾರೆ ಎಂದು ಅಂಚೆ ಮೂಲಗಳು ತಿಳಿಸಿವೆ.

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿಯಲ್ಲಿ ಕರ್ನಾಟಕದಲ್ಲಿ 145 ಮಂದಿ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಅವರು ತಮ್ಮ ಅರ್ಜಿಗಳನ್ನು ಅಂಚೆ ಇಲಾಖೆಗೆ ಕಳುಹಿಸಿದ್ದಾರೆ ಎಂದು ಅಂಚೆ ಮೂಲಗಳು ತಿಳಿಸಿವೆ. ಅಚ್ಚರಿ ಎಂದರೆ ಇವರೆಲ್ಲ ರಾಜ್ಯದ ಎರಡು ಜಿಲ್ಲೆಗಳವರಾಗಿದ್ದಾರೆ.

ರಾಯಚೂರಿನಿಂದ 143 ಮತ್ತು ದಕ್ಷಿಣ ಕನ್ನಡದಿಂದ ಎರಡು ಅರ್ಜಿಗಳು ಬಂದಿವೆ. ಅವರಲ್ಲಿ ಹೆಚ್ಚಿನವರು ಪಾಕಿಸ್ತಾನದ ಹಿಂದೂಗಳು. ಇದು ನಿರಂತರ ಪ್ರಕ್ರಿಯೆಯಾಗಿರುವುದರಿಂದ ಅರ್ಜಿಗಳನ್ನು ಕಳುಹಿಸಲು ಯಾವುದೇ ಗಡುವು ಇರುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ಈ ವ್ಯಕ್ತಿಗಳು ರಾಯಚೂರಿಗೆ ಯಾವಾಗ ಸ್ಥಳಾಂತರಗೊಂಡರು ಎಂಬುದು ನಮಗೆ ತಿಳಿದಿಲ್ಲ, ಆದರೆ ನಮ್ಮ ವಿಭಾಗೀಯ ಕಚೇರಿಗೆ 143 ಅರ್ಜಿಗಳು ಬಂದಿವೆ. ಬೆಂಗಳೂರಿನಲ್ಲಿ ನಾಲ್ಕು ವಿಭಾಗೀಯ ಕಚೇರಿಗಳಿದ್ದು, ಒಂದು ಅರ್ಜಿಯನ್ನೂ ಸ್ವೀಕರಿಸಿಲ್ಲ ಎಂದು ಮತ್ತೊಂದು ಮೂಲ ತಿಳಿಸಿದೆ. ಡಿಸೆಂಬರ್ 31, 2014 ರ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ CAA ಭಾರತೀಯ ಪೌರತ್ವವನ್ನು ನೀಡುತ್ತದೆ. ಈ ವರ್ಷದ ಮಾರ್ಚ್ 11 ರಂದು ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ಜಾರಿಗೊಳಿಸಿದ ನಂತರ, ಅಧಿಸೂಚನೆಯನ್ನು ಹೊರಡಿಸಲಾಯಿತು. ಅಂಚೆ ಮತ್ತು ರೈಲ್ವೆ ನೌಕರರಿಗೆ ಪ್ರಮಾಣಪತ್ರಗಳನ್ನು ಪರಿಶೀಲಿಸಲು ಮತ್ತು ವಿತರಿಸಲು ಅಧಿಕಾರ ನೀಡಲಾಗಿದೆ.

ದೇಶಾದ್ಯಂತ ಸುಮಾರು 12,000 ಮಂದಿ ಅರ್ಜಿ ಸಲ್ಲಿಸಿದ್ದು, ಇತ್ತೀಚೆಗೆ 300 ಮಂದಿಗೆ ಪೌರತ್ವ ಪ್ರಮಾಣಪತ್ರಗಳನ್ನು ಹಸ್ತಾಂತರಿಸಲಾಗಿದೆ. ಅರ್ಜಿದಾರರು ಎಲ್ಲಾ ಅಗತ್ಯ ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಬೇಕಾಗುತ್ತದೆ.

ಮೊದಲ ವೈಯಕ್ತಿಕ appointment ಮೇ 25 ರಂದು ರಾಯಚೂರಿನಲ್ಲಿ ನಡೆಯುತ್ತದೆ ಮತ್ತು ಅರ್ಜಿದಾರರು ಎಲ್ಲಾ ಮೂಲ ದಾಖಲೆಗಳನ್ನು ಒದಗಿಸುವ ನಿರೀಕ್ಷೆಯಿದೆ. ಒಂದು ದಿನದಲ್ಲಿ 28 appointment ನೀಡಿರುವುದರಿಂದ ಎಲ್ಲಾ ಅರ್ಜಿಗಳನ್ನು ಮೇ 31 ರೊಳಗೆ ಪೂರ್ಣಗೊಳಿಸಲು ಅಂಚೆ ಸಿಬ್ಬಂದಿ ಯೋಜಿಸಿದ್ದಾರೆ. ದಕ್ಷಿಣ ಕನ್ನಡ ಅಧಿಕಾರಿಗಳು ಜೂನ್ 5 ರಂದು ಇಬ್ಬರು ಅರ್ಜಿದಾರರಿಗೆ appointment ನೀಡಿದ್ದಾರೆ, ಜೂನ್ 5 ರೊಳಗೆ ಅಂಚೆ ಇಲಾಖೆಯ ಕೆಲಸ ಮುಗಿಯುತ್ತದೆ ಎಂದು ಅವರು ಹೇಳಿದರು.

ಪ್ರಕ್ರಿಯೆ ಮುಗಿದ ನಂತರ ಅಂಚೆ ಇಲಾಖೆಯು ಅರ್ಜಿಗಳನ್ನು ರಾಜ್ಯ ಮಟ್ಟದ ಅಧಿಕಾರ ಸಮಿತಿಗೆ ಕಳುಹಿಸಲಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ. ಅವರು ಅದನ್ನು ಮತ್ತೊಮ್ಮೆ ಪರಿಶೀಲಿಸುತ್ತಾರೆ ಮತ್ತು ಪರಿಶೀಲನೆಯ ವಿವರಗಳು ಮತ್ತು ದಾಖಲೆಗಳನ್ನು ಸಿಎಎ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ. ಗೃಹ ಸಚಿವಾಲಯವು ಅರ್ಜಿಗಳ ಕುರಿತು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ಬ್ರದರ್ ನಿಮಗೆ ತೊಂದರೆಯಾಗಿದ್ದರೆ ಇರಾನ್‌ಗೆ ಹೋಗಿ ಹೋರಾಡಿ: ಯುಪಿ ಪೊಲೀಸ್ ಅಧಿಕಾರಿ ಹೀಗೆ ಹೇಳಿದ್ದು ಯಾರಿಗೆ?

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಬಂದ್! ಇಂದಿರಾ ಕ್ಯಾಂಟೀನ್ ನಡೆಯುತ್ತಾ?

ಇಂಧನ ಸುರಕ್ಷತೆ ಕುರಿತು ಇರಾನ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಮೂರು ಬಾರಿ ಮಾತುಕತೆ

SCROLL FOR NEXT